Viral Video: ನಡು ರಸ್ತೆಯಲ್ಲಿ ರೀಲ್ಸ್​ ವಯ್ಯಾರ ಮಾಡ್ತಿದ್ದ ಯುವತಿ.. ಬೈಕಲ್ಲಿ ಬಂದವ ಕ್ಷಣಾರ್ಧದಲ್ಲಿ ಚಿನ್ನದ ಸರ ಎಗರಿಸಿಕೊಂಡುಹೋದ!

ನಡು ರಸ್ತೆಯಲ್ಲಿ ರೀಲ್ಸ್​ ವಯ್ಯಾರ ಮಾಡ್ತಿದ್ದ ಯುವತಿ.. ಬೈಕಲ್ಲಿ ಬಂದವ ಕ್ಷಣಾರ್ಧದಲ್ಲಿ ಚಿನ್ನದ ಸರ ಎಗರಿಸಿಕೊಂಡುಹೋದ!

Viral Video: ನಡು ರಸ್ತೆಯಲ್ಲಿ ರೀಲ್ಸ್​ ವಯ್ಯಾರ ಮಾಡ್ತಿದ್ದ ಯುವತಿ.. ಬೈಕಲ್ಲಿ ಬಂದವ ಕ್ಷಣಾರ್ಧದಲ್ಲಿ ಚಿನ್ನದ ಸರ ಎಗರಿಸಿಕೊಂಡುಹೋದ!
ರೀಲ್ಸ್​ ಮಾಡ್ತಿದ್ದ ಯುವತಿ.. ಬೈಕಲ್ಲಿ ಬಂದವ ಚಿನ್ನದ ಸರ ಎಗರಿಸಿಕೊಂಡುಹೋದ!
Follow us
| Updated By: ಸಾಧು ಶ್ರೀನಾಥ್​

Updated on:Mar 25, 2024 | 2:53 PM

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ನಡು ರಸ್ತೆಯಲ್ಲಿ ಯುವತಿಯೊಬ್ಬಳು ಸಾಮಾಜಿಕ ಜಾಲತಾಣಗಳಿಗೆ ವಯ್ಯಾರದಿಂದ ರೀಲ್ಸ್​​ ಮಾಡುತ್ತಿದ್ದಾಗ ಯಾವೊದೋ ಮಾಯದಲ್ಲಿ ಬಂದ ಬೈಕ್ ಸವಾರ ಆಕೆಯ ಕೊರಳಲ್ಲಿದ್ದ ಚೈನ್ ಕಿತ್ತೊಕೊಂಡು ಪರಾರಿಯಾಗಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕೆಲವರು ಇದನ್ನು ರೀಲ್ಸ್​​ ಹುಚ್ಚುತನ ಎಂದು ಜರಿದರೆ, ಇತರರು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ರಸ್ತೆ ಮಧ್ಯೆ ತಮ್ಮ ಮೊಬೈಲ್‌ನಲ್ಲಿ ರೀಲ್ಸ್​​ ಶೂಟ್ ಮಾಡುತ್ತಾ ಹೆಜ್ಜೆ ಮೇಲೆ ಹೆಜ್ಜೆ ಹಾಕುತ್ತಾ ಸಾಗಿದ್ದಾರೆ. ಆಕೆ ನಿಧಾನವಾಗಿ ಕ್ಯಾಮರಾ ಬಳಿ ಬರುತ್ತಿದ್ದಂತೆ ಬೈಕ್ ಸವಾರನೊಬ್ಬ ಬಂದು ಆ ಮಹಿಳೆಯ ಕತ್ತಿನಲ್ಲಿದ್ದ ಸರ ಕಿತ್ತುಕೊಂಡು ಬೈಕಲ್ಲಿ ಪರಾರಿಯಾಗಿದ್ದಾನೆ. ವಿಡಿಯೋ ನೋಡಿದಾಗ ಅದು ರೀಲ್ಸ್​ ಭಾಗವಾಗಿ ಕಂಡುಬಂದಿದೆ, ಆದರೆ ಮಹಿಳೆ ಭಯದಿಂದ ಕಿರುಚಿಕೊಂಡಿರುವುದನ್ನು ನೋಡಿದರೆ ಇದು ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಎಂದು ತಿಳಿದುಬಂದಿದೆ.

ಹೆಲ್ಮೆಟ್ ಹಾಕಿಕೊಂಡು ಬೈಕ್ ನಲ್ಲಿ ಬಂದ ದುಷ್ಕರ್ಮಿ ಸೀದಾ ಮಹಿಳೆಯ ಸಮೀಪಕ್ಕೆ ಬಂದು ಚೈನ್ ಎಳೆದವನೆ ಸ್ಥಳದಿಂದ ಪರಾರಿಯಾಗಿದ್ದಾನೆ. ಆಗಂತಕು ಮಹಿಳೆಯ ಕತ್ತಿನಲ್ಲಿದ್ದ ಮಂಗಳಸೂತ್ರ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ. ಹಗಲು ವೇಳೆಯೇ ರಸ್ತೆಯಲ್ಲಿ ಚೈನ್ ಸ್ನ್ಯಾಚ್ ಮಾಡುವ ಈ ಘಟನೆ ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಎಬ್ಬಿಸಿದರೆ, ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಸುತ್ತ ಏನು ನಡೆಯುತ್ತಿದೆ ಎಂಬುದರ ಪರಿವೆಯೇ ಇಲ್ಲದ ರೀತಿಯಲ್ಲಿ ರೀಲ್‌ಗಳಲ್ಲಿ ನಿರತರಾಗಿದ್ದಾರೆ ಎಂದು ಕೆಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಈ ಘಟನೆಯನ್ನು ನೋಡಿದ ನೆಟಿಜನ್‌ಗಳು ವಿವಿಧ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಏತನ್ಮಧ್ಯೆ, ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ಗಾಜಿಯಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Mon, 25 March 24

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ