AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತನ್ನ ತಾಯಿಗಾಗಿ ಹುಡುಕಾಡುತ್ತಿರುವ ಆನೆ ಮರಿ; ಮನಮಿಡಿಯುವ ವಿಡಿಯೋ ನೋಡಿ

Baby Elephant: ಈ ವಿಡಿಯೋದಲ್ಲಿ ಕೆಲವು ಅರಣ್ಯ ಅಧಿಕಾರಿಗಳು ಕಾಡಿನಲ್ಲಿ ನಡೆದು ಹೋಗುತ್ತಿರುವುದು ಕಂಡುಬಂದಿದೆ. ಮರಿ ಆನೆ ಕೂಡ ಅವರ ಜೊತೆಗೆ ನಡೆದುಕೊಂಡು ಹೋಗುತ್ತಿರುತ್ತದೆ. ಆ ಅರಣ್ಯ ಅಧಿಕಾರಿಗಳು ಮರಿ ಆನೆಗೆ ಸಹಾಯ ಮಾಡುತ್ತಿದ್ದಾರೆ.

Viral Video: ತನ್ನ ತಾಯಿಗಾಗಿ ಹುಡುಕಾಡುತ್ತಿರುವ ಆನೆ ಮರಿ; ಮನಮಿಡಿಯುವ ವಿಡಿಯೋ ನೋಡಿ
ಆನೆ ಮರಿ
Follow us
TV9 Web
| Updated By: ganapathi bhat

Updated on: Oct 07, 2021 | 10:40 PM

ತಾಯಿ ಮತ್ತು ಮಗುವಿನ ಸಂಬಂಧ ತುಂಬಾ ವಿಶೇಷವಾದದ್ದು. ಆ ಸಂಬಂಧದ ಸೌಂದರ್ಯವನ್ನು ಪದಗಳಲ್ಲಿ ವಿವರಿಸುವುದು ಕಷ್ಟಸಾಧ್ಯ. ಇದು ಮನುಷ್ಯರಲ್ಲಿ ಮಾತ್ರ ಅಲ್ಲ. ಬಹುತೇಕ ಪ್ರಾಣಿಗಳಲ್ಲಿ ಕೂಡ ಈ ಗುಣ ಕಂಡುಬರುತ್ತದೆ. ಈ ಸಂಬಂಧದ ಭಾವನೆಗಳನ್ನು ತೋರಿಸುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತದೆ. ಈಗ ಅಂತಹದೇ ಒಂದು ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಇದರಲ್ಲಿ ಕೂಡ ಮನುಷ್ಯರ ಬಗ್ಗೆ ಅಲ್ಲ. ಬದಲಾಗಿ ಆನೆಯಲ್ಲಿ ಇರುವ ತಾಯಿ- ಮಗುವಿನ ಸಂಬಂಧದ ಗುಣವನ್ನು ನಾವು ನೋಡಬಹುದು. ಈ ವಿಡಿಯೋ ನೋಡಿ ನೆಟ್ಟಿಗರು ಮನದುಂಬಿ ಪ್ರತಿಕ್ರಿಯೆ ನೀಡಿದ್ದಾರೆ.

ಆನೆಮರಿ ಒಂದು ತನ್ನ ತಾಯಿಯಿಂದ ಬೇರ್ಪಟ್ಟ ನೋವಿನಲ್ಲಿ ಇರುತ್ತದೆ. ಅಂತಹ ಕಷ್ಟದ ಸಂದರ್ಭದಲ್ಲಿ ಆನೆ ತನ್ನ ತಾಯಿಗಾಗಿ ಹುಡುಕಾಟ ನಡೆಸುತ್ತಿರುತ್ತದೆ. ಈ ವೇಳೆ, ಅರಣ್ಯ ಅಧಿಕಾರಿಗಳು ಕಾಡಿನಲ್ಲಿ ನಡೆದು ಆನೆ ಮರಿಯನ್ನು ಆನೆಯ ಕುಟುಂಬಕ್ಕೆ ಮತ್ತೆ ಪರಿಚಯಿಸಿ, ಅದರೊಂದಿಗೆ ಸೇರಿಸಿ ಬಿಡುತ್ತಾರೆ.

ಈ ವಿಡಿಯೋದಲ್ಲಿ ಕೆಲವು ಅರಣ್ಯ ಅಧಿಕಾರಿಗಳು ಕಾಡಿನಲ್ಲಿ ನಡೆದು ಹೋಗುತ್ತಿರುವುದು ಕಂಡುಬಂದಿದೆ. ಮರಿ ಆನೆ ಕೂಡ ಅವರ ಜೊತೆಗೆ ನಡೆದುಕೊಂಡು ಹೋಗುತ್ತಿರುತ್ತದೆ. ಆ ಅರಣ್ಯ ಅಧಿಕಾರಿಗಳು ಮರಿ ಆನೆಗೆ ಸಹಾಯ ಮಾಡುತ್ತಿದ್ದಾರೆ. ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಗ ಈ ವಿಡಿಯೋ ಇತರ ಸಾಮಾಜಿಕ ಜಾಲತಾಣ ಪುಟದಲ್ಲಿ ಕೂಡ ವೈರಲ್ ಆಗುತ್ತಿದೆ.

ತಮಿಳುನಾಡು ಮುದುಮಲೈ ಅರಣ್ಯ ಅಧಿಕಾರಿಗಳ ಶ್ರಮದಿಂದ ಈ ಮರಿ ಆನೆಯು ತನ್ನ ಕುಟುಂಬದೊಂದಿಗೆ ಸೇರಿಕೊಂಡಿತು ಎಂದು ಅವರು ಬರೆದುಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಇನ್ನೊಂದು ವಿಡಿಯೋದಲ್ಲಿ ಮರಿ ಆನೆಯು ಓಡುತ್ತಿರುವುದನ್ನು ಗಮನಿಸಬಹುದು. ಈ ಎರಡು ವಿಡಿಯೋಗಳಿಗೂ ಜನರು ವಿಭಿನ್ನ ಪ್ರತಿಕ್ರಿಯೆಯನ್ನು ಕೊಡುತ್ತಿದ್ದಾರೆ. ಒಬ್ಬರು ಈ ಮರಿ ತುಂಬಾ ಕ್ಯೂಟ್ ಆಗಿದೆ ಎಂದು ಬರೆದುಕೊಂಡಿದ್ದಾರೆ. ಅರಣ್ಯ ಅಧಿಕಾರಿಗಳ ಪ್ರಯತ್ನದಿಂದ ಕಾಡು ಪ್ರಾಣಿಗಳು ಚೆನ್ನಾಗಿವೆ ಎಂದು ಹೇಳಿದ್ದಾರೆ. ನಾನು ಈ ಎಲ್ಲಾ ಅರಣ್ಯ ಅಧಿಕಾರಿಗಳಿಗೆ ಗೌರವ ಸಲ್ಲಿಸುತ್ತೇನೆ ಎಂದು ಮತ್ತೊಬ್ಬರು ಬರೆದಿದ್ದಾರೆ.

ಇದನ್ನೂ ಓದಿ: Viral Video: ಅರುಣಾಚಲ ಪ್ರದೇಶದ ಪುಟ್ಟ ಬಾಲಕ ಹಾಡಿದ ಗಲ್ಲಿ ಬಾಯ್ ಚಿತ್ರದ ರ‍್ಯಾಪ್‌ ಸಾಂಗ್ ಫುಲ್ ವೈರಲ್

ಇದನ್ನೂ ಓದಿ: Viral Video: ಉಕ್ಕಿ ಹರಿಯುತ್ತಿದ್ದ ಕಾಲುವೆಗೆ ಧುಮುಕಿ ತಾಯಿ-ಮಗುವನ್ನು ಕಾಪಾಡಿದ ಪೊಲೀಸ್; ವಿಡಿಯೋ ವೈರಲ್

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ