AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ಮುಂದಿನ ದಿನಗಳಲ್ಲಿ ಜಗತ್ತನ್ನೇ ಆಳಲಿದೆ: ರಷ್ಯಾ ಉಕ್ರೇನ್​ ಯುದ್ಧದ ಬಗ್ಗೆ ಬಾಬಾ ವಂಗಾ ಭವಿಷ್ಯ

ಬಾಬಾ ವಂಗಾ ಭವಿಷ್ಯದ  ಪ್ರಕಾರ ರಷ್ಯಾ ಅಧ್ಯಕ್ಷ ಉಕ್ರೇನ್​ ಯುದ್ಧದ ಬಳಿಕ ಇನ್ನಷ್ಟು ಬಲಶಾಲಿಯಾಗಲಿದ್ದಾರೆ. ರಷ್ಯಾ ಮುಂದಿನ ದಿನಗಳಲ್ಲಿ ಜಗತ್ತನ್ನೇ ಆಳಲಿದೆ. ಭವಿಷ್ಯದಲ್ಲಿ ರಷ್ಯಾ ಜಗತ್ತಿನ ರಾಜನಾಗಲಿದೆ. ಆದರೆ ಯುರೋಪ್​ ಪಾಳುಭೂಮಿಯಾಗಲಿದೆ.

ರಷ್ಯಾ ಮುಂದಿನ ದಿನಗಳಲ್ಲಿ ಜಗತ್ತನ್ನೇ ಆಳಲಿದೆ: ರಷ್ಯಾ ಉಕ್ರೇನ್​ ಯುದ್ಧದ ಬಗ್ಗೆ ಬಾಬಾ ವಂಗಾ ಭವಿಷ್ಯ
ಬಾಬಾ ವಂಗಾ
TV9 Web
| Updated By: Pavitra Bhat Jigalemane|

Updated on:Mar 02, 2022 | 12:47 PM

Share

ಉಕ್ರೇನ್ (Ukraine)​ ದೇಶದ ಮೇಲೆ ರಷ್ಯಾ (Russia) ನಡೆಸಿದ ದಾಳಿಯಿಂದ ಕೇವಲ ಉಕ್ರೇನ್​ ಮಾತ್ರವಲ್ಲ ಇಡೀ ಜಗತ್ತಿನ ಜನ ಕಂಗೆಟ್ಟಿದ್ದಾರೆ. ಉಕ್ರೇನ್​ ನಾಗರಿಕರು ರಷ್ಯಾ ದಾಳಿಗೆ ಜೀವಕಳೆದುಕೊಳ್ಳುತ್ತಿದ್ದಾರೆ. ಇದರ ನಡುವೆ ಬಾಬಾವಂಗಾ (Baba Vanga) ಭವಿಷ್ಯ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಈ ಹಿಂದೆ ಹಲವು ಅಂತರಾಷ್ಟ್ರೀಯ ವಿದ್ಯಮಾನಗಳ ಬಗ್ಗೆ ಭವಿಷ್ಯ ನುಡಿದಿದ್ದ ಬಾಬಾ ವಾಂಗಾ ಇದೀಗ ಯುದ್ಧದಲ್ಲಿ ಯಾರು ಹೆಚ್ಚು ಬಲ, ಯಾರು ಗೆಲ್ಲುತ್ತಾರೆ ಎನ್ನುವ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದ್ದು, ಈ ವಿಚಾರ ಜಗತ್ತಿನೆಲ್ಲೆಡೆ ವೈರಲ್​ ಆಗಿದೆ.

ಬಾಬಾ ವಂಗಾ ಭವಿಷ್ಯದ  ಪ್ರಕಾರ ರಷ್ಯಾ ಅಧ್ಯಕ್ಷ ಉಕ್ರೇನ್​ ಯುದ್ಧದ ಬಳಿಕ ಇನ್ನಷ್ಟು ಬಲಶಾಲಿಯಾಗಲಿದ್ದಾರೆ. ರಷ್ಯಾ ಮುಂದಿನ ದಿನಗಳಲ್ಲಿ ಜಗತ್ತನ್ನೇ ಆಳಲಿದೆ. ಭವಿಷ್ಯದಲ್ಲಿ ರಷ್ಯಾ ಜಗತ್ತಿನ ರಾಜನಾಗಲಿದೆ. ಆದರೆ ಯುರೋಪ್​ ಪಾಳುಭೂಮಿಯಾಗಲಿದೆ. ಎಲ್ಲವೂ ಹಿಮದಂತೆ ಕರಗುತ್ತದೆ, ಒಂದೇ ಒಂದು ವಿಷಯವನ್ನು ವ್ಲಾಡಿಮಿರ್ ಪುಟಿನ್ ಅವರ ವೈಭವ, ರಷ್ಯಾದ ವೈಭವವನ್ನು ಯಾರೂ ಸ್ಪರ್ಶಿಸಲು ಸಾಧ್ಯವಾಗುವುದಿಲ್ಲ . ರಷ್ಯಾವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ರಷ್ಯಾ ತನ್ನ ಹಾದಿಯಿಂದ ಎಲ್ಲರನ್ನು ತೆಗೆದುಹಾಕುತ್ತದೆ ಮತ್ತು ಜಗತ್ತನ್ನು ಆಳುತ್ತದೆ ಎಂದಿದ್ದಾರೆ.

ಯಾರು ಈ ಬಾಬಾ ವಂಗಾ? ಬಾಬಾ ವಂಗಾ ಅವರ ನಿಜವಾದ ಹೆಸರು ವಂಜೆಲಿಯಾ ಪಾಂಡೆವಾ ಗುಶ್ಟೆರೋವಾ ಎಂದಾಗಿದೆ. 1911ರಲ್ಲಿ ಬಲ್ಗೇರಿಯಾ ಜನಿಸಿದ ಇವರು, ತಮ್ಮ 12 ನೇ ವಯಸ್ಸಿನಲ್ಲಿ ಚಂಡಮಾರುತದಲ್ಲಿ ಕಣ್ಣನ್ನು ಕಳೆದುಕೊಂಡಿದ್ದರು. ಆದರೆ ಅವರಿಗೆ ಜಗತ್ತಿನ ಕುರಿತಾದ ಭವಿಷ್ಯವನ್ನು ಹೇಳುವ ಶಕ್ತಿ ಇದೆ ನಂಬಲಾಗಿದೆ. ಅದರಂತೆಯೇ ಬಾಬಾ ವಂಗಾ ಹೇಳಿದ್ದ ಘಟನೆಗಳು ಕೂಡ ನಡೆದಿದೆ. ಬಾಬಾ ವಂಗಾ 1996ರಲ್ಲಿ ಸಾವನ್ನಪ್ಪಿದರು ಆಗ ಅವರಿಗೆ 85 ವರ್ಷ ವಯಸ್ಸಾಗಿತ್ತು. ಅಷ್ಟರಲ್ಲಿಯೇ ಅವರು ಹಲವು  ವರ್ಷಗಳವರೆಗೆ ಜಗತ್ತಿನಲ್ಲಿ ಏನು ನಡೆಯಲಿದೆ ಎನ್ನುವುದನ್ನು ಭವಿಷ್ಯ ನುಡಿದಿದ್ದಾರೆ ಎಂದು ಹೇಳಲಾಗುತ್ತದೆ. ಅವರು ಸುಮಾರು 5079 ಘಟನೆಗಳ ಬಗ್ಗೆ ಹೇಳಿದ್ದರು ಎನ್ನಲಾಗಿದ್ದು ಅದರಲ್ಲಿ ಸಾಕಷ್ಟು ಘಟನೆಗಳು ಸತ್ಯವಾಗಿವೆ. ಅದರಲ್ಲಿ ಕೆಲವು ಎಂದರೆ ಚರ್ನೋಬಿಲ್​ ದುರಂತ, ಪ್ರಿನ್ಸಸ್​ ಡಯಾನಾ ಅವರ ಸಾವು ಸೇರಿದಂತೆ ಒಟ್ಟು ಸುಮಾರು 85 ಪ್ರತಿಶತದಷ್ಟು  ಭವಿಷ್ಯ ನಿಜವಾಗಿದೆ ಎಂದು ಹೇಳಲಾಗಿದೆ. 

ಇದನ್ನೂ ಓದಿ:

ಹಿಮಾಲಯನ್​ ಕಪ್ಪು ಕರಡಿಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅಧಿಕಾರಿಗಳು: ವಿಡಿಯೋ ವೈರಲ್

Published On - 10:02 am, Wed, 2 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?