Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ’: ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು

ಅಸ್ಸಾಂ ಪೊಲೀಸರು ಇಲಾಖೇಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಆಮಂತ್ರಣ ಪತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ರಾಶ್​ ಆಗಿ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಆಮಂತ್ರಣ ಪತ್ರ ಎಂದು ಕ್ಯಾಪ್ಷನ್​ ಬರೆಯಲಾಗಿದೆ.

'ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ': ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು
ಅಸ್ಸಾಂ ಪೊಲೀಸರ ಟ್ವೀಟ್ ಪೋಸ್ಟರ್​
Follow us
TV9 Web
| Updated By: Pavitra Bhat Jigalemane

Updated on: Dec 31, 2021 | 9:47 AM

ಇಂದು ಡಿಸೆಂಬರ್​ 31. ವರ್ಷದ ಕೊನೆಯ ದಿನ. ಹೀಗಾಗಿ ಇಯರ್​ ಎಂಡ್​ ಪಾರ್ಟಿಗಳು ಎಲ್ಲೆಡೆ ಜೋರಾಗಿಯೇ ನಡೆಯಲಿದೆ. ಪಾರ್ಟಿ ಮಾಡಿ, ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತಗಳು ನಡೆಯುತ್ತವೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಇದನ್ನು ತಡೆಯಲು ಅಸ್ಸಾಂ ಪೊಲೀಸರು ತಮಾಷೆಯಾಗಿ ಟ್ವೀಟ್ ಮಾಡುವ ಮೂಲಕ ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ್ದಾರೆ. ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಲು ಪ್ರಯತ್ನಿಸಬೇಡಿ ಎಂದು ಪೋಸ್ಟರ್​ ಮಾಡಿ ಟ್ವೀಟ್​  ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್​ ಮಾಡಿದ ಪೋಸ್ಟ್​ ವೈರಲ್​ ಆಗಿದೆ. 

ಅಸ್ಸಾಂ ಪೊಲೀಸರು ಇಲಾಖೇಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಆಮಂತ್ರಣ ಪತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ರಾಶ್​ ಆಗಿ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಆಮಂತ್ರಣ ಪತ್ರ ಎಂದು ಕ್ಯಾಪ್ಷನ್​ ಬರೆಯಲಾಗಿದೆ. ಜತೆಗೆ ವಿಶೇಷ ಸೂಚನೆ ಎಂದು ಬರೆದು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಹಾಗೂ ಉಳಿದ ದಾಖಲೆಗಳು ಇಲ್ಲದಿರುವವರಿಗೆ ಫ್ರೀ ಎಂಟ್ರಿ ಎಂದು ಬರೆದಿದ್ದಾರೆ. ಅದರ ಜೊತೆಗೆ ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಲು ಪ್ರಯತ್ನಿಸಬೇಡಿ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ಪೋಸ್ಟ್​ ಎಲ್ಲರ ಗಮನ ಸೆಳೆದಿದೆ. ವಿನೂತನ ಪ್ರಯೋಗದ ಮೂಲಕ ಹೊಸ ವರ್ಷ ಆಚರಣೆಯೊಂದಿಗೆ ಜೀವದ ಬಗ್ಗೆ ಕಾಳಜಿಯಿರಲಿ, ಅಪಘಾತವನ್ನು ತಪ್ಪಿಸಿ ಎಂಬ ಸಂದೇಶ ನೀಡಿದ್ದಾರೆ. ಈ ಟ್ವೀಟ್​ ಗೆ ನೆಟ್ಟಿಗರು ಶ್ಲಾಘಿಸಿದ್ದು, ಉತ್ತಮ ರೀತಿಯ ಸಂದೇಶ ಎಂದಿದ್ದಾರೆ.

ಇದನ್ನೂ ಓದಿ:

Sachin Atulkar: ವೈರಲ್​ ಆಯ್ತು ಐಪಿಎಸ್​ ಅಧಿಕಾರಿಯ ಫೋಟೋ; ಪೊಲೀಸ್​ ಎಂದರೆ ಹೀಗೆ ಇರಬೇಕು ಎಂದ ನೆಟ್ಟಿಗರು

ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ