AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಲಸಿಕೆ ಮದ್ದಲ್ಲ, ಒಂದು ಪೆಗ್​ ಹೊಡೆದ್ರೆ ಸರಿಯಾಗುತ್ತೆ; ಮದ್ಯದಂಗಡಿ ಎದುರು ಕ್ಯೂ ನಿಂತ ಆಂಟಿ

ದೆಹಲಿಯಲ್ಲಿ ಕೊವಿಡ್ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ 6 ದಿನಗಳ ಲಾಕ್​ಡೌನ್ ಘೋಷಿಸಿರು. ಈ ಕೂಡಲೇ ಮದ್ಯದಂಗಡಿಯಲ್ಲಿ ಜನರು ಸಾಲುಗಟ್ಟಿ ನಿಂತಿದ್ದಾರೆ.

ಕೊರೊನಾಗೆ ಲಸಿಕೆ ಮದ್ದಲ್ಲ, ಒಂದು ಪೆಗ್​ ಹೊಡೆದ್ರೆ ಸರಿಯಾಗುತ್ತೆ; ಮದ್ಯದಂಗಡಿ ಎದುರು ಕ್ಯೂ ನಿಂತ ಆಂಟಿ
ಬಾರ್​ ಎದುರು ಮಾತನಾಡಿದ ಆಂಟಿ
ರಾಜೇಶ್ ದುಗ್ಗುಮನೆ
|

Updated on: Apr 19, 2021 | 8:07 PM

Share

ಕೇಂದ್ರ ಸರ್ಕಾರ ಕಳೆದ ವರ್ಷ ಏಕಾಏಕಿ ಲಾಕ್​ಡೌನ್​ ಘೋಷಣೆ ಮಾಡಿತ್ತು. ಇದರಿಂದ ಜನಸಾಮಾನ್ಯರು ತುಂಬಾನೇ ತೊಂದರೆ ಅನುಭವಿಸಿದ್ದರು. ಅದರಲ್ಲೂ ಮದ್ಯಪ್ರಿಯರಿಗೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಏಕಾಏಕಿ ಬಾರ್​ಗಳನ್ನು ಮುಚ್ಚಿದ್ದರಿಂದ ಆಲ್ಕೋಹಾಲ್​ ಸಿಗದೆ ಅನೇಕರು ಪರಿತಪಿಸಿದ್ದರು. ಈಗ ಎರಡನೇ ಅಲೆ ಅಬ್ಬರ ಜೋರಾಗಿರುವುದರಿಂದ ದೆಹಲಿಯಲ್ಲಿ ಆರು ದಿನಗಳ ಮಿನಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಜನರು ಮದ್ಯದಂಗಡಿಗೆ ಮುಗಿಬಿದ್ದಿದ್ದಾರೆ. ಈ ವೇಳೆ ಗಮನ ಸೆಳೆದಿದ್ದು ಒಂದು ಆಂಟಿ. ದೆಹಲಿಯಲ್ಲಿ ಕೊವಿಡ್ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ 6 ದಿನಗಳ ಲಾಕ್​ಡೌನ್ ಘೋಷಿಸಿರು. ಈ ಕೂಡಲೇ ಮದ್ಯದಂಗಡಿಯಲ್ಲಿ ಜನರು ಸಾಲುಗಟ್ಟಿ ನಿಂತಿದ್ದಾರೆ. ಒಂದು ವಾರಕ್ಕೆ ಸಾಕಾಗುವಷ್ಟು ಮದ್ಯವನ್ನು ಶೇಖರಿಸಿಟ್ಟುಕೊಳ್ಳಲು ಜನರು ಮುಂದಾಗಿದ್ದರು. ಈ ಸಾಲಿನಲ್ಲಿ ಓರ್ವ ಆಂಟಿ ಕೂಡ ಇದ್ದರು. ಅವರು ಕೊರೊನಾಗೆ ಲಸಿಕೆ ಮದ್ದಲ್ಲ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಆಂಟಿ, ಕೊರೊನಾಗೆ ಇಂಜೆಕ್ಷನ್ ಪ್ರಯೋಜನವಾಗುವುದಿಲ್ಲ. ಆದರೆ, ಒಂದು ಪೆಗ್​ ಹೊಡೆದರೆ ಸರಿ ಆಗುತ್ತದೆ. ಯಾರ್ಯಾರು ಕುಡಿಯುತ್ತಾರೋ ಅವರಿಗೆ ರೋಗ ಅಂಟುವುದಿಲ್ಲ. ಅವರು ಆರೋಗ್ಯವಾಗಿರುತ್ತಾರೆ. ನಾನು ಅನೇಕ ವರ್ಷಗಳಿಂದ ಮದ್ಯ ಕುಡಿಯುತ್ತಿದ್ದೇನೆ. ಇಲ್ಲಿಯವರೆಗೆ ನನಗೆ ಯಾವುದೇ ರೋಗ ಬಂದಿಲ್ಲ ಎಂದಿದ್ದಾರೆ.

ಸಂಜೆ ವೇಳೆಗೆ ಟ್ವಿಟರ್​ನಲ್ಲಿ ಆಂಟಿ ಎನ್ನುವ ಶಬ್ದ ಟ್ರೆಂಡ್​ ಆಗಿದೆ. ಈ ಬಗ್ಗೆ ಸಾಕಷ್ಟು ಟ್ರೋಲ್​ಗಳು ಕೂ ಡ ಹರಿದಾಡಿವೆ.

ಆಹಾರ, ಆಹಾರೋತ್ಪನ್ನ, ದವಸ ಧಾನ್ಯ, ತರಕಾರಿ, ಹಣ್ಣು, ಹಾಲು, ಮೀನು, ಮಾಂಸ, ಪಶು ಆಹಾರ, ಫಾರ್ಮಸಿ, ವೈದ್ಯಕೀಯ ಕೇಂದ್ರಗಳು, ಪತ್ರಿಕೆ, ಬ್ಯಾಂಕ್, ಎಟಿಎಂ, ಸ್ಟಾಕ್ ಎಕ್ಸ್​ಚೇಂಜ್, ಟೆಲಿ ಕಮ್ಯುನಿಕೇಷನ್, ಇಂಟರ್ನೆಟ್, ಬ್ರಾಡ್ ಕಾಸ್ಟಿಂಗ್​ ಮತ್ತು ಕೇಬಲ್ ಸರ್ವೀಸ್, ಐಟಿ ಮತ್ತು ಐಟಿ ಸಂಬಂಧಿತ ಸೇವೆಗಳು ಇರಲಿವೆ. ದೆಹಲಿಯಲ್ಲಿ ಭಾನುವಾರ 25,462 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು ಪಾಸಿಟಿವಿಟಿ ದರ 29.74 ಆಗಿದೆ. ಕಳೆದ 24ಗಂಟೆಗಳಲ್ಲಿ ಕೊವಿಡ್ ನಿಂದ 161 ಮಂದಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ 6 ದಿನಗಳ ಲಾಕ್​ಡೌನ್; ಇಂದು ರಾತ್ರಿಯಿಂದಲೇ ಕಠಿಣ ನಿಯಮ ಜಾರಿ: ಅರವಿಂದ ಕೇಜ್ರಿವಾಲ್

ದೆಹಲಿಯಲ್ಲಿ ಲಾಕ್​ಡೌನ್ ಘೋಷಣೆಯಾದ ಕೂಡಲೇ ಮದ್ಯದಂಗಡಿ ಮುಂದೆ ಜನವೋ ಜನ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!