Viral News: ಪಿತ್ರಾರ್ಜಿತವಾಗಿ ಬಂದ 224 ಕೋಟಿ ರೂ. ಸಂಪತ್ತು ದಾನ ಮಾಡಿದ ಯುವತಿ

ಮರ್ಲಿನ್ ಎಂಗಲ್‌ಹಾರ್ನ್ ಆಸ್ಟ್ರಿಯಾದ ಶ್ರೀಮಂತ ಕೈಗಾರಿಕಾ ಕುಟುಂಬದಲ್ಲಿ ಜನಿಸಿದ್ದು, ಸುಮಾರು 224 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪಿತ್ರಾರ್ಜಿತವಾಗಿ ಪಡೆದಿದ್ದಾರೆ. ಐಷಾರಾಮಿ ಜೀವನ ನಡೆಸಬೇಕಿದ್ದ ಈಕೆ ದೇಶದ ಆರ್ಥಿಕ ಅಸಮಾನತೆಯನ್ನು ಗಮನಿಸಿ ತನ್ನ ಸಂಪತ್ತನ್ನು ದೇಶಕ್ಕಾಗಿ ದಾನ ಮಾಡಲು ಮುಂದಾಗಿದ್ದಾಳೆ.

Viral News: ಪಿತ್ರಾರ್ಜಿತವಾಗಿ  ಬಂದ  224 ಕೋಟಿ ರೂ. ಸಂಪತ್ತು ದಾನ ಮಾಡಿದ ಯುವತಿ
Follow us
| Updated By: Digi Tech Desk

Updated on:Jun 26, 2024 | 4:14 PM

ದೇಶದಲ್ಲಿನ ಆರ್ಥಿಕ ಅಸಮಾನತೆಯನ್ನು ಗಮನಿಸಿದ ಯುವತಿಯೊಬ್ಬಳು ತನ್ನ ಕುಟುಂಬದಿಂದ ಪಿತ್ರಾರ್ಜಿತವಾಗಿ ಬಂದ ಆಸ್ತಿಯನ್ನು ಮರು ಹಂಚಿಕೆ ಮಾಡಲು ಮುಂದಾಗಿದ್ದಾಳೆ. ಅವುಗಳ ಮೌಲ್ಯ 224 ಕೋಟಿ ರೂಪಾಯಿ ಎಂಬುದು ಗಮನಾರ್ಹ. ಸದ್ಯ ಸಾವಿರಾರೂ ಕೋಟಿ ರೂಪಾಯಿ ದಾನ ಮಾಡಲು ಮುಂದಾದ ಯುವತಿ ಮರ್ಲಿನ್ ಎಂಗಲ್‌ಹಾರ್ನ್(32) ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಮರ್ಲಿನ್ ಎಂಗಲ್‌ಹಾರ್ನ್ ಆಸ್ಟ್ರಿಯಾದ ಶ್ರೀಮಂತ ಕೈಗಾರಿಕಾ ಕುಟುಂಬದಲ್ಲಿ ಜನಿಸಿದ್ದು, ನೂರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಪಿತ್ರಾರ್ಜಿತವಾಗಿ ಪಡೆದಿದ್ದಾಳೆ. ಆದರೆ ದೇಶದ ಆರ್ಥಿಕ ಅಸಮಾನತೆಯನ್ನು ಗಮನಿಸಿದ ಈಕೆ ತನ್ನ ಸಂಪತ್ತನ್ನು ದಾನ ಮಾಡಲು ಮುಂದಾಗಿದ್ದಾಳೆ.

ಈಕೆಯ ಈ ನಿರ್ಧಾರಕ್ಕೆ ವಿವಿಧ ಕ್ಷೇತ್ರಗಳ ಸ್ಥಳೀಯ ತಜ್ಞರ ತಂಡ ಸಮಾಲೋಚನೆ ನಡೆಸಿದೆ. ಹವಾಮಾನ ಬದಲಾವಣೆ, ಶಿಕ್ಷಣ, ಆರೋಗ್ಯ, ಲಿಂಗ ಸಮಾನತೆ, ಮಹಿಳಾ ಆಶ್ರಯಗಳು, ನಿರಾಶ್ರಿತರು ನಡೆಸುತ್ತಿರುವ ಪತ್ರಿಕೆಗಳು, ಅಗ್ನಿಶಾಮಕ ಇಲಾಖೆಗಳು ಮತ್ತು ಪ್ರಜಾಪ್ರಭುತ್ವ ಪರ ಸಂಘಟನೆಗಳು ಸೇರಿದಂತೆ ದೇಶದ ಸುಮಾರು 77 ಸಂಸ್ಥೆಗಳಿಗೆ ಆಕೆಯ ಸಂಪತ್ತನ್ನು ಹಂಚಲಾಗುವುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ

ಈ ಆರ್ಥಿಕ ನೆರವು ಒಂದೇ ಬಾರಿಗೆ ಬದಲಾಗಿ ದೀರ್ಘಾವಧಿಯಲ್ಲಿ ನೀಡಲಾಗುವುದು.ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅನುಗುಣವಾಗಿ ಸಂಪತ್ತನ್ನು ಮರುಹಂಚಿಕೆ ಮಾಡುವ ಮೂಲಕ ದೇಶದಲ್ಲಿ ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿರುವುದಾಗಿ ಸ್ಥಳೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Wed, 26 June 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ