AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ’: ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು

ಅಸ್ಸಾಂ ಪೊಲೀಸರು ಇಲಾಖೇಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಆಮಂತ್ರಣ ಪತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ರಾಶ್​ ಆಗಿ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಆಮಂತ್ರಣ ಪತ್ರ ಎಂದು ಕ್ಯಾಪ್ಷನ್​ ಬರೆಯಲಾಗಿದೆ.

'ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ': ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು
ಅಸ್ಸಾಂ ಪೊಲೀಸರ ಟ್ವೀಟ್ ಪೋಸ್ಟರ್​
TV9 Web
| Edited By: |

Updated on: Dec 31, 2021 | 9:47 AM

Share

ಇಂದು ಡಿಸೆಂಬರ್​ 31. ವರ್ಷದ ಕೊನೆಯ ದಿನ. ಹೀಗಾಗಿ ಇಯರ್​ ಎಂಡ್​ ಪಾರ್ಟಿಗಳು ಎಲ್ಲೆಡೆ ಜೋರಾಗಿಯೇ ನಡೆಯಲಿದೆ. ಪಾರ್ಟಿ ಮಾಡಿ, ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತಗಳು ನಡೆಯುತ್ತವೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಇದನ್ನು ತಡೆಯಲು ಅಸ್ಸಾಂ ಪೊಲೀಸರು ತಮಾಷೆಯಾಗಿ ಟ್ವೀಟ್ ಮಾಡುವ ಮೂಲಕ ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ್ದಾರೆ. ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಲು ಪ್ರಯತ್ನಿಸಬೇಡಿ ಎಂದು ಪೋಸ್ಟರ್​ ಮಾಡಿ ಟ್ವೀಟ್​  ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್​ ಮಾಡಿದ ಪೋಸ್ಟ್​ ವೈರಲ್​ ಆಗಿದೆ. 

ಅಸ್ಸಾಂ ಪೊಲೀಸರು ಇಲಾಖೇಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಆಮಂತ್ರಣ ಪತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ರಾಶ್​ ಆಗಿ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಆಮಂತ್ರಣ ಪತ್ರ ಎಂದು ಕ್ಯಾಪ್ಷನ್​ ಬರೆಯಲಾಗಿದೆ. ಜತೆಗೆ ವಿಶೇಷ ಸೂಚನೆ ಎಂದು ಬರೆದು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಹಾಗೂ ಉಳಿದ ದಾಖಲೆಗಳು ಇಲ್ಲದಿರುವವರಿಗೆ ಫ್ರೀ ಎಂಟ್ರಿ ಎಂದು ಬರೆದಿದ್ದಾರೆ. ಅದರ ಜೊತೆಗೆ ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಲು ಪ್ರಯತ್ನಿಸಬೇಡಿ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ಪೋಸ್ಟ್​ ಎಲ್ಲರ ಗಮನ ಸೆಳೆದಿದೆ. ವಿನೂತನ ಪ್ರಯೋಗದ ಮೂಲಕ ಹೊಸ ವರ್ಷ ಆಚರಣೆಯೊಂದಿಗೆ ಜೀವದ ಬಗ್ಗೆ ಕಾಳಜಿಯಿರಲಿ, ಅಪಘಾತವನ್ನು ತಪ್ಪಿಸಿ ಎಂಬ ಸಂದೇಶ ನೀಡಿದ್ದಾರೆ. ಈ ಟ್ವೀಟ್​ ಗೆ ನೆಟ್ಟಿಗರು ಶ್ಲಾಘಿಸಿದ್ದು, ಉತ್ತಮ ರೀತಿಯ ಸಂದೇಶ ಎಂದಿದ್ದಾರೆ.

ಇದನ್ನೂ ಓದಿ:

Sachin Atulkar: ವೈರಲ್​ ಆಯ್ತು ಐಪಿಎಸ್​ ಅಧಿಕಾರಿಯ ಫೋಟೋ; ಪೊಲೀಸ್​ ಎಂದರೆ ಹೀಗೆ ಇರಬೇಕು ಎಂದ ನೆಟ್ಟಿಗರು

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!