AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆಟೋದಲ್ಲಿ ಅಳುತ್ತಾ ಕುಳಿತಿದ್ದ ಯುವತಿಗೆ ಧೈರ್ಯ ತುಂಬಿದ ಡ್ರೈವರ್, ಕಾರಣ ಇದೇ ನೋಡಿ

ಈಗಿನ ಕಾಲದಲ್ಲಿ ಬೇರೆಯವರ ಕಷ್ಟಕ್ಕೆ ಸ್ಪಂದಿಸುವವರು ಸಿಗೋದೇ ಕಡಿಮೆ. ಆದರೆ ಇಲ್ಲೊಬ್ಬ ಆಟೋ ಡ್ರೈವರ್ ತನ್ನ ಒಳ್ಳೆಯ ನಡೆ ನುಡಿಯಿಂದಲೇ ಗಮನ ಸೆಳೆದಿದ್ದಾನೆ. ತನ್ನ ಆಟೋದಲ್ಲಿ ಅಳುತ್ತಾ ಕುಳಿತಿದ್ದ ಯುವತಿಗೆ ಸಾಂತ್ವನ ನೀಡಿದ್ದಾನೆ. ಈ ಹೃದಯ ಸ್ಪರ್ಶಿ ಘಟನೆಯ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಆಟೋದಲ್ಲಿ ಅಳುತ್ತಾ ಕುಳಿತಿದ್ದ ಯುವತಿಗೆ ಧೈರ್ಯ ತುಂಬಿದ ಡ್ರೈವರ್, ಕಾರಣ ಇದೇ ನೋಡಿ
ವೈರಲ್‌ ಪೋಸ್ಟ್Image Credit source: Twitter
ಸಾಯಿನಂದಾ
|

Updated on: Aug 25, 2026 | 3:30 PM

Share

ಈಗಿನ ಕಾಲದಲ್ಲಿ ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಸಿಗುವುದೇ ಅಪರೂಪ. ಅಪರಿಚಿತ ವ್ಯಕ್ತಿಗಳಿಗೆ ಸಹಾಯ ಮಾಡುವ, ಸಾಂತ್ವನ ನೀಡುವ ವ್ಯಕ್ತಿಗಳನ್ನು ನೋಡಿದಾಗ ಖುಷಿಯಾಗುತ್ತದೆ. ಇದೀಗ ಯುವತಿಗೆ ಕೆಲಸಕ್ಕೆ ತೆರಳುವ ವೇಳೆ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ತೊಂದರೆ ಕೊಟ್ಟಿದ್ದಾನೆ. ಇದರಿಂದ‌ ನೊಂದ ಯುವತಿಯು ಆಟೋದಲ್ಲಿ ಕುಳಿತು ಅಳಲು ಪ್ರಾರಂಭಿಸಿದ್ದಾಳೆ. ಇದನ್ನು ಗಮನಿಸಿದ ಆಟೋ ಚಾಲಕನು (auto driver) ಯುವತಿಯನ್ನು ಸಮಾಧಾನಪಡಿಸಿ ಧೈರ್ಯ ತುಂಬಿದ್ದಾನೆ. ತನಗಾದ ಕಹಿ ಅನುಭವ ಹಂಚಿಕೊಂಡ ಯುವತಿಯ ಪೋಸ್ಟ್ ಸದ್ಯ ವೈರಲ್ ಆಗಿದೆ.

ಆಯುಷಿ (Ayushi) ತನ್ನ ಹೆಸರಿನ ಎಕ್ಸ್ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಳ್ಳಲಾಗಿದೆ. ಈ ಪೋಸ್ಟ್‌ನಲ್ಲಿ, ಸ್ವಲ್ಪ ಹೊತ್ತಿನ ಹಿಂದಷ್ಟೇ ದಾರಿಯಲ್ಲಿ ಎದುರಾದ ಒಬ್ಬ ವ್ಯಕ್ತಿಯಿಂದಾಗಿ, ಕಚೇರಿಗೆ ಹೋಗುವ ದಾರಿಯಲ್ಲಿ ಆಟೋದಲ್ಲೇ ಅಳಲು ಶುರುಮಾಡಿದೆ. ಆದರೆ ಇದನ್ನೂ ನೋಡಿದ ಆಟೋಚಾಲಕ ಹಿಂದಿ ಭಾಷೆ ಸ್ವಲ್ಪವೂ ಬರದಿದ್ದರೂ ನನ್ನನ್ನು ಸಮಾಧಾನಪಡಿಸುತ್ತಾ, ದೇವರಿದ್ದಾನೆ ಎಂದನು. ಈ ಮುದ್ದಾದ ಅಣ್ಣ ಬೆಳಗಿನ ಉಪಾಹಾರ ತಿಂದಿದ್ದೀರಾ?ಎಂದು ವಿಚಾರಿಸಿದನು. ಇಲ್ಲಿ ಇಂತಹ ಆತ್ಮೀಯತೆಯನ್ನು ನಾನು ಇದಕ್ಕೂ ಮುನ್ನ ಅನುಭವಿಸಿರಲಿಲ್ಲ. ನಮ್ಮ ಮನಸ್ಸನ್ನು ನೋಯಿಸುವ ಅದೇ ಸ್ಥಳವು ಅದನ್ನು ಗುಣಪಡಿಸಬಲ್ಲದು ಎಂಬುದಕ್ಕೆ ಇದೊಂದು ಉತ್ತಮ ನಿದರ್ಶನ. ನೀವು ಚಿನ್ನಕ್ಕಾಗಿ ಹುಡುಕಿದರೆ, ನಿಮಗೆ ಚಿನ್ನವೇ ಸಿಗುತ್ತದೆ. ಚಂದನ್ ಅಣ್ಣಾ ಗ್ರೇಟ್ ಎಂದು ಯುವತಿ ಬರೆದುಕೊಂಡಿದ್ದಾಳೆ.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: ಬೀದಿನಾಯಿಗಳ ಜತೆಗೆ ಜಾಲಿ ರೈಡ್ ಹೊರಟ ರಿಕ್ಷಾ ಚಾಲಕ

ಈ ಪೋಸ್ಟ್ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನೀವು ಆರಾಮಾಗಿ ಇದ್ದೀರಾ ಅಲ್ವಾ, ಜಾಗರೂಕರಾಗಿರಿ ಎಂದಿದ್ದಾರೆ. ಮತ್ತೊಬ್ಬರು, ಎಲ್ಲಾ ಗಂಡಸರು ಕೆಟ್ಟವರಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ನೀವು ಹೇಳುವುದನ್ನು ಕೇಳುವುದನ್ನು ಬೇಸರವಾಗುತ್ತಿದೆ. ಬೇಗನೇ ಚೇತರಿಸಿಕೊಳ್ಳಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!