AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನ ವಿದ್ಯಾರ್ಥಿ ಭವನದಲ್ಲಿ ಕೈಗೆ ಸಿಕ್ಕ ಪ್ರಾತ್ರೆಗಳಲ್ಲಿ ಅದ್ಭುತವಾಗಿ ಡ್ರಮ್ಸ್‌ ನುಡಿಸಿ ಶಿವಮಣಿ

ಪ್ರಖ್ಯಾತ ತಾಳವಾದ್ಯ ವಾದಕ ಶಿವಮಣಿ ಅವರು ಡ್ರಮ್ಸ್‌ ನುಡಿಸುವಂತಹ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೆಲ ತಿಂಗಳುಗಳ ಹಿಂದೆ ಇವರು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಅಲ್ಲಿದ್ದ ಕೆಲವೊಂದು ಪರಿಕರಗಳನ್ನು ಬಳಸಿ ಸಖತ್‌ ಆಗಿ ಸಂಗೀತ ನಾದ ಮೊಳಗಿಸಿದ್ದರು. ಇದೀಗ ಇವರು ಬೆಂಗಳೂರಿನ ವಿದ್ಯಾರ್ಥಿ ಭವನದ ಪಾಕಶಾಲೆಯಲ್ಲಿ ಪಾತ್ರೆಗಳನ್ನು ಬಳಸಿ ಅದ್ಭುತವಾಗಿ ತಾಳವಾದ್ಯ ನುಡಿಸಿದ್ದು, ಈ ದೃಶ್ಯ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on:Dec 03, 2024 | 5:12 PM

Share

ಬೆಂಗಳೂರಿನ ವಿದ್ಯಾರ್ಥಿ ಭವನ ಸಖತ್‌ ಫೇಮಸ್.‌ ಇಲ್ಲಿನ ಮಸಾಲೆ ದೋಸೆ, ಇಡ್ಲಿ, ಖಾರಾ ಬಾತ್‌, ಕೇಸರಿ ಬಾತ್‌, ಪೂರಿ ಸಾಗು, ರವೆ ವಡೆ ಇತ್ಯಾದಿ ಬಾಯಲ್ಲಿ ನೀರೂರಿಸುವ ಕಾಫಿ ಕುಡಿಯಲು ಸಾಮಾನ್ಯ ಜನರಿಂದ ಹಿಡಿದು ರಾಜಕಾರಣಿಗಳು, ಸೆಲೆಬ್ರಿಟಿಗಳ ವರೆಗೆ ಇಲ್ಲಿಗೆ ಬರ್ತಾರೆ. ಇತ್ತೀಚಿಗೆ ಫೇಮಸ್‌ ತಾಳವಾದ್ಯ ವಾದಕ ಡ್ರಮ್ಸ್‌ ಶಿವಮಣಿ ಅವರು ಕೂಡಾ ಉಪಹಾರ ಸವಿಯಲು ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪಾಕಶಾಲೆಗೆ ನುಗ್ಗಿ ಅವರು ಕೈಗೆ ಸಿಕ್ಕ ಪಾತ್ರೆಗಳನ್ನು ಬಳಸಿ ದೋಸೆ ಕಾವಲಿಯಲ್ಲಿ ಬಹಳ ಅದ್ಭುತವಾಗಿ ತಾಳವಾದ್ಯ ನುಡಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ತಾಳವಾದ್ಯ ವಾದಕರಾದ ಶಿವಮಣಿ ಅವರು ಡ್ರಮ್ಸ್‌ ನುಡಿಸುವುದರಲ್ಲಿ ಸಖತ್‌ ಫೇಮಸ್.‌ ಇದೀಗ ಅವರು ವಿದ್ಯಾರ್ಥಿ ಭವನ ಹೋಟೆಲ್‌ನಲ್ಲಿ ದೋಸೆ ಕಾವಲಿಯ ಮೇಲೆ ಅದ್ಭುತವಾಗಿ ತಾಳವಾದ್ಯ ನುಡಿಸಿದಂತಹ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಕುರಿತ ವಿಡಿಯೋವನ್ನು ವಿದ್ಯಾರ್ಥಿ ಭವನ (VidyarthiBhavan) ಎಕ್ಸ್‌ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದ್ದು, “ಲೆಜೆಂಡರಿ ಡ್ರಮ್ಮರ್‌ ಶಿವಮ್‌ ಅವರು ನಮ್ಮ ಅಡುಗೆ ಮನೆಯನ್ನು ವೇದಿಕೆಯಾಗಿ ಪರಿವರ್ತಿಸಿದರು. ಅವರು ತಮ್ಮ ಅಸಾಧಾರಣ ಕಲೆಯಿಂದಲೇ ನಮ್ಮನ್ನು ಮಂತ್ರಮುಗ್ಧಗೊಳಿಸಿದರು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ವಿದ್ಯಾರ್ಥಿ ಭವನದ ಪಾಕಶಾಲೆಯಲ್ಲಿ ಡ್ರಮ್ಸ್‌ ಶಿವಮ್‌ ಅವರು ಕೈಯಲ್ಲೆರಡು ಸ್ಟೀಲ್‌ ಬೌಲ್‌ ಹಿಡಿದುಕೊಂಡು ದೋಸೆ ಕಾವಲಿಯಲ್ಲಿ ಅದ್ಭುತವಾಗಿ ತಾಳವಾದ್ಯ ನುಡಿಸುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬಸ್‌ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಮೇಲೆಯೇ ನುಗ್ಗಿದ ಬಸ್; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಅಪಘಾತದ ಭಯಾನಕ ದೃಶ್ಯ

ಇಂದು ಬೆಳಗ್ಗೆ ಹಂಚಿಕೊಳ್ಳಲಾದ ಈ ವಿಡಿಯೋ 19 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಾವ್ಹ್‌ ಇವರ ಸಂಗೀತ ಮೋಡಿಗೆ ನಾನು ಕಳೆದು ಹೋದೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅದ್ಭುತವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:10 pm, Tue, 3 December 24

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ