AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಲಸಿಕೆ ಮದ್ದಲ್ಲ, ಒಂದು ಪೆಗ್​ ಹೊಡೆದ್ರೆ ಸರಿಯಾಗುತ್ತೆ; ಮದ್ಯದಂಗಡಿ ಎದುರು ಕ್ಯೂ ನಿಂತ ಆಂಟಿ

ದೆಹಲಿಯಲ್ಲಿ ಕೊವಿಡ್ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ 6 ದಿನಗಳ ಲಾಕ್​ಡೌನ್ ಘೋಷಿಸಿರು. ಈ ಕೂಡಲೇ ಮದ್ಯದಂಗಡಿಯಲ್ಲಿ ಜನರು ಸಾಲುಗಟ್ಟಿ ನಿಂತಿದ್ದಾರೆ.

ಕೊರೊನಾಗೆ ಲಸಿಕೆ ಮದ್ದಲ್ಲ, ಒಂದು ಪೆಗ್​ ಹೊಡೆದ್ರೆ ಸರಿಯಾಗುತ್ತೆ; ಮದ್ಯದಂಗಡಿ ಎದುರು ಕ್ಯೂ ನಿಂತ ಆಂಟಿ
ಬಾರ್​ ಎದುರು ಮಾತನಾಡಿದ ಆಂಟಿ
ರಾಜೇಶ್ ದುಗ್ಗುಮನೆ
|

Updated on: Apr 19, 2021 | 8:07 PM

Share

ಕೇಂದ್ರ ಸರ್ಕಾರ ಕಳೆದ ವರ್ಷ ಏಕಾಏಕಿ ಲಾಕ್​ಡೌನ್​ ಘೋಷಣೆ ಮಾಡಿತ್ತು. ಇದರಿಂದ ಜನಸಾಮಾನ್ಯರು ತುಂಬಾನೇ ತೊಂದರೆ ಅನುಭವಿಸಿದ್ದರು. ಅದರಲ್ಲೂ ಮದ್ಯಪ್ರಿಯರಿಗೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಏಕಾಏಕಿ ಬಾರ್​ಗಳನ್ನು ಮುಚ್ಚಿದ್ದರಿಂದ ಆಲ್ಕೋಹಾಲ್​ ಸಿಗದೆ ಅನೇಕರು ಪರಿತಪಿಸಿದ್ದರು. ಈಗ ಎರಡನೇ ಅಲೆ ಅಬ್ಬರ ಜೋರಾಗಿರುವುದರಿಂದ ದೆಹಲಿಯಲ್ಲಿ ಆರು ದಿನಗಳ ಮಿನಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಜನರು ಮದ್ಯದಂಗಡಿಗೆ ಮುಗಿಬಿದ್ದಿದ್ದಾರೆ. ಈ ವೇಳೆ ಗಮನ ಸೆಳೆದಿದ್ದು ಒಂದು ಆಂಟಿ. ದೆಹಲಿಯಲ್ಲಿ ಕೊವಿಡ್ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ 6 ದಿನಗಳ ಲಾಕ್​ಡೌನ್ ಘೋಷಿಸಿರು. ಈ ಕೂಡಲೇ ಮದ್ಯದಂಗಡಿಯಲ್ಲಿ ಜನರು ಸಾಲುಗಟ್ಟಿ ನಿಂತಿದ್ದಾರೆ. ಒಂದು ವಾರಕ್ಕೆ ಸಾಕಾಗುವಷ್ಟು ಮದ್ಯವನ್ನು ಶೇಖರಿಸಿಟ್ಟುಕೊಳ್ಳಲು ಜನರು ಮುಂದಾಗಿದ್ದರು. ಈ ಸಾಲಿನಲ್ಲಿ ಓರ್ವ ಆಂಟಿ ಕೂಡ ಇದ್ದರು. ಅವರು ಕೊರೊನಾಗೆ ಲಸಿಕೆ ಮದ್ದಲ್ಲ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಆಂಟಿ, ಕೊರೊನಾಗೆ ಇಂಜೆಕ್ಷನ್ ಪ್ರಯೋಜನವಾಗುವುದಿಲ್ಲ. ಆದರೆ, ಒಂದು ಪೆಗ್​ ಹೊಡೆದರೆ ಸರಿ ಆಗುತ್ತದೆ. ಯಾರ್ಯಾರು ಕುಡಿಯುತ್ತಾರೋ ಅವರಿಗೆ ರೋಗ ಅಂಟುವುದಿಲ್ಲ. ಅವರು ಆರೋಗ್ಯವಾಗಿರುತ್ತಾರೆ. ನಾನು ಅನೇಕ ವರ್ಷಗಳಿಂದ ಮದ್ಯ ಕುಡಿಯುತ್ತಿದ್ದೇನೆ. ಇಲ್ಲಿಯವರೆಗೆ ನನಗೆ ಯಾವುದೇ ರೋಗ ಬಂದಿಲ್ಲ ಎಂದಿದ್ದಾರೆ.

ಸಂಜೆ ವೇಳೆಗೆ ಟ್ವಿಟರ್​ನಲ್ಲಿ ಆಂಟಿ ಎನ್ನುವ ಶಬ್ದ ಟ್ರೆಂಡ್​ ಆಗಿದೆ. ಈ ಬಗ್ಗೆ ಸಾಕಷ್ಟು ಟ್ರೋಲ್​ಗಳು ಕೂ ಡ ಹರಿದಾಡಿವೆ.

ಆಹಾರ, ಆಹಾರೋತ್ಪನ್ನ, ದವಸ ಧಾನ್ಯ, ತರಕಾರಿ, ಹಣ್ಣು, ಹಾಲು, ಮೀನು, ಮಾಂಸ, ಪಶು ಆಹಾರ, ಫಾರ್ಮಸಿ, ವೈದ್ಯಕೀಯ ಕೇಂದ್ರಗಳು, ಪತ್ರಿಕೆ, ಬ್ಯಾಂಕ್, ಎಟಿಎಂ, ಸ್ಟಾಕ್ ಎಕ್ಸ್​ಚೇಂಜ್, ಟೆಲಿ ಕಮ್ಯುನಿಕೇಷನ್, ಇಂಟರ್ನೆಟ್, ಬ್ರಾಡ್ ಕಾಸ್ಟಿಂಗ್​ ಮತ್ತು ಕೇಬಲ್ ಸರ್ವೀಸ್, ಐಟಿ ಮತ್ತು ಐಟಿ ಸಂಬಂಧಿತ ಸೇವೆಗಳು ಇರಲಿವೆ. ದೆಹಲಿಯಲ್ಲಿ ಭಾನುವಾರ 25,462 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು ಪಾಸಿಟಿವಿಟಿ ದರ 29.74 ಆಗಿದೆ. ಕಳೆದ 24ಗಂಟೆಗಳಲ್ಲಿ ಕೊವಿಡ್ ನಿಂದ 161 ಮಂದಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ 6 ದಿನಗಳ ಲಾಕ್​ಡೌನ್; ಇಂದು ರಾತ್ರಿಯಿಂದಲೇ ಕಠಿಣ ನಿಯಮ ಜಾರಿ: ಅರವಿಂದ ಕೇಜ್ರಿವಾಲ್

ದೆಹಲಿಯಲ್ಲಿ ಲಾಕ್​ಡೌನ್ ಘೋಷಣೆಯಾದ ಕೂಡಲೇ ಮದ್ಯದಂಗಡಿ ಮುಂದೆ ಜನವೋ ಜನ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ