AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ: ತಾಲಿಬಾನಿಗಳಿಂದ ಪಾರಾಗಿ 4 ತಿಂಗಳ ಬಳಿಕ ಹೆತ್ತವರನ್ನು ಸೇರಿದ ಮಗು

ವಿಮಾನ ನಿಲ್ದಾಣದಲ್ಲಿದ್ದ ಮಗುವನ್ನು ಕಾಬೂಲ್​ ನಿರಾಶ್ರಿತರ ಸಂಘಟನೆಯ ಸದಸ್ಯ ಹಮೀದ್​ ಸಫಿ ಎನ್ನುವವರು ಕರೆದೊಯ್ದು  ರಕ್ಷಣೆ ಮಾಡಿದ್ದರು. ಕಳೆದ ನವೆಂಬರ್​ನಲ್ಲಿ ಮಗುವಿನ ಬಗ್ಗೆ ತಂದೆ ತಾಯಿಗಳು ಮಾಹಿತಿ ಪಡೆದಿದ್ದರು.

ಅಫ್ಘಾನಿಸ್ತಾನ: ತಾಲಿಬಾನಿಗಳಿಂದ ಪಾರಾಗಿ 4 ತಿಂಗಳ ಬಳಿಕ ಹೆತ್ತವರನ್ನು ಸೇರಿದ ಮಗು
ಹೆತ್ತವರನ್ನು ಸೇರಿದ ಮಗು
TV9 Web
| Edited By: |

Updated on:Jan 11, 2022 | 9:52 AM

Share

2021ರ ಅಗಸ್ಟ್​ನಲ್ಲಿ ಅಫಘಾನಿಸ್ತಾನವನ್ನು ತಾಲಿಬಾನ್​ ಉಗ್ರರು ವಶಪಡಿಸಿಕೊಂಡ ಬಳಿಕ ಅಲ್ಲಿಯ ಜನರ ಬದುಕು ನರಕ ಸದೃಶವಾಗಿದೆ. ಅಫ್ಘಾನ್​ ಅನ್ನು ತಾಲಿಬಾನ್​ ಕೈವಶ ಮಾಡಿಕೊಳ್ಳುತ್ತಿದ್ದಂತೆ ಅಮೆರಿಕ ಕೂಡ ತನ್ನ ಸೇನೆಯನ್ನು ವಾಪಸ್​ ಕರೆಸಿಕೊಂಡಿತ್ತು. ಈ ವೇಳೆ ಅಫ್ಘಾನ್​ ಜನತೆ ತಾಲಿಬಾನಿಗಳ ಕೈಗೆ ಸಿಲುಕಿದರೆ ತಮ್ಮ ಮಕ್ಕಳು ಜೀವಂತವಾಗಿರುವುದಿಲ್ಲ ಎನ್ನುವ ಭಯದಲ್ಲಿ ಹೆತ್ತ ಮಕ್ಕಳನ್ನು ಸೈನಿಕರಿಗೆ ನೀಡಿದ್ದರು. ಇದೀಗ ಒಂದು ಮಗು ಅದರ ಪೋಷಕರನ್ನು ಮತ್ತೆ ಸೇರಿಕೊಂಡಿದೆ ಎಂದು ವರದಿ ತಿಳಿಸಿದೆ. 

ಅಗಸ್ಟ್​ 19ರಂದು  ದೇಶ ತೊರೆದು ಹೋಗಲು ಸಾವಿರಾರು ಮಂದಿ ಅಫ್ಘಾನ್​ ನಿವಾಸಿಗಳು ವಿಮಾನ ನಿಲ್ದಾಣದಲ್ಲಿ ಸೇರಿದ್ದರು ಈ ವೇಳೆ 2 ತಿಂಗಳ ಮಗುವನ್ನು ಯುಎಸ್​ ಸೈನಿಕರಿಗೆ  ಹಸ್ತಾಂತರಿಸಿದ್ದರು. ಬಳಿಕ ವಿಮಾನ ಹತ್ತುವ ವೇಳೆ ಮಗು ಎಲ್ಲಿದೆ ಎನ್ನುವುದು ಅವರಿಗೆ ತಿಳಿದಿರಲಿಲ್ಲ. ಮಗು ಸಿಗದ ಕಾರಣ  ಕುಟುಂಬ ಉಳಿದ ನಾಲ್ಕು ಮಕ್ಕಳೊಂದಿಗೆ ಯುಎಸ್​ಗೆ ಸ್ಥಳಾಂತರಗೊಂಡಿದ್ದರು. ವಿಮಾನ ನಿಲ್ದಾಣದಲ್ಲಿದ್ದ ಮಗುವನ್ನು ಕಾಬೂಲ್​  ಟ್ಯಾಕ್ಸಿ ಡ್ರೈವರ್​ ಹಮೀದ್​ ಸಫಿ ಎನ್ನುವವರು ಕರೆದೊಯ್ದು  ರಕ್ಷಣೆ ಮಾಡಿದ್ದರು. ಕಳೆದ ನವೆಂಬರ್​ನಲ್ಲಿ ಮಗುವಿನ ಬಗ್ಗೆ ತಂದೆ ತಾಯಿಗಳು ಮಾಹಿತಿ ಪಡೆದಿದ್ದರು. ಇದೀಗ 4 ತಿಂಗಳ ಬಳಿಕ ತಂದೆ ತಾಯಿಗಳಿಂದ ಬೇರ್ಪಟ್ಟ ಮಗು ಮತ್ತೆ ಹೆತ್ತವರ ಮಡಿಲು ಸೇರಿದೆ. ಸೊಹಾಲ್​ ಅಹಮದಿ ಪೋಷಕರನ್ನು ಮತ್ತೆ ಸೇರಿದ ಮಗು.

View this post on Instagram

A post shared by Reuters (@reuters)

ಮಗುವನ್ನು ಮತ್ತೆ ಹೆತ್ತವರು ಪಡೆದುಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಹೃದಯಸ್ಪರ್ಶಿ ಫೊಟೋವನ್ನು ನೋಡಿ ಟ್ವಿಟರ್​ ಬಳಕೆದಾರರು  ಕಳೆದುಕೊಂಡಿದ್ದನ್ನು ಮತ್ತೆ ಪಡೆಯುವುದು ನಿಜವಾದ ಸಂತಸ ಎಂದಿದ್ದಾರೆ.

ಕಳೆದ ಅಗಸ್ಟ್​ನಲ್ಲಿ ತಾಲಿಬಾನ್​ ಉಗ್ರರು  ಅಫ್ಘಾನಿಸ್ತಾವನ್ನು ಬಲವಂತದಿಂದ ವಶಪಡಿಸಿಕೊಂಡಿದ್ದರು. ಅಂದಿನಿಂದ ಇಂದಿನವರೆಗೂ ದೇಶದಲ್ಲಿ ಜನರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಅಫ್ಘಾನ್​ ಅಧ್ಯಕ್ಷರಿಂದ ಹಿಡಿದು ಸಾವಿರಾರು ನಿವಾಸಿಗಳು ದೇಶದಿಂದ ಪಲಾಯನ ಮಾಡಿ ಜೀವ ಉಳಿಸಿಕೊಂಡಿದ್ದಾರೆ.

Published On - 9:51 am, Tue, 11 January 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ