AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ’: ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು

ಅಸ್ಸಾಂ ಪೊಲೀಸರು ಇಲಾಖೇಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಆಮಂತ್ರಣ ಪತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ರಾಶ್​ ಆಗಿ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಆಮಂತ್ರಣ ಪತ್ರ ಎಂದು ಕ್ಯಾಪ್ಷನ್​ ಬರೆಯಲಾಗಿದೆ.

'ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ': ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು
ಅಸ್ಸಾಂ ಪೊಲೀಸರ ಟ್ವೀಟ್ ಪೋಸ್ಟರ್​
TV9 Web
| Updated By: Pavitra Bhat Jigalemane|

Updated on: Dec 31, 2021 | 9:47 AM

Share

ಇಂದು ಡಿಸೆಂಬರ್​ 31. ವರ್ಷದ ಕೊನೆಯ ದಿನ. ಹೀಗಾಗಿ ಇಯರ್​ ಎಂಡ್​ ಪಾರ್ಟಿಗಳು ಎಲ್ಲೆಡೆ ಜೋರಾಗಿಯೇ ನಡೆಯಲಿದೆ. ಪಾರ್ಟಿ ಮಾಡಿ, ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತಗಳು ನಡೆಯುತ್ತವೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಇದನ್ನು ತಡೆಯಲು ಅಸ್ಸಾಂ ಪೊಲೀಸರು ತಮಾಷೆಯಾಗಿ ಟ್ವೀಟ್ ಮಾಡುವ ಮೂಲಕ ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ್ದಾರೆ. ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಲು ಪ್ರಯತ್ನಿಸಬೇಡಿ ಎಂದು ಪೋಸ್ಟರ್​ ಮಾಡಿ ಟ್ವೀಟ್​  ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್​ ಮಾಡಿದ ಪೋಸ್ಟ್​ ವೈರಲ್​ ಆಗಿದೆ. 

ಅಸ್ಸಾಂ ಪೊಲೀಸರು ಇಲಾಖೇಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಆಮಂತ್ರಣ ಪತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ರಾಶ್​ ಆಗಿ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಆಮಂತ್ರಣ ಪತ್ರ ಎಂದು ಕ್ಯಾಪ್ಷನ್​ ಬರೆಯಲಾಗಿದೆ. ಜತೆಗೆ ವಿಶೇಷ ಸೂಚನೆ ಎಂದು ಬರೆದು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಹಾಗೂ ಉಳಿದ ದಾಖಲೆಗಳು ಇಲ್ಲದಿರುವವರಿಗೆ ಫ್ರೀ ಎಂಟ್ರಿ ಎಂದು ಬರೆದಿದ್ದಾರೆ. ಅದರ ಜೊತೆಗೆ ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಲು ಪ್ರಯತ್ನಿಸಬೇಡಿ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ಪೋಸ್ಟ್​ ಎಲ್ಲರ ಗಮನ ಸೆಳೆದಿದೆ. ವಿನೂತನ ಪ್ರಯೋಗದ ಮೂಲಕ ಹೊಸ ವರ್ಷ ಆಚರಣೆಯೊಂದಿಗೆ ಜೀವದ ಬಗ್ಗೆ ಕಾಳಜಿಯಿರಲಿ, ಅಪಘಾತವನ್ನು ತಪ್ಪಿಸಿ ಎಂಬ ಸಂದೇಶ ನೀಡಿದ್ದಾರೆ. ಈ ಟ್ವೀಟ್​ ಗೆ ನೆಟ್ಟಿಗರು ಶ್ಲಾಘಿಸಿದ್ದು, ಉತ್ತಮ ರೀತಿಯ ಸಂದೇಶ ಎಂದಿದ್ದಾರೆ.

ಇದನ್ನೂ ಓದಿ:

Sachin Atulkar: ವೈರಲ್​ ಆಯ್ತು ಐಪಿಎಸ್​ ಅಧಿಕಾರಿಯ ಫೋಟೋ; ಪೊಲೀಸ್​ ಎಂದರೆ ಹೀಗೆ ಇರಬೇಕು ಎಂದ ನೆಟ್ಟಿಗರು

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ