ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ಗಂಟಲಿನ ಒಳಗೆ ಬೆಳೆದಿತ್ತು ಕೂದಲು

20 ನೇ ವಯಸ್ಸಿನಲ್ಲಿ ಧೂಮಪಾನ ಮಾಡಲು ಪ್ರಾರಂಭಿಸಿದ್ದ ಈ 52 ವರ್ಷದ ವ್ಯಕ್ತಿಯ ಗಂಟಲಿನಲ್ಲಿ ಅಸಹಜ ಕೂದಲು ಬೆಳವಣೆಯಾಗುತ್ತಿರುವುದು ಪರೀಕ್ಷೆಯ ವೇಳೆ ತಿಳಿದುಬಂದಿದೆ. ಇದನ್ನು ನೋಡಿದ ವೈದ್ಯರೇ ಬೆಚ್ಚಿಬಿದ್ದಿದ್ದಾರೆ. ಅಮೇರಿಕನ್ ಜರ್ನಲ್ ಆಫ್ ಕೇಸ್ ರಿಪೋರ್ಟ್ಸ್‌ನಲ್ಲಿ ಪ್ರಕಟವಾಗಿರುವ ಮಾಹಿತಿಯ ಪ್ರಕಾರ ವಿಶ್ವದಲ್ಲೇ ಇದು ಮೊದಲ ಪ್ರಕರಣವಾಗಿದೆ.

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ಗಂಟಲಿನ ಒಳಗೆ  ಬೆಳೆದಿತ್ತು ಕೂದಲು
Follow us
|

Updated on:Jun 27, 2024 | 2:53 PM

ಆಸ್ಟ್ರಿಯಾದಲ್ಲಿ ಧೂಮಪಾನಕ್ಕೆ ಸಂಬಂಧಿಸಿದ ಅಪರೂಪದ ಕಾಯಿಲೆಯೊಂದು ಬೆಳಕಿಗೆ ಬಂದಿದೆ. ನಿರಂತರ ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ವೈದ್ಯರ ಬಳಿಗೆ ಹೋಗಿದ್ದಾನೆ. ಆದರೆ ಆತನನ್ನು ಪರೀಕ್ಷೆಗೆ ಒಳಪಡಿಸಿದ ವೈದ್ಯರು ರಿಪೋರ್ಟ್​​ ಕಂಡು ಶಾಕ್​​ಗೆ ಒಳಗಾಗಿದ್ದಾರೆ. 20 ನೇ ವಯಸ್ಸಿನಲ್ಲಿ ಧೂಮಪಾನ ಮಾಡಲು ಪ್ರಾರಂಭಿಸಿದ್ದ ಈ 52 ವರ್ಷದ ವ್ಯಕ್ತಿಯ ಗಂಟಲಿನಲ್ಲಿ ಅಸಹಜ ಕೂದಲು ಬೆಳವಣೆಯಾಗುತ್ತಿರುವುದು ಪರೀಕ್ಷೆಯ ವೇಳೆ ತಿಳಿದುಬಂದಿದೆ. ಅಮೇರಿಕನ್ ಜರ್ನಲ್ ಆಫ್ ಕೇಸ್ ರಿಪೋರ್ಟ್ಸ್‌ನಲ್ಲಿ ಪ್ರಕಟವಾಗಿರುವ ಮಾಹಿತಿಯ ಪ್ರಕಾರ ವಿಶ್ವದಲ್ಲೇ ಇದು ಮೊದಲ ಪ್ರಕರಣವಾಗಿದೆ.

ಅಮೇರಿಕನ್ ಜರ್ನಲ್ ವರದಿಯ ಪ್ರಕಾರ, ರೋಗಿಯು 1990 ರಿಂದ ಸಿಗರೇಟ್ ಸೇದುವ ಅಭ್ಯಾಸ ಹೊಂದಿದ್ದ. 2007 ರಲ್ಲಿ ನಿರಂತರ ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದಾಗಿ ವೈದ್ಯರ ಬಳಿಗೆ ಹೋದಾಗ ಗಂಟಲಿನ ಒಳಭಾಗದಲ್ಲಿ ಅನೇಕ ಸಣ್ಣ ಕಪ್ಪು ಕೂದಲುಗಳು ಬೆಳೆದಿರುವುದು ಪರೀಕ್ಷೆಯ ವೇಳೆ ಕಂಡು ಬಂದಿದೆ. ಇದನ್ನು ನೋಡಿದ ವೈದ್ಯರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಅವರು ಹಿಂದೆಂದೂ ಇಂತಹ ಪ್ರಕರಣವನ್ನು ನೋಡಿರಲಿಲ್ಲ.

ಇದಾದ ಬಳಿಕ ವೈದ್ಯರು ರೋಗಿಗೆ ಔಷಧಿ ನೀಡಿದರೂ ಹೆಚ್ಚಿನ ಪ್ರಯೋಜನವಾಗಲಿಲ್ಲ. ವರದಿಯ ಪ್ರಕಾರ, ವೈದ್ಯರು ಗಂಟಲಿನಿಂದ ಕೂದಲನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಿದ್ದಾರೆ. ಆದರೆ ಇದರ ನಂತರವೂ ರೋಗಿಯ ಕುತ್ತಿಗೆಯಲ್ಲಿ ಮುಂದಿನ 14 ವರ್ಷಗಳವರೆಗೆ ಕೂದಲು ಬೆಳೆಯುತ್ತಲೇ ಇತ್ತು. ನಿಯಮಿತ ಧೂಮಪಾನದಿಂದ ವ್ಯಕ್ತಿಯು ಈ ಸಮಸ್ಯೆಗೆ ಒಳಗಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ವೈದ್ಯರ ಪ್ರಕಾರ, ಧೂಮಪಾನವು ಗಂಟಲಿನಲ್ಲಿ ಊತವನ್ನು ಉಂಟುಮಾಡುತ್ತದೆ, ಇದರಿಂದಾಗಿ ಜೀವಕೋಶಗಳು ಸಣ್ಣ ಕೂದಲುಗಳಾಗಿ ಪರಿವರ್ತನೆಗೊಳ್ಳುತ್ತವೆ. ಈ ಕೂದಲುಗಳು 6-9 ಇಂಚುಗಳವರೆಗೆ ಬೆಳೆಯುತ್ತವೆ ಮತ್ತು ಕೆಲವೊಮ್ಮೆ ಬಾಯಿಯನ್ನು ಕೂಡ ತಲುಪಬಹುದು.

ಇದನ್ನೂ ಓದಿ: ಜೋರು ಮಳೆಯಲ್ಲಿ ರೀಲ್ಸ್‌ ಮಾಡುವಾಗಲೇ ಬಡಿದ ಸಿಡಿಲು! ಮುಂದೇನಾಯ್ತು ನೋಡಿ?

ವರದಿಯ ಪ್ರಕಾರ, ವ್ಯಕ್ತಿ 2020 ರಲ್ಲಿ ಧೂಮಪಾನವನ್ನು ತೊರೆದಿದ್ದು, ಆತನಿಗೆ ಎಂಡೋಸ್ಕೋಪಿಕ್ ಆರ್ಗನ್ ಪ್ಲಾಸ್ಮಾ ಎಂಬ ಚಿಕಿತ್ಸೆಯನ್ನು ಪ್ರಾರಂಭಿಸಲಾಯಿತು. ಇದರಲ್ಲಿ, ಕೂದಲು ಬೆಳೆಯುವ ಮಾರ್ಗವನ್ನು ಮುಚ್ಚಲಾಗುತ್ತದೆ. ಸುಮಾರು 2 ವರ್ಷಗಳ ಚಿಕಿತ್ಸೆಯ ನಂತರ, ವ್ಯಕ್ತಿಯು ಈ ಸಮಸ್ಯೆಯಿಂದ ಹೊರಬಂದನು. ಈ ಪ್ರಕರಣವು ಧೂಮಪಾನದ ಅಪಾಯಕಾರಿ ಪರಿಣಾಮಗಳನ್ನು ತೋರಿಸುತ್ತದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Thu, 27 June 24

ತಾಜಾ ಸುದ್ದಿ
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ