AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮರಿ ಆನೆಯನ್ನು ರಕ್ಷಿಸಿ ತಾಯಿಯ ಬಳಿ ಸೇರಿಸಿದ ತಮಿಳುನಾಡು ರಕ್ಷಣಾ ಸಿಬ್ಬಂದಿ; ಹೃದಯಸ್ಪರ್ಶಿ ವಿಡಿಯೋವಿದು

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ತಮಿಳುನಾಡು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು, ಅರಣ್ಯ ಅಧಿಕಾರಿಗಳ ಪ್ರಯತ್ನವನ್ನು ಮೆಚ್ಚಿ ಟ್ವೀಟ್ ಮಾಡಿದ್ದಾರೆ. ವಿಡಿಯೋ ನೋಡಿ..

Viral Video: ಮರಿ ಆನೆಯನ್ನು ರಕ್ಷಿಸಿ ತಾಯಿಯ ಬಳಿ ಸೇರಿಸಿದ ತಮಿಳುನಾಡು ರಕ್ಷಣಾ ಸಿಬ್ಬಂದಿ; ಹೃದಯಸ್ಪರ್ಶಿ ವಿಡಿಯೋವಿದು
ಮರಿ ಆನೆಯನ್ನು ತನ್ನ ಕುಟುಂಬದೊಂದಿಗೆ ಸೇರಿಸಿ ಕರ್ತವ್ಯ ಮೆರೆದ ತಮಿಳುನಾಡು ರಕ್ಷಣಾ ಸಿಬ್ಬಂದಿ
TV9 Web
| Updated By: Digi Tech Desk|

Updated on:Oct 08, 2021 | 9:34 AM

Share

ಕುಟುಂಬದಿಂದ ದೂರ ಉಳಿದಿದ್ದ ಮರಿ ಆನೆಯನ್ನು ರಕ್ಷಿಸಿ ಕುಂಟುಂಬಕ್ಕೆ ಸೇರಿಸಿದ ಅರಣ್ಯ ಇಲಾಖೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಹೃದಯಸ್ಪರ್ಶಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಮರಿ ಆನೆಯನ್ನು ರಕ್ಷಿಸಿ ಆನೆಯ ಕುಟುಂಬವನ್ನು ಹುಡುಕಲು ರಕ್ಷಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಮಿಳುನಾಡಿನ  ನೀರಲಗಿರಿ ಪರ್ವತಗಳಲ್ಲಿರುವ ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ತಮಿಳುನಾಡು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು, ಅರಣ್ಯ ಅಧಿಕಾರಿಗಳ ಪ್ರಯತ್ನವನ್ನು ಮೆಚ್ಚಿ ಟ್ವೀಟ್ ಮಾಡಿದ್ದಾರೆ. ಮುದುಮಲೈನಲ್ಲಿ ಪುಟ್ಟ ಮರಿ ಆನೆಯನ್ನು ರಕ್ಷಿಸಿ ಅದರ ಕುಟುಂದೊಂದಿಗೆ ಸೇರಿಸಲಾಯಿತು. ಇದು ನಿಜಕ್ಕೂ ಹೃದಯಸ್ಪರ್ಶಿ ಘಟನೆ ಎನ್ನುತ್ತಾ ರಕ್ಷಣಾ ತಂಡಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದೀಗ ವಿಡಿಯೋ ಫುಲ್ ವೈರಲ್ ಆಗಿದ್ದು 34 ಸಾವಿರಕ್ಕೂ ಹೆಚ್ಚಿನ ಲೈಕ್ಸ್​ಗಳನ್ನು ಗಳಿಸಿಕೊಂಡಿದೆ.

ರಕ್ಷಣಾ ಸಿಬ್ಬಂದಿಯಿಂದ ಮರಿ ಆನೆಯ ಮೇಲೆ ಪ್ರೀತಿಯ ಸುರಿಮಳೆ ಎನ್ನುತ್ತಾ ಹೃದಯಸ್ಪರ್ಶಿ ಘಟನೆಯನ್ನು ಮತ್ತೊಮ್ಮೆ ಸುಪ್ರಿಯಾ ಸಾಹು ನೆನೆಸಿಕೊಂಡಿದ್ದಾರೆ. ಮತ್ತೊಂದು ವಿಡಿಯೋದಲ್ಲಿ ಗಮನಿಸುವಂತೆ ಮರಿ ಆನೆ ಎತ್ತರದ ದಿಬ್ಬಗಳನ್ನು ಏರುತ್ತಾ ತಾಯಿಯನ್ನು ಗುರಿತಿಸಿದ ಬಳಿಕ ಸಂತೋಷದಿಂದ ಜೋರಾಗಿ ಕೂಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಮರಿ ಆನೆ ತಾಯಿಯ ಬಳಿ ಹೋಗುತ್ತಿದ್ದಂತೆ ದೊಡ್ಡದಾಗಿ ಕೂಗುತ್ತಿದೆ. ರಕ್ಷಣಾ ಸಿಬ್ಬಂದಿ ತಂಡದಲ್ಲಿದ್ದ ಸಚಿನ್, ವೆಂಕಟೇಶ್ ಪ್ರಭು, ಪ್ರಸಾದ್, ವಿಜಯ್, ಪ್ರವೀಣ್, ತಂಬ ಕುಮಾರ್, ಅನೀಶ್ ಕುಮಾರ್ ಮತ್ತು ಪಂಡಲೂರ್ ಎಂದು ಐಎಎಸ್ ಅಧಿಕಾರಿ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ:

Viral Video: ಅರುಣಾಚಲ ಪ್ರದೇಶದ ಪುಟ್ಟ ಬಾಲಕ ಹಾಡಿದ ಗಲ್ಲಿ ಬಾಯ್ ಚಿತ್ರದ ರ‍್ಯಾಪ್‌ ಸಾಂಗ್ ಫುಲ್ ವೈರಲ್

Viral Video: ಹಳೆಯ ಎಟಿಎಂ ಖರೀದಿಸಿ 1.49 ಲಕ್ಷ ರೂ. ಪಡೆದ ಯುವಕರು! ಖುಷಿಯಲ್ಲಿ ಕಿರುಚಾಡಿದ ವಿಡಿಯೋ ವೈರಲ್​

Published On - 8:48 am, Fri, 8 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!