AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಲ್ಸ್‌ ಹಾಸ್ಟೆಲ್‌ ಬಳಿ ಕಾಣಿಸಿಕೊಂಡ 100 ಕೆಜಿ ತೂಕದ ದೈತ್ಯ ಹೆಬ್ಬಾವು; ರಕ್ಷಣಾ ಕಾರ್ಯ ಹೇಗಿತ್ತು ನೋಡಿ…

ಈಗಂತೂ ಹಾವುಗಳು ಜನವಸತಿ ಪ್ರದೇಶಗಳ ಬಳಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿಬಿಟ್ಟಿದೆ. ಅದೇ ರೀತಿ ಅಸ್ಸಾಂ ವಿಶ್ವವಿದ್ಯಾಲಯದ ಗರ್ಲ್ಸ್‌ ಹಾಸ್ಟೆಲ್‌ ಬಳಿಯೂ 17 ಅಡಿ ಉದ್ದ ಹಾಗೂ ಸುಮಾರು 100 ಕೆಜಿ ತೂಕದ ದೈತ್ಯ ಹೆಬ್ಬಾವೊಂದು ಕಾಣಿಸಿಕೊಂಡಿದ್ದು, ಈ ಬೃಹತ್‌ ಹಾವನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿಬಿದ್ದಿದ್ದಾರೆ. ನಂತರ ಈ ಹಾವನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಈ ಕುರಿತ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಗರ್ಲ್ಸ್‌ ಹಾಸ್ಟೆಲ್‌ ಬಳಿ ಕಾಣಿಸಿಕೊಂಡ 100 ಕೆಜಿ ತೂಕದ ದೈತ್ಯ ಹೆಬ್ಬಾವು; ರಕ್ಷಣಾ ಕಾರ್ಯ ಹೇಗಿತ್ತು ನೋಡಿ…
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 23, 2024 | 2:40 PM

Share

ಕಾಡಿನಲ್ಲಿ, ಪೊದೆಗಳಲ್ಲಿರುವ ಹಾವುಗಳು ಆಹಾರವನ್ನರಸುತ್ತಾ ಜನವಸತಿ ಪ್ರದೇಶಗಳ ಕಡೆಗೆ ಆಗಾಗ್ಗೆ ಬರುತ್ತಿರುತ್ತವೆ. ಈಗಂತೂ ದೈತ್ಯ ಹಾವುಗಳು ಅಲ್ಲಲ್ಲಿ ಕಾಣಿಸಿಕೊಳ್ಳುವ ಸುದ್ದಿಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇದೀಗ ಅಸ್ಸಾಂ ವಿಶ್ವವಿದ್ಯಾನಿಲಯದ ಗರ್ಲ್ಸ್‌ ಹಾಸ್ಟೆಲ್‌ ಬಳಿಯು ದೈತ್ಯ ಹೆಬ್ಬಾವೊಂದು ಕಾಣಿಸಿಕೊಂಡಿದೆ. ಹೌದು ಸುಮಾರು 100 ಕೆಜಿ ತೂಕ ಹಾಗೂ 17 ಅಡಿ ಉದ್ದದ ಬರ್ಮೀಸ್‌ ಹೆಬ್ಬಾವು ಪತ್ತೆಯಾಗಿದ್ದು, ಈ ದೈತ್ಯ ಹಾವನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿ ಬಿದ್ದಿದ್ದಾರೆ. ನಂತರ ಈ ಹಾವನ್ನು ರಕ್ಷಣಾ ತಂಡದ ಸಹಾಯದಿಂದ ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಈ ಕುರಿತ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಸಿಲ್ಚಾರ್‌ನಲ್ಲಿರುವ ಅಸ್ಸಾಂ ವಿಶ್ವವಿದ್ಯಾಲಯದ ಗರ್ಲ್ಸ್‌ ಹಾಸ್ಟೆಲ್‌ ಬಳಿ ಡಿಸೆಂಬರ್‌ 18 ರಂದು ರಾತ್ರಿ 10.30 ರ ಸುಮಾರಿಗೆ 100 ಕೆಜಿ ತೂಕದ ಈ ದೈತ್ಯ ಹೆಬ್ಬಾವು ಕಾಣಿಸಿಕೊಂಡಿದೆ. ವನ್ಯಜೀವಿ ಸಂಶೋಧಕ ಮತ್ತು ಸಂರಕ್ಷಣಾ ತಜ್ಞ ಬಿಶಾಲ್‌ ಸೋನರ್‌ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಉರಗ ರಕ್ಷಕ ತ್ರಿಕಲ್‌ ಚಕ್ರವರ್ತಿ ಅವರ ಸಹಾಯದಿಂದ ಹಾವನ್ನು ರಕ್ಷಿಸಿ ಬರೈಲ್ ವನ್ಯಜೀವಿ ಅಭಯಾರಣ್ಯಕ್ಕೆ ಕಳುಸಿಕೊಟ್ಟಿದ್ದಾರೆ. ಅರಣ್ಯ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ನಮ್ಮ ತಂಡದ ಸಹಕಾರದಿಂದ ಈ ದೈತ್ಯ ಹಾವನ್ನು ಯಶಸ್ವಿಯಾಗಿ ಹಿಡಿಯಲು ಸಾಧ್ಯವಾಯಿತು ಎಂದು ಚಕ್ರವರ್ತಿ ಹೇಳಿದ್ದಾರೆ. ‌

ವೈರಲ್​ ವಿಡಿಯೋ ಇಲ್ಲಿದೆ ನೋಡ:

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಶಾಲ್‌ ಸೋನಾರ್‌ ʼಇದು ಬರಾಕ್‌ ಕಣಿವೆ ಪ್ರದೇಶಗಳಲ್ಲಿ ಕಂಡು ಬರುವ ದೈತ್ಯ ಹೆಬ್ಬಾವುಗಳಾಗಿದ್ದು, ಈ ಬರ್ಮೀಸಗ ಹೆಬ್ಬಾವು ಮನುಷ್ಯನಿಗೆ ಯಾವುದೇ ರೀತಿಯ ತೊಂದರೆಯಾಗಲಿ ಅಥವಾ ದಾಳಿಯನ್ನಾಗಲಿ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಾಳಿ ಕಟ್ಟುವ ಪದ್ಧತಿ ಬದಲಿಗೆ ಸಂವಿಧಾನದ ಮೇಲೆ ಪ್ರಮಾಣ ಮಾಡಿ ವಿಶಿಷ್ಟವಾಗಿ ಮದುವೆಯಾದ ನವ ಜೋಡಿ

factostats ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ರಕ್ಷಣಾ ತಂಡದ ಸದಸ್ಯರು ಬರೋಬ್ಬರಿ 17 ಅಡಿ ಉದ್ದದ ಬರ್ಮೀಸ್‌ ಹಾವನ್ನು ರಕ್ಷಿಸುವಂತಹ ದೃಶ್ಯವನ್ನು ಕಾಣಬಹುದು. ಈ ದೈತ್ಯ ಹೆಬ್ಬಾವನ್ನು ಕಂಡು ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ