AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Vanga’s 2025 Prediction: ಮಾನವನ ಅಂತ್ಯಕ್ಕೆ 2025 ಬುನಾದಿ, ಶಾಕಿಂಗ್ ಭವಿಷ್ಯ ನುಡಿದ ಬಾಬಾ ವಂಗಾ

ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿರುವ ಬಲ್ಗೇರಿಯಾದ ಬಾಂಬಾ ವಂಗಾ ಅವರು ನುಡಿದಿರುವ ಹೆಚ್ಚಿನ ಭವಿಷ್ಯವಾಣಿಗಳು ನಿಜವಾಗಿವೆ. ಅವರು 2025 ರಲ್ಲಿ ಈ ಜಗತ್ತಿನಲ್ಲಿ ಏನೆಲ್ಲಾ ಸಂಗತಿಗಳು ನಡೆಯುತ್ತವೆ ಎಂಬ ಬಗ್ಗೆಯೂ ಭವಿಷ್ಯ ನುಡಿದಿದ್ದು, ಈ ಕುರಿತು ಸುದ್ದಿಯೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.

Baba Vanga's 2025 Prediction: ಮಾನವನ ಅಂತ್ಯಕ್ಕೆ 2025 ಬುನಾದಿ, ಶಾಕಿಂಗ್ ಭವಿಷ್ಯ ನುಡಿದ ಬಾಬಾ ವಂಗಾ
ಬಾಬಾ ವಂಗಾ
ಮಾಲಾಶ್ರೀ ಅಂಚನ್​
| Edited By: |

Updated on: Jul 12, 2024 | 2:47 PM

Share

ಬಾಬಾ ವಂಗಾ ಬಗ್ಗೆ ಹೆಚ್ಚಿನವರಿಗೆ ಗೊತ್ತೇ ಇದೆ. ಬಾಬಾ ವಂಗಾ ಬಲ್ಗೇರಿಯಾದ ಒಬ್ಬ ಪ್ರವಾದಿ. ಆಕೆಯ ಮೂಲ ಹೆಸರು ವಾಂಜೆಲಿಯಾ ಪಾಂಡೆವಾ ಡಿಮಿಟ್ರೋವ್. 1911 ರಲ್ಲಿ ಜನಿಸಿದ ಇವರು ತನ್ನ ಹನ್ನೆರಡನೆಯ ವಯಸ್ಸಿನಲ್ಲಿ ಚಂಡಮಾರುತದ ಧೂಳಿನಿಂದ ಶಾಶ್ವತವಾಗಿ ಕಣ್ಣನ್ನು ಕಳೆದುಕೊಂಡರು. ದೃಷ್ಟಿ ಕಳೆದುಕೊಂಡ ನಂತರ ಅವರು ಭವಿಷ್ಯ ಕಾಣಲು ಪ್ರಾರಂಭಿಸಿದರು. 1966 ರಲ್ಲಿ ಮರಣ ಹೊಂದಿದ ಬಾಬಾ ವಂಗಾ 51ನೇ ಶತಮಾನದ ವರೆಗೆ ಭೂಮಿಯ ಮೇಲೆ ಘಟಿಸಲಿರುವ ಪ್ರಮುಖ ಸಂಗತಿಗಳ ಬಗ್ಗೆ ಭವಿಷ್ಯವಾಣಿಗಳನ್ನು ನುಡಿದಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗ, ಅಮೆರಿಕ ಮೇಲೆ ಉಗ್ರರ ದಾಳಿ, ಜಪಾನ್ ಪ್ರವಾಹ, ಆರ್ಥಿಕ ಬಿಕ್ಕಟ್ಟು ಮುಂತಾದ ಪ್ರಮುಖ ಘಟನಾವಳಿಗಳನ್ನು ಮುಂಚೆಯೇ ಊಹಿಸಿದ್ದ ಬಾಬಾ ವಂಗಾ 2025 ರಲ್ಲಿ ನಡೆಯಲಿರುವ ಕೆಲವು ಕುತೂಹಲಕಾರಿ ಅಂಶಗಳ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

2025 ರಿಂದಲೇ ಈ ಪ್ರಪಂಚದಲ್ಲಿ ವಿನಾಶಕಾರಿ ಘಟನೆಗಳು ಆರಂಭವಾಗಲಿದ್ದು, ಇದು ಮಾನವೀಯತೆಯ ಅವನತಿಗೆ ಕಾರಣವಾಗುತ್ತದೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ಈ ವಿನಾಶವು ಮುಂದಿನ ವರ್ಷ (2025) ಯುರೋಪಿನ ಸಂಘರ್ಷದೊಂದಿಗೆ ಪ್ರಾರಂಭವಾಗಿ ಇಡೀ ಮಾನವ ಕುಲವೇ ನಾಶವಾಗುತ್ತಾ ಹೋಗಿ ಪ್ರಪಂಚವು 5079 ರಲ್ಲಿ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ.

2025 ರಲ್ಲಿ ಯುರೋಪಿನಲ್ಲಿ ಯುದ್ಧ ಆರಂಭವಾಗುತ್ತದೆ:

2025 ರಲ್ಲಿ ಯುರೋಪ್‌ನಲ್ಲಿ ವಿನಾಶಕಾರಿ ಸಂಘರ್ಷ ಪ್ರಾರಂಭವಾಗಲಿದೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ಈ ಸಂಘರ್ಷ ಎಲ್ಲೆಡೆ ಭಾರಿ ವಿನಾಶವನ್ನು ಉಂಟುಮಾಡುತ್ತದೆ. ಮತ್ತು ಈ ಕಾರಣದಿಂದಾಗಿ, ಯುರೋಪ್ ಖಂಡದಲ್ಲಿ ಜನ ಸಂಖ್ಯೆಯೂ ಕುಸಿಯುತ್ತಾ ಹೋಗಿ ನಂತರದ ವರ್ಷಗಳಲ್ಲಿ ಇಡೀ ಜಗತ್ತು ಅವನತಿಯತ್ತ ಸಾಗಬಹುದು ಎಂದು ಭವಿಷ್ಯ ವಾಣಿಯಲ್ಲಿ ಹೇಳಿದ್ದಾರೆ.

ಬಾಬಾ ವಂಗಾ ಅವರ ಇತರ ಭವಿಷ್ಯವಾಣಿಗಳು:

ಹವಾಮಾನ ಬದಲಾವಣೆಯು 2033 ರಲ್ಲಿ ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬಾಬಾ ವಾಂಗ ಭವಿಷ್ಯ ನುಡಿದಿದ್ದಾರೆ. ಮಂಜುಗಡ್ಡೆಯ ಕರಗುವಿಕೆಯು ಪ್ರಪಂಚದಾದ್ಯಂತ ಸಮುದ್ರ ಮಟ್ಟದಲ್ಲಿ ಭಾರಿ ಏರಿಕೆಗೆ ಕಾರಣವಾಗುತ್ತದೆ. 2170 ರಲ್ಲಿ ಜಾಗತಿಕ ತಾಪಮಾನ ಏರಿಕೆಯಿಂದಾಗಿ ಜಗತ್ತು ಭೀಕರ ಬರ ಪರಿಸ್ಥಿತಿಯನ್ನು ಎದುರಿಸಲಿದೆ ಎಂದು ಅವರು ಹೇಳಿದ್ದಾರೆ.

ಬಾಬಾ ವಂಗಾ ಅವರ ಭವಿಷ್ಯವಾಣಿಯ ಪ್ರಕಾರ, 3005 ರಲ್ಲಿ ಭೂಮಿ ಮತ್ತು ಮಂಗಳ ಗ್ರಹದ ನಡುವೆ ಯುದ್ಧ ಸಂಭವಿಸಬಹುದು. 3797 ರ ಹೊತ್ತಿಗೆ, ಭೂಮಿಯ ಮೇಲೆ ವಾಸಿಸಲು ಅಸಾಧ್ಯವಾಗಿ, ಮಾನವರು ಬೇರೆ ಯಾವುದಾದರೂ ಗ್ರಹದಲ್ಲಿ ಆಶ್ರಯ ಪಡೆಯಬೇಕಾಗುತ್ತದೆ ಅಂತಿಮವಾಗಿ 5079 ರ ಹೊತ್ತಿಗೆ ಭೂಮಿಯಿಂದ ಎಲ್ಲವೂ ನಾಶವಾಗುತ್ತದೆ ಮತ್ತು ಪ್ರಪಂಚವು ಅಂತ್ಯಗೊಳ್ಳುತ್ತದೆ ಎಂಬ ಭಯಾನಕ ಭವಿಷ್ಯ ನುಡಿದಿದ್ದಾರೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ