AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚರಂಡಿಗೆ ಬಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದ ವಿದೇಶಿಗ

ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಕೆಲವೊಂದು ಘಟನೆಗಳನ್ನು ನೋಡಿದಾಗ ಮಾನವೀಯತೆ ಇಂದಿಗೂ ಜೀವಂತವಾಗಿ ಎಂದೆನಿಸುತ್ತದೆ. ಯಾರಾದ್ರೂ ಸಮಸ್ಯೆಯಲ್ಲಿದ್ದರೆ ಕಂಡು ಕಾಣದವರಂತೆ ಹೋಗುವವರ ನಡುವೆ ಈ ವಿದೇಶಿಗ ಭಾರತೀಯರ ಪಾಲಿಗೆ ಹೀರೊ ಆಗಿದ್ದಾನೆ. ವಿದೇಶಿಗನೊಬ್ಬ ಚರಂಡಿಗೆ ಬಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾನೆ. ಈ ಕುರಿತಾದ ವಿಡಿಯೋ ಸದ್ಯ ವೈರಲ್ ಆಗಿದೆ.

Video: ಚರಂಡಿಗೆ ಬಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದ ವಿದೇಶಿಗ
ಚರಂಡಿಗೆ ಬಿದ್ದ ಹಸುವನ್ನು ರಕ್ಷಿಸಿದ ವಿದೇಶಿಗ Image Credit source: Instagram
ಸಾಯಿನಂದಾ
|

Updated on:Sep 30, 2025 | 2:13 PM

Share

ಈಗಿನ ಕಾಲದಲ್ಲಿ ಯಾರಿಗಾದ್ರೂ ಕಷ್ಟ ಎಂದು ತಿಳಿದರೆ ಅವರ ಸಹವಾಸವೇ ಬೇಡ ಎಂದು ಮಾರುದ್ಧ ದೂರ ಓಡುವವರೇ ಹೆಚ್ಚು. ಇದೆಲ್ಲದರ ನಡುವೆ ಸಂಕಷ್ಟದಲ್ಲಿರುವವರ ಪಾಲಿಗೆ ಮಿಡಿಯುವ ಪರಿಶುದ್ಧ ಮನಸ್ಸುಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಆಸ್ಟ್ರೇಲಿಯಾದ ವ್ಯಕ್ತಿಯೂ (Australian) ಭಾರತದ ಪ್ರವಾಸದ ವೇಳೆ ತನ್ನ ಒಳ್ಳೆಯ ಕೆಲಸದಿಂದಲೇ ಸುದ್ದಿಯಾಗಿದ್ದಾನೆ. ಡ್ರೈನೇಜ್ ಹೋಲ್‌ಗೆ ಬಿದ್ದಿದ್ದ ಹಸುವನ್ನು ಮೇಲೆತ್ತಿ, ಮೂಕ ಪ್ರಾಣಿಯನ್ನು ರಕ್ಷಿಸಿದ್ದಾನೆ. ಡಂಕನ್ ಮೆಕ್ನಾಟ್‌ (duncan.mcnaught) ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಳ್ಳುತ್ತಿದ್ದಂತೆ ಬಳಕೆದಾರರು ಈತನ ಒಳ್ಳೆಯ ಕೆಲಸವನ್ನು ಹಾಡಿ ಹೊಗಳಿದ್ದಾರೆ.

ಚರಂಡಿಗೆ ಬಿದ್ದ ಹಸುವಿನ ರಕ್ಷಣೆ ಮಾಡಿದ ವಿದೇಶಿಗ

ಡಂಕನ್ ಮೆಕ್ನಾಟ್‌ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋಗೆ ಪವಿತ್ರ ಹಸುವನ್ನು ರಕ್ಷಿಸಲಾಗಿದೆ ಎಂದು ಶೀರ್ಷಿಕೆಯನ್ನು ನೀಡಲಾಗಿದೆ. ಈ ವಿಡಿಯೋದಲ್ಲಿ ಆಸ್ಟ್ರೇಲಿಯಾ ವ್ಯಕ್ತಿಯೂ ಭಾರತದ ಪ್ರವಾಸದ ವೇಳೆ ಚರಂಡಿಗೆ ಬಿದ್ದ ಹಸುವನ್ನು ನೋಡಿದ್ದಾನೆ. ಈ ವೇಳೆಯಲ್ಲಿ ಡ್ರೈನೇಜ್ ಗೆ ಬಿದ್ದಿದ್ದ ಹಸುವನ್ನು ಡಂಕನ್ ಒಬ್ಬನೇ ರಕ್ಷಿಸಲು ಮುಂದಾಗಿದ್ದಾನೆ. ಆದರೆ ಚರಂಡಿಯಿಂದ ಹಸುವನ್ನು ಮೇಲೆತ್ತೋದು ತುಂಬಾ ಕಷ್ಟವಾಗಿದೆ. ಈ ವೇಳೆಯಲ್ಲಿ ವ್ಯಕ್ತಿಯೊಬ್ಬನ ಸಹಾಯ ಪಡೆದುಕೊಂಡು ಹಸುವನ್ನು ಕಾಪಾಡಿರುವುದನ್ನು ನೋಡಬಹುದು. ಆದರೆ ಈ ಘಟನೆ ಎಲ್ಲಿ ನಡೆದಿದೆ ಎನ್ನುವ ಬಗ್ಗೆ ಡಂಕನ್ ಉಲ್ಲೇಖಿಸಿಲ್ಲ.

ಇದನ್ನೂ ಓದಿ
Image
ಭಾರತೀಯನ ಜೊತೆ ಮದ್ವೆ, ನನ್ನ ಜೀವನವೇ ಬದಲಾಗಿ ಹೋಯ್ತು ಎಂದ ವಿದೇಶಿ ಮಹಿಳೆ
Image
ಆಹಾ! ಎಷ್ಟು ಚಂದ ನೋಡಿ ಈ ವಿದೇಶಿಗನ ಬಾಯಲ್ಲಿ ಕನ್ನಡ ಕೇಳೋದು
Image
ಅಹಮದಾಬಾದ್ ನಗರ ಮಹಿಳೆಯರಿಗೆ ತುಂಬಾನೇ ಸುರಕ್ಷಿತ ಎಂದ ವಿದೇಶಿ ಮಹಿಳೆ
Image
ಬೆಂಗಳೂರಿನ ಫುಟ್‌ಪಾತ್‌ನಲ್ಲಿ ಸಂಚರಿಸಿ ವಾಸ್ತವ ಸ್ಥಿತಿ ಬಿಚ್ಚಿಟ್ಟ ವಿದೇಶಿಗ

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:Video: ಭಾರತೀಯನನ್ನು ಮದ್ವೆಯಾದ ಬಳಿಕ ನನ್ನ ಜೀವನವೇ ಬದಲಾಗಿ ಹೋಯ್ತು ಎಂದ ವಿದೇಶಿ ಮಹಿಳೆ

ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು ಒಬ್ಬ ಬಳಕೆದಾರ ಇಬ್ಬರಿಗೂ ದೇವರು ಒಳ್ಳೇದು ಮಾಡಲಿ, ಇದು ಒಳ್ಳೆಯ ಕೆಲಸ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರ ನಿಮ್ಮ ಮೇಲಿನ ಗೌರವ ಹೆಚ್ಚಾಯ್ತು, ನಿಜಕ್ಕೂ ನಿಮ್ಮದು ಪರಿಶುದ್ಧ ಮನಸ್ಸು ಎಂದಿದ್ದಾರೆ. ಮತ್ತೊಬ್ಬರು ನೀವು ನಿಜಕ್ಕೂ ಕೆಲವು ಕ್ಷಣಗಳ ಕಾಲ ದೇವರಾಗಿ ಕಂಡಿದ್ದೀರಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Tue, 30 September 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?