AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: 3 ದಿನದಲ್ಲಿ 60 ಜನರನ್ನು ಮದುವೆಯಾದ ಮಹಿಳೆ

"ಒಬ್ಬ ವ್ಯಕ್ತಿಯನ್ನು ಜೀವನ ಸಂಗಾತಿಯನ್ನಾಗಿ ಮಾಡುವ ಪರಿಕಲ್ಪನೆ ನನಗೆ ಇಷ್ಟವಿಲ್ಲ, ನಾನು ನನ್ನ ಇಡೀ ಜೀವನವನ್ನು ಒಬ್ಬ ವ್ಯಕ್ತಿಗೆ ಮೀಸಲಿಡಲು ಇಷ್ಟ ಪಡುವುದಿಲ್ಲ" ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಸದ್ಯ ಈಕೆಯ ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

Video Viral: 3 ದಿನದಲ್ಲಿ 60 ಜನರನ್ನು ಮದುವೆಯಾದ ಮಹಿಳೆ
3 ದಿನದಲ್ಲಿ 60 ಜನರನ್ನು ಮದುವೆಯಾದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Jun 29, 2024 | 4:01 PM

Share

ಆಸ್ಟ್ರೇಲಿಯಾದ 40 ವರ್ಷದ ಕಾರ್ಲಿ ಸಾರೆ ಎಂಬ ಮಹಿಳೆಯ ಮದುವೆಯ ಸಂಬಂಧಿಸಿದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​​​​​ ಆಗಿದೆ. ವೃತ್ತಿಯಲ್ಲಿ ವೆಡ್ಡಿಂಗ್ ಫೋಟೋಗ್ರಾಫರ್ ಆಗಿರುವ ಈಕೆ ಮೂರು ದಿನಗಳ ತನ್ನ ವಿವಾಹ ಸಮಾರಂಭದಲ್ಲಿ ಒಟ್ಟು 60 ಜನರನ್ನು ವಿವಾಹವಾಗಿದ್ದಾಳೆ. 60 ರಲ್ಲಿ ಪುರುಷರು ಮತ್ತು ಮಹಿಳೆಯರೂ ಕೂಡ ಸೇರಿಸಿದ್ದಾರೆ. ಒಬ್ಬರನ್ನೇ ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಳ್ಳದೆ 60 ಮಂದಿಯನ್ನು ಒಟ್ಟಿಗೆ ಆಯ್ಕೆ ಮಾಡಿ ಮದುವೆಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಾರ್ಲಿ “ನನಗೆ ನನ್ನ ನಿರ್ಧಾರದ ಬಗ್ಗೆ ಹೆಮ್ಮೆಯಿದೆ. ನನ್ನ ಜೀವನದಲ್ಲಿ ಇವರೆಲ್ಲರೂ ಬಹಳ ಮುಖ್ಯ, ಹಾಗಾಗಿ ಅವರೆಲ್ಲರನ್ನೂ ಒಟ್ಟಿಗೆ ಮದುವೆಯಾಗಿದ್​ದೇನೆ ” ಎಂದು ಹೇಳಿಕೊಂಡಿದ್ದಾಳೆ. ಸದ್ಯ ಈಕೆಯ ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

“ಒಬ್ಬ ವ್ಯಕ್ತಿಯನ್ನು ಮದುವೆಯಾಗುವ ಪರಿಕಲ್ಪನೆಯು ನನಗೆ ಸರಿಹೊಂದುವುದಿಲ್ಲ. ನಾನು ನನ್ನ ಇಡೀ ಜೀವನವನ್ನು ಒಬ್ಬ ವ್ಯಕ್ತಿಗೆ ಮೀಸಲಿಡಲು ಇಷ್ಟ ಪಡುವುದಿಲ್ಲ. ಅದಕ್ಕಾಗಿಯೇ ನಾನು ನನ್ನ ಸ್ನೇಹಿತರೆಲ್ಲರನ್ನು ಮದುವೆಯಾಗಿದ್ದೇನೆ. ಇದರಲ್ಲಿ ಪುರುಷರು ಮತ್ತು ಮಹಿಳೆಯರು ಎಲ್ಲರೂ ಸೇರಿದ್ದಾರೆ” ಎಂದು ಕಾರ್ಲಿ ಹೇಳಿದ್ದಾರೆ.

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ