AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಿನ್ನಲು ಹಣ್ಣು ನೀಡಿದ ಮಹಿಳೆಯೊಂದಿಗೆ ಸೇಬು ಹಣ್ಣಿಗಾಗಿ ಹಠ ಹಿಡಿದು ನಿಂತ ಮರಿಯಾನೆ

ಮರಿಯಾನೆಗಳೇ ಹಾಗೆ, ಆಟ ತುಂಟಾಟದಲ್ಲಿ ಎತ್ತಿದ ಕೈ. ಈ ಮರಿಯಾನೆಗಳ ಮುದ್ದು ಪೆದ್ದು ವಿಡಿಯೋಗಳು ಆಗಾಗ ನೆಟ್ಟಿಗರ ಕಣ್ಮನ ಸೆಳೆಯುತ್ತದೆ. ಇದೀಗ ಪುಟಾಣಿ ಆನೆಗೆ ಮಹಿಳೆಯೂ ತಿನ್ನಲು ಹಣ್ಣನ್ನು ನೀಡಿದ್ದಾಳೆ. ಆದರೆ ಈ ಮರಿಯಾನೆ ಮಾಡಿದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತಿನ್ನಲು ಹಣ್ಣು ನೀಡಿದ ಮಹಿಳೆಯೊಂದಿಗೆ ಸೇಬು ಹಣ್ಣಿಗಾಗಿ ಹಠ ಹಿಡಿದು ನಿಂತ ಮರಿಯಾನೆ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 22, 2025 | 12:12 PM

Share

ಮರಿಯಾನೆಗಳ (baby elephant) ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವ ಖುಷಿಯೇ ಬೇರೆ. ಯಾರಾದ್ರೂ ಕೈಯಲ್ಲಿ ಹಣ್ಣುಗಳನ್ನು ಕಂಡರೆ ಮೆಲ್ಲನೆ ಹೋಗಿ ಹಣ್ಣುಗಳನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುತ್ತವೆ. ಆದರೆ ಮಹಿಳೆಯೊಬ್ಬಳು ಮರಿಯಾನೆಗೆ ತಿನ್ನಲು ಹಣ್ಣನ್ನು ನೀಡಿದ್ದಾಳೆ. ಬಾಳೆಹಣ್ಣು ತಿನ್ನಲು ನೀಡುತ್ತಿದ್ದಂತೆ ಬೇಡ ಎನ್ನುವಂತೆ ಸೊಂಡಿಲಿನಿಂದ ನೆಲಕ್ಕೆ ಎಸೆದಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

tirthazoxo ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮಹಿಳೆಯೂ ಮರಿಯಾನೆಗೆ ಸೇಬು ಹಣ್ಣು ನೀಡಿದ್ದಾಳೆ. ಖುಷಿಯಿಂದಲೇ ತಿಂದ ಮರಿಯಾನೆಯು ಮಹಿಳೆ ನೀಡಿದ ಬಾಳೆಹಣ್ಣನ್ನು ಬೇಡ ಎಂದು ನೆಲಕ್ಕೆ ಎಸೆದಿದೆ. ಕೊನೆಗೆ ಎಸೆದ ಬಾಳೆಹಣ್ಣನ್ನೇ ತಿನ್ನುತ್ತಿರುವುದನ್ನು ನೋಡಬಹುದು. ಕೊನೆಗೆ ಈ ಮರಿಯಾನೆಗೆ ಆಪಲ್‌ ತಂದು ತಿನ್ನಲು ನೀಡಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

View this post on Instagram

A post shared by Tirtha Dhanuk (@tirthaxozo)

ಇದನ್ನೂ ಓದಿ:ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬರಲು ಹೊರಟ ಮರಿಯಾನೆ

ಈ ವಿಡಿಯೋ ಇಪ್ಪತ್ತೆಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಂಗೆ ಆಪಲ್ ಬೇಕು, ಪ್ಲೀಸ್ ಆಪಲ್ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮುದ್ದಾಗಿದೆ ಈ ದೃಶ್ಯ ಎಂದಿದ್ದಾರೆ. ಮತ್ತೊಬ್ಬರು, ಬಾಳೆಹಣ್ಣು ಸಿಪ್ಪೆ ಸುಲಿದು ನೀಡಿದರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ತಂದೆ ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಸಚಿವ ಯತೀಂದ್ರ
ತಂದೆ ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಸಚಿವ ಯತೀಂದ್ರ
ನಕಲಿ ಔಷಧಿ: ಅಜರ್ ಬೈಜಾನ್​ನಿಂದ ಕಿಂಗ್ ಪಿನ್ ಪ್ರಶಾಂತ್ ಕರೆತರಲು SIT ತಯಾರಿ
ನಕಲಿ ಔಷಧಿ: ಅಜರ್ ಬೈಜಾನ್​ನಿಂದ ಕಿಂಗ್ ಪಿನ್ ಪ್ರಶಾಂತ್ ಕರೆತರಲು SIT ತಯಾರಿ