AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿನ್ನ, ಬೆಳ್ಳಿ, ವಜ್ರ ಬಳಸಿ 2.5 ಕೆಜಿ ತೂಕದ ರಾಮ ಮಂದಿರ ತಯಾರಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಲಾವಿದ 

ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದಿನಗಣನೆ ಶುರುವಾಗಿದ್ದು, ದೇಶದಲ್ಲಿ ಸಂಭ್ರಮ ಮನೆ ಮಾಡಿದೆ.  ಈ ನಡುವೆ  ಕುಶಲಕರ್ಮಿಯೊಬ್ಬರು ಚಿನ್ನ ಬೆಳ್ಳಿ ಮತ್ತು ವಜ್ರಗಳನ್ನು ಬಳಸಿಕೊಂಡು ಗುಲಾಬಿ ಮೀನಕರಿ ಕಲಾಪ್ರಕಾದರಲ್ಲಿ  ರಾಮ ಮಂದಿರದ ಸುಂದರ ಪ್ರತಿಕೃತಿಯನ್ನು ರಚಿಸಿದ್ದು, ಈ ಕುರಿತ ಸುದ್ದಿಯೊಂದು ಸದ್ಯ ವೈರಲ್ ಆಗುತ್ತಿದೆ. 

Viral Video: ಚಿನ್ನ, ಬೆಳ್ಳಿ, ವಜ್ರ ಬಳಸಿ 2.5 ಕೆಜಿ ತೂಕದ ರಾಮ ಮಂದಿರ ತಯಾರಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಲಾವಿದ 
ಮಾಲಾಶ್ರೀ ಅಂಚನ್​
| Edited By: |

Updated on:Jan 18, 2024 | 4:31 PM

Share

ರಾಮ ಮಂದಿರ ಉದ್ಘಾಟನೆಗೆ ದಿನ ಗಣನೆ ಶುರುವಾಗಿದೆ. ಇದಾಗಲೇ ರಾಮ ಮಂದಿರದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ದೇಶದಲ್ಲಿ ಸಂಭ್ರಮ ಮನೆ ಮಾಡಿದೆ. ಈ ನಡುವೆ ವಾರಣಾಸಿಯ ಗುಲಾಬಿ ಮೀನಕರಿ ಕುಶಲಕರ್ಮಿಯೊಬ್ಬರು ಚಿನ್ನ, ಬೆಳ್ಳಿ ಮತ್ತು ವಜ್ರಗಳನ್ನು ಬಳಸಿಕೊಂಡು ಗುಲಾಮಿ ಮೀನಕರಿಯಲ್ಲಿ ರಾಮ ಮಂದಿರದ ಸುಂದರ ಪ್ರತಿಕೃತಿಯನ್ನು ತಯಾರಿಸಿದ್ದು, ಈ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದೆ.

ವಾರಣಾಸಿಯ ಗಾಯ್ ಘಾಟ್ ನಿವಾಸಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಗುಲಾಬಿ ಮೀನಕರಿ ಕುಶಲಕರ್ಮಿ ಕುಂಜ್ ಬಿಹಾರಿ ಈ ಪ್ರತಿಕೃತಿಯನ್ನು ತಯಾರಿಸಿದ್ದು, ಈ ಪ್ರತಿಕೃತಿಯನ್ನು ಪೂರ್ಣಗೊಳಿಸಲು ಅವರು 108 ದಿನಗಳನ್ನು ತೆಗೆದುಕೊಂಡಿದ್ದಾರೆ. ಮೀನಕರಿ ಕಲಾಕೃತಿಯನ್ನು ರಚಿಸುವಲ್ಲಿ ಪರಿಣಿತಿಯನ್ನು ಹೊಂದಿರುವ ಕುಂಜ್, ಮೊದಲಿಗೆ ಮೀನಕರಿಯಿಂದ ರಾಮ ಮಂದಿರದ ಪ್ರತಿಕೃತಿಯನ್ನು ರಚಿಸಿ, ನಂತರ ಅದರ ಮೇಲ್ಮೈಯನ್ನು ಚಿನ್ನ, ಅನ್ ಕಟ್ ವಜ್ರ ಮತ್ತು ಬೆಳ್ಳಿಯಿಂದ ಅಲಂಕರಿಸಿದ್ದಾರೆ. ಜೊತೆಗೆ ಇವರು ತಯಾರಿಸಿದಂತಹ ರಾಮ ಮಂದಿರದ ಪ್ರತಿಕೃತಿಯ ಒಳ ಭಾಗದಲ್ಲಿ ಚಿನ್ನದಿಂದ ಮಾಡಿದಂತಹ ರಾಮ ಲಲ್ಲಾ ವಿಗ್ರಹವನ್ನು ಸಹ ಇರಿಸಿದ್ದಾರೆ.

ಮೊದಲಿಗೆ ಮೀನಕರಿಯಿಂದ ರಾಮ ಮಂದಿರವನ್ನು ರಚಿಸಿ, ಅದರ ಹೊರ ವಿನ್ಯಾಸವನ್ನು ರಚಿಸಲು ಚಿನ್ನದ ಜೊತೆಗೆ  ಬೆಳ್ಳಿಯನ್ನು  ಸಹ ಬಳಸಿದ್ದಾರೆ. ಮತ್ತು ಅನ್ ಕಟ್ ವಜ್ರಗಳನ್ನು ಬಳಸಿ ಗೋಪುರವನ್ನು  ಅಲಂಕರಿಸಿದ್ದಾರೆ.  ಹೀಗೆ ಚಿನ್ನ, ಒಂದುವರೆ ಕಿಲೋ ಬೆಳ್ಳಿ ಮತ್ತು ಅನ್ ಕಟ್  ವಜ್ರಗಳಿಂದ ಮಾಡಲ್ಪಟ್ಟ ಈ ಪ್ರತಿಕೃತಿ 12 ಇಂಚು ಎತ್ತರ, 12 ಇಂಚು ಉದ್ದ ಮತ್ತು 8 ಇಂಚು ಅಗಲವನ್ನು ಹೊಂದಿದ್ದು,  ಸುಮಾರು 2.5 ಕೆಜಿ ಯಷ್ಟು ತೂಗುತ್ತದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಕುಂಜ್ ಬಿಹಾರಿ, ಶ್ರೀರಾಮನ ಕೃಪೆಯಿಂದ ಈ ವಿಶೇಷ ಪ್ರತಿಕೃತಿಯನ್ನು ತಯಾರಿಸಲು ಸಾಧ್ಯವಾಯಿತು ಎಂದು ಹೇಳಿದ್ದಾರೆ. ಮೊದಲಿಗೆ ಇವರು ಗುಲಾಬಿ ಮೀನಕರಿಯಿಂದ ರಾಮ ಮಂದಿರದ ಪ್ರತಿಕೃತಿಯನ್ನು ರಚಿಸುವ ಕಾರ್ಯಕ್ಕೆ ಕೈ ಹಾಕಿದಾಗ ಎಷ್ಟೇ ಪ್ರಯತ್ನ ಪಟ್ಟರು ಅದರಲ್ಲಿ ನಿಖರವಾದ ಆಕಾರವನ್ನು ರೂಪಿಸಲು ಅವರಿಗೆ ಸಾಧ್ಯವಾಗಲಿಲ್ಲವಂತೆ. ನಂತರ ಅವರು ಶ್ರೀರಾಮನನ್ನು ನೆನೆಯತ್ತಾ, ರಾಮನ ಸ್ತೋತ್ರಗಳನ್ನು ಕೇಳುವ ಮೂಲಕ ಮತ್ತೊಮ್ಮೆ ಗುಲಾಬಿ ಮೀನಕರಿ ಕಲಾ ಪ್ರಕಾರದಲ್ಲಿ ರಾಮ ಮಂದಿರದ  ಪ್ರತಿಕೃತಿಯನ್ನು ರಚಿಸಲು ಆರಂಭಿಸುತ್ತಾರೆ. ಹೀಗೆ ಸತತ 108 ದಿನಗಳ  ಪ್ರಯತ್ನದಲ್ಲಿ ಅವರು ಸುಂದರವಾದ ರಾಮ ಮಂದಿರ ಪ್ರತಿಕೃತಿಯನ್ನು ತಯಾರಿಸುವಲ್ಲಿ ಯಶಸ್ವಿಯಾಗುತ್ತಾರೆ. ಇದೆಲ್ಲಾ ಶ್ರೀರಾಮನ ಕೃಪೆಯಿಂದ ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮ ಸ್ತೋತ್ರ ಪಠಿಸುತ್ತಾ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ರಾಮ ಭಕ್ತರು

ಇನ್ನೂ ಗುಲಾಬಿ ಮೀನಕರಿಯ ವಿಷಯಕ್ಕೆ ಬರುವುದಾದರೆ, ಇದೊಂದು ಉತ್ತರ ಪ್ರದೇಶದ ವಾರಣಾಸಿಯ GI-ಟ್ಯಾಗ್ ಮಾಡಲಾದ ಕಲಾ ಪ್ರಕಾರವಾಗಿದೆ. ಈ ಕಲೆಯನ್ನು ಮೊಘಲರು ಭಾರತಕ್ಕೆ ಪರಿಚಯಿಸಿದರು ಎಂದು ಹೇಳಲಾಗುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Thu, 18 January 24

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ