AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಆದಾಯದ ಹಣವನ್ನು ಗಾಯಕಿ ಲತಾ ಮಂಗೇಶ್ಕರ್​ ಚಿಕಿತ್ಸೆಗೆ ನೀಡಿದ ಆಟೋ ಚಾಲಕ

ಮುಂಬೈನ ಆಟೋ ಚಾಲಕನೊಬ್ಬ ತನ್ನ ಸಂಪಾದನೆಯನ್ನು ಲತಾ ಅವರ ಚಿಕಿತ್ಸೆಗೆ ನೀಡಿದ್ದಾರೆ. ಸತ್ಯವಾನ್ ಗೀತೆ ಎನ್ನುವ ಮುಂಬೈನ ಆಟೋ ಚಾಲಕ  ಲತಾ ಮಂಗೇಶ್ಕರ್​ ಅವರ ಚಿಕಿತ್ಸೆಗೆ ಹಣ ನೀಡಿದ್ದಾರೆ.

ತನ್ನ ಆದಾಯದ ಹಣವನ್ನು ಗಾಯಕಿ ಲತಾ ಮಂಗೇಶ್ಕರ್​ ಚಿಕಿತ್ಸೆಗೆ ನೀಡಿದ ಆಟೋ ಚಾಲಕ
ಆಟೋ ಮೇಲೆ ಲತಾ ಮಂಗೇಶ್ಕರ್​ ಭಾವಚಿತ್ರ
TV9 Web
| Edited By: |

Updated on: Jan 21, 2022 | 4:57 PM

Share

ಲತಾ ಮಂಗೇಶ್ಕರ್​ ಲಕ್ಷಾಂತರ ಜನರ ನೆಚ್ಚಿನ ಗಾಯಕಿ. ಅದೆಷ್ಟೋ ಜನರ ಪೇವರೇಟ್​ ಹಾಡುಗಳಿಗೆ ಜೀವ ತುಂಬಿದವರು. ಇದೀಗ ಕೋರೋನಾಕ್ಕೆ ತುತ್ತಾಗಿ ಮುಂಬೈ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲತಾ ಅವರ ಅಭಿಮಾನಿಗಳು ಅವರು ಗುಣಮುಖರಾಗುವಂತೆ ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಸಂಪಾದನೆಯನ್ನು ಲತಾ ಅವರ ಚಿಕಿತ್ಸೆಗೆ ನೀಡಿದ್ದಾರೆ. ಸತ್ಯವಾನ್ ಗೀತೆ ಎನ್ನುವ ಮುಂಬೈನ ಆಟೋ ಚಾಲಕ  ಲತಾ ಮಂಗೇಶ್ಕರ್​ ಅವರ ಚಿಕಿತ್ಸೆಗೆ ಹಣ ನೀಡಿದ್ದಾರೆ.

ಲತಾ ಮಂಗೇಶ್ಕರ್​ ಅವರ ದೊಡ್ಡ ಅಭಿಮಾನಿಯಾಗಿರುವ ಸತ್ಯವಾನ್ ಗೀತೆ ತಮ್ಮ ಆಟೋದ ಮೇಲೆಯೂ ಲತಾ ಅವರ ಭಾವಚಿತ್ರವನ್ನು ಹಾಕಿಕೊಂಡಿದ್ದಾರೆ. ಲತಾ ಅವರನ್ನು ದೇವಿ ಸರಸ್ವತಿಯಂತೆ ಕಾಣುವ ಸತ್ಯವಾನ್​ ತನ್ನ ಆಟೋವನ್ನು ಅವರ ಭಾವಚಿತ್ರಗಳಿಂದಲೇ ಅಲಂಕರಿಸಿಕೊಂಡಿದ್ದಾರೆ. ಭಾವಚಿತ್ರಗಳೊಂದಿಗೆ ಲತಾ ಅವರ ಹಾಡಿನ ಸಾಲುಗಳನ್ನು ಬರೆದಿದ್ದು ಅವರು ಬೇಗ ಗುಣಮುಖರಾಗುವಂತೆ ಕೇಳಿ ಬರೆದುಕೊಂಡಿದ್ದಾರೆ.

latha mangeshkar

ಕೊರೋನಾ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ ಅವರು ಕಳೆದ 10 ದಿನಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು ಐಸಿಯುವಿನಲ್ಲಿ ಚಿಕಿತ್ಸೆ ಮುಂದೆವರೆದಿದೆ ಎಂದು ವೈದ್ಯರು ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:

ಹೃದಯ ಕದ್ದ ಹುಡುಗಿಯ ಅಮ್ಮನಿಗೆ ಕಿಡ್ನಿ ಕೊಟ್ಟ ಪ್ರೇಮಿ; ಒಂದೇ ತಿಂಗಳಲ್ಲಿ ಬೇರೊಬ್ಬನನ್ನು ಮದುವೆಯಾದ ಯುವತಿ!

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ