AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಿಂದ ಸ್ಥಳಾಂತರದ ವೇಳೆ ಜನಿಸಿದ ಮಗುವಿಗೆ ವಿಮಾನದ ಕರೆ ಚಿಹ್ನೆ ರೀಚ್ ಎಂದು ನಾಮಕರಣ

ಸಿ-17 ಮಿಲಿಟರಿ ವಿಮಾನದಲ್ಲಿ ಗರ್ಭಿಣಿಯನ್ನು ಜರ್ಮನಿಗೆ ಸ್ಥಳಾಂತರಿಸುವ ವೇಳೆ ವಿಮಾನದಲ್ಲಿ ಮಗು ಜನಿಸಿದೆ. ಪುಟ್ಟ ಕಂದಮ್ಮನ ಪೋಷಕರು ವಿಮಾನ ಕರೆ ಚಿಹ್ನೆ ರೀಚ್ ಎಂದು ಮಗುವಿಗೆ ನಾಮಕರಣ ಮಾಡಿದ್ದಾರೆ.

ಅಫ್ಘಾನಿಸ್ತಾನದಿಂದ ಸ್ಥಳಾಂತರದ ವೇಳೆ ಜನಿಸಿದ ಮಗುವಿಗೆ ವಿಮಾನದ ಕರೆ ಚಿಹ್ನೆ ರೀಚ್ ಎಂದು ನಾಮಕರಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 26, 2021 | 11:25 AM

Share

ಕಾಬೂಲ್: ಅಫ್ಘಾನಿಸ್ತಾನದಿಂದ ಜನರನ್ನು ಸ್ಥಳಾಂತರಿಸುವಾಗ ವಿಮಾನದಲ್ಲಿ ಜನಿಸಿದ ಅಫ್ಘಾನ್​ ಹೆಣ್ಣು ಮಗುವಿಗೆ ರೀಚ್ ಎಂದು ನಾಮಕರಣ ಮಾಡಲಾಗಿದೆ. ಸಿ-17 ಮಿಲಿಟರಿ ವಿಮಾನದಲ್ಲಿ ಗರ್ಭಿಣಿಯನ್ನು ಜರ್ಮನಿಗೆ ಸ್ಥಳಾಂತರಿಸುವ ವೇಳೆ ವಿಮಾನದಲ್ಲಿ ಮಗು ಜನಿಸಿದೆ. ಪುಟ್ಟ ಕಂದಮ್ಮನ ಪೋಷಕರು ವಿಮಾನ ಕರೆ ಚಿಹ್ನೆ ರೀಚ್ ಎಂದು ಮಗುವಿಗೆ ನಾಮಕರಣ ಮಾಡಿದ್ದಾರೆ.

ಸಾರಿಗೆ ವಿಮಾನ ಕರೆ ಚಿಹ್ನೆ ರೀಚ್ 828. ಅಫ್ಘಾನಿಸ್ತಾನದಿಂದ ಸ್ಥಳಾಂತರದ ಸಮಯದಲ್ಲಿ ವಿಮಾನ ಹಾರಟದಲ್ಲಿದ್ದ ವೇಳೆಯಲ್ಲಿ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಅಧಿಕಾರಿ ಜನರಲ್ ಟಾಡ್ ವೋಲ್ಟರ್ಸ್ ಹೇಳಿದ್ದಾರೆ.

ವಿಮಾನದಲ್ಲಿ ಜರ್ಮನಿಗೆ ತೆರಳುತ್ತಿದ್ದ ವೇಳೆ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಗರ್ಭಿಣಿ ಕಡಿಮೆ ರಕ್ತದೊತ್ತಡವನ್ನು ಅನುಭವಿಸಬೇಕಾಯಿತು. ವಿಮಾನದಲ್ಲಿ ಉಸಿರಾಟಕ್ಕೆ ತೊಂದರೆಯಾಗದಂತೆ ಪೈಲಟ್ ಕಡಿಮೆ ಎತ್ತರದಲ್ಲಿ ವಿಮಾನವನ್ನು ಹಾರಿಸಿದ್ದಾರೆ. 86ನೇ ವೈದ್ಯಕೀಯ ಗುಂಪಿನ ಸದಸ್ಯರು ಗರ್ಭಿಣಿ ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದ್ದಾರೆ. ಮಗು ಮತ್ತು ತಾಯಿ ಸುರಕ್ಷಿತರಾಗಿದ್ದಾರೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

ಅಮೆರಿಕದ ವೈಮಾನಿಕ ದಾಳಿಯ ನೆರವಿನಿಂದ ತಾಲಿಬಾನ್​​ನ್ನು ಹಿಮ್ಮೆಟ್ಟಿಸಿದ ಅಫ್ಘಾನ್ ಭದ್ರತಾ ಪಡೆ

(Baby girl born on Afghanistan evacuation flight named reach )

Published On - 11:24 am, Thu, 26 August 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ