AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಿಂದ ಸ್ಥಳಾಂತರದ ವೇಳೆ ಜನಿಸಿದ ಮಗುವಿಗೆ ವಿಮಾನದ ಕರೆ ಚಿಹ್ನೆ ರೀಚ್ ಎಂದು ನಾಮಕರಣ

ಸಿ-17 ಮಿಲಿಟರಿ ವಿಮಾನದಲ್ಲಿ ಗರ್ಭಿಣಿಯನ್ನು ಜರ್ಮನಿಗೆ ಸ್ಥಳಾಂತರಿಸುವ ವೇಳೆ ವಿಮಾನದಲ್ಲಿ ಮಗು ಜನಿಸಿದೆ. ಪುಟ್ಟ ಕಂದಮ್ಮನ ಪೋಷಕರು ವಿಮಾನ ಕರೆ ಚಿಹ್ನೆ ರೀಚ್ ಎಂದು ಮಗುವಿಗೆ ನಾಮಕರಣ ಮಾಡಿದ್ದಾರೆ.

ಅಫ್ಘಾನಿಸ್ತಾನದಿಂದ ಸ್ಥಳಾಂತರದ ವೇಳೆ ಜನಿಸಿದ ಮಗುವಿಗೆ ವಿಮಾನದ ಕರೆ ಚಿಹ್ನೆ ರೀಚ್ ಎಂದು ನಾಮಕರಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 26, 2021 | 11:25 AM

Share

ಕಾಬೂಲ್: ಅಫ್ಘಾನಿಸ್ತಾನದಿಂದ ಜನರನ್ನು ಸ್ಥಳಾಂತರಿಸುವಾಗ ವಿಮಾನದಲ್ಲಿ ಜನಿಸಿದ ಅಫ್ಘಾನ್​ ಹೆಣ್ಣು ಮಗುವಿಗೆ ರೀಚ್ ಎಂದು ನಾಮಕರಣ ಮಾಡಲಾಗಿದೆ. ಸಿ-17 ಮಿಲಿಟರಿ ವಿಮಾನದಲ್ಲಿ ಗರ್ಭಿಣಿಯನ್ನು ಜರ್ಮನಿಗೆ ಸ್ಥಳಾಂತರಿಸುವ ವೇಳೆ ವಿಮಾನದಲ್ಲಿ ಮಗು ಜನಿಸಿದೆ. ಪುಟ್ಟ ಕಂದಮ್ಮನ ಪೋಷಕರು ವಿಮಾನ ಕರೆ ಚಿಹ್ನೆ ರೀಚ್ ಎಂದು ಮಗುವಿಗೆ ನಾಮಕರಣ ಮಾಡಿದ್ದಾರೆ.

ಸಾರಿಗೆ ವಿಮಾನ ಕರೆ ಚಿಹ್ನೆ ರೀಚ್ 828. ಅಫ್ಘಾನಿಸ್ತಾನದಿಂದ ಸ್ಥಳಾಂತರದ ಸಮಯದಲ್ಲಿ ವಿಮಾನ ಹಾರಟದಲ್ಲಿದ್ದ ವೇಳೆಯಲ್ಲಿ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಅಧಿಕಾರಿ ಜನರಲ್ ಟಾಡ್ ವೋಲ್ಟರ್ಸ್ ಹೇಳಿದ್ದಾರೆ.

ವಿಮಾನದಲ್ಲಿ ಜರ್ಮನಿಗೆ ತೆರಳುತ್ತಿದ್ದ ವೇಳೆ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಗರ್ಭಿಣಿ ಕಡಿಮೆ ರಕ್ತದೊತ್ತಡವನ್ನು ಅನುಭವಿಸಬೇಕಾಯಿತು. ವಿಮಾನದಲ್ಲಿ ಉಸಿರಾಟಕ್ಕೆ ತೊಂದರೆಯಾಗದಂತೆ ಪೈಲಟ್ ಕಡಿಮೆ ಎತ್ತರದಲ್ಲಿ ವಿಮಾನವನ್ನು ಹಾರಿಸಿದ್ದಾರೆ. 86ನೇ ವೈದ್ಯಕೀಯ ಗುಂಪಿನ ಸದಸ್ಯರು ಗರ್ಭಿಣಿ ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದ್ದಾರೆ. ಮಗು ಮತ್ತು ತಾಯಿ ಸುರಕ್ಷಿತರಾಗಿದ್ದಾರೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

ಅಮೆರಿಕದ ವೈಮಾನಿಕ ದಾಳಿಯ ನೆರವಿನಿಂದ ತಾಲಿಬಾನ್​​ನ್ನು ಹಿಮ್ಮೆಟ್ಟಿಸಿದ ಅಫ್ಘಾನ್ ಭದ್ರತಾ ಪಡೆ

(Baby girl born on Afghanistan evacuation flight named reach )

Published On - 11:24 am, Thu, 26 August 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ