ಅಫ್ಘಾನಿಸ್ತಾನ: ತಾಲಿಬಾನಿಗಳಿಂದ ಪಾರಾಗಿ 4 ತಿಂಗಳ ಬಳಿಕ ಹೆತ್ತವರನ್ನು ಸೇರಿದ ಮಗು

ವಿಮಾನ ನಿಲ್ದಾಣದಲ್ಲಿದ್ದ ಮಗುವನ್ನು ಕಾಬೂಲ್​ ನಿರಾಶ್ರಿತರ ಸಂಘಟನೆಯ ಸದಸ್ಯ ಹಮೀದ್​ ಸಫಿ ಎನ್ನುವವರು ಕರೆದೊಯ್ದು  ರಕ್ಷಣೆ ಮಾಡಿದ್ದರು. ಕಳೆದ ನವೆಂಬರ್​ನಲ್ಲಿ ಮಗುವಿನ ಬಗ್ಗೆ ತಂದೆ ತಾಯಿಗಳು ಮಾಹಿತಿ ಪಡೆದಿದ್ದರು.

ಅಫ್ಘಾನಿಸ್ತಾನ: ತಾಲಿಬಾನಿಗಳಿಂದ ಪಾರಾಗಿ 4 ತಿಂಗಳ ಬಳಿಕ ಹೆತ್ತವರನ್ನು ಸೇರಿದ ಮಗು
ಹೆತ್ತವರನ್ನು ಸೇರಿದ ಮಗು
Follow us
| Updated By: Pavitra Bhat Jigalemane

Updated on:Jan 11, 2022 | 9:52 AM

2021ರ ಅಗಸ್ಟ್​ನಲ್ಲಿ ಅಫಘಾನಿಸ್ತಾನವನ್ನು ತಾಲಿಬಾನ್​ ಉಗ್ರರು ವಶಪಡಿಸಿಕೊಂಡ ಬಳಿಕ ಅಲ್ಲಿಯ ಜನರ ಬದುಕು ನರಕ ಸದೃಶವಾಗಿದೆ. ಅಫ್ಘಾನ್​ ಅನ್ನು ತಾಲಿಬಾನ್​ ಕೈವಶ ಮಾಡಿಕೊಳ್ಳುತ್ತಿದ್ದಂತೆ ಅಮೆರಿಕ ಕೂಡ ತನ್ನ ಸೇನೆಯನ್ನು ವಾಪಸ್​ ಕರೆಸಿಕೊಂಡಿತ್ತು. ಈ ವೇಳೆ ಅಫ್ಘಾನ್​ ಜನತೆ ತಾಲಿಬಾನಿಗಳ ಕೈಗೆ ಸಿಲುಕಿದರೆ ತಮ್ಮ ಮಕ್ಕಳು ಜೀವಂತವಾಗಿರುವುದಿಲ್ಲ ಎನ್ನುವ ಭಯದಲ್ಲಿ ಹೆತ್ತ ಮಕ್ಕಳನ್ನು ಸೈನಿಕರಿಗೆ ನೀಡಿದ್ದರು. ಇದೀಗ ಒಂದು ಮಗು ಅದರ ಪೋಷಕರನ್ನು ಮತ್ತೆ ಸೇರಿಕೊಂಡಿದೆ ಎಂದು ವರದಿ ತಿಳಿಸಿದೆ. 

ಅಗಸ್ಟ್​ 19ರಂದು  ದೇಶ ತೊರೆದು ಹೋಗಲು ಸಾವಿರಾರು ಮಂದಿ ಅಫ್ಘಾನ್​ ನಿವಾಸಿಗಳು ವಿಮಾನ ನಿಲ್ದಾಣದಲ್ಲಿ ಸೇರಿದ್ದರು ಈ ವೇಳೆ 2 ತಿಂಗಳ ಮಗುವನ್ನು ಯುಎಸ್​ ಸೈನಿಕರಿಗೆ  ಹಸ್ತಾಂತರಿಸಿದ್ದರು. ಬಳಿಕ ವಿಮಾನ ಹತ್ತುವ ವೇಳೆ ಮಗು ಎಲ್ಲಿದೆ ಎನ್ನುವುದು ಅವರಿಗೆ ತಿಳಿದಿರಲಿಲ್ಲ. ಮಗು ಸಿಗದ ಕಾರಣ  ಕುಟುಂಬ ಉಳಿದ ನಾಲ್ಕು ಮಕ್ಕಳೊಂದಿಗೆ ಯುಎಸ್​ಗೆ ಸ್ಥಳಾಂತರಗೊಂಡಿದ್ದರು. ವಿಮಾನ ನಿಲ್ದಾಣದಲ್ಲಿದ್ದ ಮಗುವನ್ನು ಕಾಬೂಲ್​  ಟ್ಯಾಕ್ಸಿ ಡ್ರೈವರ್​ ಹಮೀದ್​ ಸಫಿ ಎನ್ನುವವರು ಕರೆದೊಯ್ದು  ರಕ್ಷಣೆ ಮಾಡಿದ್ದರು. ಕಳೆದ ನವೆಂಬರ್​ನಲ್ಲಿ ಮಗುವಿನ ಬಗ್ಗೆ ತಂದೆ ತಾಯಿಗಳು ಮಾಹಿತಿ ಪಡೆದಿದ್ದರು. ಇದೀಗ 4 ತಿಂಗಳ ಬಳಿಕ ತಂದೆ ತಾಯಿಗಳಿಂದ ಬೇರ್ಪಟ್ಟ ಮಗು ಮತ್ತೆ ಹೆತ್ತವರ ಮಡಿಲು ಸೇರಿದೆ. ಸೊಹಾಲ್​ ಅಹಮದಿ ಪೋಷಕರನ್ನು ಮತ್ತೆ ಸೇರಿದ ಮಗು.

View this post on Instagram

A post shared by Reuters (@reuters)

ಮಗುವನ್ನು ಮತ್ತೆ ಹೆತ್ತವರು ಪಡೆದುಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಹೃದಯಸ್ಪರ್ಶಿ ಫೊಟೋವನ್ನು ನೋಡಿ ಟ್ವಿಟರ್​ ಬಳಕೆದಾರರು  ಕಳೆದುಕೊಂಡಿದ್ದನ್ನು ಮತ್ತೆ ಪಡೆಯುವುದು ನಿಜವಾದ ಸಂತಸ ಎಂದಿದ್ದಾರೆ.

ಕಳೆದ ಅಗಸ್ಟ್​ನಲ್ಲಿ ತಾಲಿಬಾನ್​ ಉಗ್ರರು  ಅಫ್ಘಾನಿಸ್ತಾವನ್ನು ಬಲವಂತದಿಂದ ವಶಪಡಿಸಿಕೊಂಡಿದ್ದರು. ಅಂದಿನಿಂದ ಇಂದಿನವರೆಗೂ ದೇಶದಲ್ಲಿ ಜನರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಅಫ್ಘಾನ್​ ಅಧ್ಯಕ್ಷರಿಂದ ಹಿಡಿದು ಸಾವಿರಾರು ನಿವಾಸಿಗಳು ದೇಶದಿಂದ ಪಲಾಯನ ಮಾಡಿ ಜೀವ ಉಳಿಸಿಕೊಂಡಿದ್ದಾರೆ.

Published On - 9:51 am, Tue, 11 January 22

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್