Viral Video: ಮಾತು ಬಾರದ ಮಗನ ಮೊದಲ ತೊದಲು ನುಡಿಗಳನ್ನು ಕೇಳಿ ಭಾವುಕಳಾದ ತಾಯಿ

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ಭಾವನಾತ್ಮಕ ವಿಡಿಯೋ ದೃಶ್ಯಾವಳಿಗಳು ನಮ್ಮ ಕಣ್ಣಂಚಲಿ ನೀರು ತರಿಸುತ್ತವೆ. ಸದ್ಯ ಅಂತಹದೇ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮಾತು ಬಾರದ ಮಗನ ಜೊತೆ ಮಾತನಾಡುವ ಸಂದರ್ಭದಲ್ಲಿ ಆ ಮಗು  ಮೊದಲ ಬಾರಿಗೆ ತೊದಲು ಮಾತುಗಳನ್ನಾಡಿದ್ದನ್ನು ಕಂಡು  ಮಗುವಿನ ತಾಯಿ ಭಾವುಕರಾಗಿದ್ದಾರೆ. 

Viral Video: ಮಾತು ಬಾರದ ಮಗನ ಮೊದಲ ತೊದಲು ನುಡಿಗಳನ್ನು ಕೇಳಿ ಭಾವುಕಳಾದ ತಾಯಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 10, 2024 | 5:16 PM

ಕಿವಿ ಕೇಳಿಸದ ಹಾಗೂ ಮಾತು ಬಾರದ ಮೂಕ ಮಕ್ಕಳ ವೇದನೆಯನ್ನು ಹೆತ್ತಮ್ಮ ಮಾತ್ರ ಸುಲಭವಾಗಿ ಅರ್ಥೈಸಬಲ್ಲಳು. ತನ್ನ ಮಗುವಿನ ಜೊತೆಗೆ ಪ್ರತಿನಿತ್ಯ ಸಂವಹನ ನಡೆಸುತ್ತಾ ಮೂಕ ಮಗುವನ್ನು ಮಾತನಾಡಿಸುವ ಪ್ರಯತ್ನ ಮಾಡುತ್ತಾಳೆ. ಅಂತಹದೇ ತಾಯಿ ಮತ್ತು ಮೂಕ ಮಗುವಿನ ಸುಂದರ ವಿಡಿಯೋವೊಂದು ಇದೀಗ ಹರಿದಾಡುತ್ತಿದ್ದು, ಮಾತು ಬಾರದ ಮಗನ ಜೊತೆ ತಾಯಿಯೊಬ್ಬರು  “ಗುಡ್ ಮಾರ್ನಿಂಗ್ ಮಗನೇ” ಎಂದು ಹೇಳುವಾಗ ಮಾತು ಬಾರದ ಆ ಮಗು ಮೊದಲ ಬಾರಿಗೆ ಮೊದಲ ಬಾರಿಗೆ ಮಾತುಗಳನ್ನಾಡುತ್ತದೆ.  ಮೊದಲ ಸಲ ಮಗನ ಮಾತುಗಳನ್ನು ಕೇಳಿ ಆ ತಾಯಿ ಭಾವುಕರಾಗಿದ್ದಾರೆ. ಈ ಕುರಿತ ಭಾವನಾತ್ಮಕ ವಿಡಿಯೋವೊಂದು ಇದೀಗ ವೈರಲ್ ಆಗಿದೆ.

ಈ ವಿಡಿಯೋವೊಂದನ್ನು buitengebieden ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಮಾತು ಬಾರದ ಮಗು ತನ್ನ ತಾಯಿಯೊಂದಿಗೆ ಮೊದಲ ಬಾರಿಗೆ ಮಾತನಾಡಿದ ಕ್ಷಣ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ಮೂಕ ಮಗನೊಂದಿಗೆ ಆತನ ತಾಯಿ ಸಂವಹನ ನಡೆಸುತ್ತಿರುವ ದೃಶ್ಯವನ್ನು ಕಾಣಬಹುದು. ಬೆಳಗ್ಗೆ ಎದ್ದು ಮಾತು ಬಾರದ ಮಗನ ಬಳಿ ಬಂದಂತಹ ತಾಯಿ ಗುಡ್ ಮಾರ್ನಿಂಗ್ ಮಗನೇ ಎಂದು ಹೇಳುತ್ತಾರೆ. ಜೊತೆಗೆ ನೀನು ಕೂಡಾ ಗುಡ್ ಮಾರ್ನಿಂಗ್ ಎಂದು ಹೇಳು ಕಂದ ಅಂತ ಹೇಳ್ತಾರೆ. ಆ ಸಂದರ್ಭದಲ್ಲಿ ಅಮ್ಮನ ಹತ್ತಿರ ಬಂದು ಪುಟ್ಟ ಮಗ ಮುದ್ದಾಗಿ ಗುಡ್ ಮಾರ್ನಿಂಗ್ ಎನ್ನುತ್ತಾ ಅಲ್ಲಿಂದ ಎದ್ದು ಹೋಗ್ತಾನೆ. ಹೀಗೆ ಮಾತು ಬಾರದ ಮಗ ಮೊದಲ ಬಾರಿಗೆ ಮಾತನಾಡಿದ್ದನ್ನು ಕಂಡು ಆ ತಾಯಿ ಭಾವುಕರಾಗಿದ್ದಾರೆ.

ಇದನ್ನೂ ಓದಿ: ಬಿಯರ್ ಖರೀದಿಸುವಾಗ ತಂದೆ ಕೈಗೆ ತಗ್ಲಾಕೊಂಡ ಯುವಕ, ಬಾರ್​​​ನಲ್ಲಿ ಎಲ್ಲರ ಮುಂದೆ ಮಗನಿಗೆ ಚಪ್ಪಲಿ ಏಟು

ಜೂನ್  08 ರಂದು ಹಂಚಿಕೊಳ್ಳಲಾದ ಈ ವಿಡಿಯೋ 11.7 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದ್ದು, ಈ ಮುದ್ದಾದ ವಿಡಿಯೋವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ