Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ತುಟಿ ದೊಡ್ಡದಾಗಿಸಲು 52ಲಕ್ಷ ರೂ. ಖರ್ಚು ಮಾಡಿದ ಮಹಿಳೆ

ಸೋಷಿಯಲ್ ಮೀಡಿಯಾದಲ್ಲಿ ‘ಫೆಟಿಶ್ ಬಾರ್ಬಿ’ ಎಂದೇ ಕರೆಸಿಕೊಳ್ಳುವ ಈ ಮಹಿಳೆ ಲಿಪ್ ಫಿಲ್ಲರ್‌ ಸಹಾಯದಿಂದ ತನ್ನ ತುಟಿಗಳನ್ನು ಸಾಮಾನ್ಯಕ್ಕಿಂತ ಮೂರು ಪಟ್ಟು ದೊಡ್ಡದಾಗಿ ಮತ್ತು ದಪ್ಪವಾಗಿಸಿದ್ದಾಳೆ. ಇದಕ್ಕಾಗಿ ಈಕೆ ಇಲ್ಲಿಯವರೆಗೆ ಸುಮಾರು 52 ಲಕ್ಷ ರೂಪಾಯಿ ಖರ್ಚು ಮಾಡಿದ್ದಾಳೆ.

Viral News: ತನ್ನ ತುಟಿ ದೊಡ್ಡದಾಗಿಸಲು 52ಲಕ್ಷ ರೂ. ಖರ್ಚು ಮಾಡಿದ ಮಹಿಳೆ
Follow us
ಅಕ್ಷತಾ ವರ್ಕಾಡಿ
|

Updated on: Jul 01, 2024 | 3:29 PM

ಅನೇಕ ಮಹಿಳೆಯರು ತಮ್ಮ ಸೌಂದರ್ಯವನ್ನು ಹೆಚ್ಚಿಸಲು ಶಸ್ತ್ರಚಿಕಿತ್ಸೆಯ ಮೊರೆ ಹೋಗುತ್ತಾರೆ. ಇದಕ್ಕಾಗಿ ಎಷ್ಟು ಹಣ ಬೇಕಾದರೂ ಖರ್ಚು ಮಾಡಲು ಹಿಂಜರಿಯುವುದಿಲ್ಲ. ಅಂತಹ ಮಹಿಳೆಯೊಬ್ಬರು ಇದೀಗ ಸುದ್ದಿಯಲ್ಲಿದ್ದಾರೆ. ಈ ಮಹಿಳೆ ತನ್ನ ತುಟಿಗಳ ಅಂದವನ್ನು ಹೆಚ್ಚಿಸಲು ಬರೋಬ್ಬರಿ 52ಲಕ್ಷ ರೂ. ಖರ್ಚು ಮಾಡಿದ್ದಾಳೆ. ಇದೀಗ ಆಕೆಯ ತುಟಿ ವಿಕಾರ ರೂಪ ಪಡೆದಿದೆ.

ಸೋಷಿಯಲ್ ಮೀಡಿಯಾದಲ್ಲಿ ‘ಫೆಟಿಶ್ ಬಾರ್ಬಿ’ ಎಂದೇ ಕರೆಸಿಕೊಳ್ಳುವ ಈ ಮಹಿಳೆ ಆಸ್ಟ್ರಿಯಾ ನಿವಾಸಿ. ಫೆಟಿಶ್ ಬಾರ್ಬಿ ಅವರು ಯಾವಾಗಲೂ ದೊಡ್ಡ ತುಟಿಗಳನ್ನು ಹೊಂದಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾಳೆ. ಆದ್ದರಿಂದಲೇ ಲಿಪ್ ಫಿಲ್ಲರ್‌ಗಳ ಸಹಾಯವನ್ನು ತೆಗೆದುಕೊಂಡು ತನ್ನ ತುಟಿಗಳನ್ನು ಸಾಮಾನ್ಯಕ್ಕಿಂತ ಮೂರು ಪಟ್ಟು ದೊಡ್ಡದಾಗಿ ಮತ್ತು ದಪ್ಪವಾಗಿಸಿದ್ದಾಳೆ. ತನ್ನ ನೋಟವನ್ನು ಕಾಪಾಡಿಕೊಳ್ಳಲು ಪ್ರತಿ ಮೂರು ತಿಂಗಳಿಗೊಮ್ಮೆ ಫಿಲ್ಲರ್‌ಗಳನ್ನು ಪಡೆಯಬೇಕು ಎಂದು ಅವಳು ಹೇಳುತ್ತಾಳೆ. ಫಿಲ್ಲರ್ ಮತ್ತು ಬೊಟಾಕ್ಸ್ ಗಾಗಿ ಇಲ್ಲಿಯವರೆಗೆ ಆಕೆ ಸುಮಾರು 50 ಸಾವಿರ ಪೌಂಡ್ ಗಳನ್ನು ಅಂದರೆ ನಮ್ಮ ದೇಶದ ಕರೆನ್ಸಿಯಲ್ಲಿ ಸುಮಾರು 52 ಲಕ್ಷ ರೂಪಾಯಿ ಖರ್ಚು ಮಾಡಿದ್ದಾಳೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

ಲೇಡಿಬೈಬಲ್‌ನ ವರದಿಯ ಪ್ರಕಾರ, ಫೆಟಿಶ್ ಬಾರ್ಬಿಯು ಸುಂದರವಾಗಿ ಕಾಣಲು ಆರಂಭದಲ್ಲಿ ತುಂಬಾ ಮೇಕಪ್ ಮಾಡಿಕೊಳ್ಳುತ್ತಿದ್ದಳು. ಬಳಿಕ ಫೆಟಿಶ್ ಬಾರ್ಬಿ ತನ್ನ ಕೆನ್ನೆ, ಗಲ್ಲ, ಮೂಗು ಮತ್ತು ತುಟಿಗಳಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾಳೆ. ಇದಲ್ಲದೇ ಚರ್ಮದ ಸುಕ್ಕುಗಳನ್ನು ತೊಡೆದುಹಾಕಲು ತನ್ನ ಸಂಪೂರ್ಣ ಮುಖಕ್ಕೆ ಬೊಟೊಕ್ಸ್ ಕೂಡ ಮಾಡಿಸಿಕೊಂಡಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್