AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಬಿಡುಗಡೆಯಾದ ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​: ವಿಡಿಯೋ ನೋಡಿ ಪ್ರತಿಕ್ರಿಯಿಸಿದ ರಾಪರ್​ ಬಾದ್​​ ಷಾ

ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಮಾಡಿ ಹಂಚಿಕೊಂಡ ದಿರ್ಡೋ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​: ವಿಡಿಯೋ ನೋಡಿ ಪ್ರತಿಕ್ರಿಯಿಸಿದ ರಾಪರ್​ ಬಾದ್​​ ಷಾ
ಸಹದೇವ್​ ದಿರ್ಡೋ ಮತ್ತು ಬಾದ್​ ಷಾ
TV9 Web
| Edited By: |

Updated on: Jan 14, 2022 | 6:02 PM

Share

ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಮಾಡಿ ಹಂಚಿಕೊಂಡ ದಿರ್ಡೋ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಸಹದೇವ್​ ಡಿಸೆಂಬರ್​ 28ರಂದು ಸಂಭವಿಸಿದ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಹದೇವ್​ ಅವರ ವಿಡಿಯೋಗೆ ಬಾಲಿವುಡ್​ ರಾಪರ್​ ಬಾದ್​ ಶಾ ಪ್ರತಿಕ್ರಿಯಿಸಿದ್ದಾರೆ.

View this post on Instagram

A post shared by Sahdev Dirdo (@viralboy_sahdev)

ಸಹದೇವ್​ ದಿರ್ಡೋ ತಮ್ಮ ಬಚ್ ಪನ್​ ಕಾ ಪ್ಯಾರ್​ ಹಾಡಿನ ಮೂಲಕ 2021ರ ಜುಲೈನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಸಂಚಲನ ಮೂಡಿಸಿದ್ದರು. ರಾತ್ರಿ ಬೆಳಗಾಗುವುದರೊಳಗೆ ದೇಶಾದ್ಯಂತ ಹೊಸ ಟ್ರೆಂಡ್​ ಕ್ರಿಯೇಟ್​ ಮಾಡಿದ್ದರು. ದಿರ್ಡೋ ಹಾಡು ಕೇಳಿ ಬಾಲಿವುಡ್​ ರಾಪ್​ ಸಿಂಗರ್​ ಬಾದ್​ ಷಾ ಕೂಡ ಮನಸೋತು ಅವರನ್ನು ಭೇಟಿ ಮಾಡಿದ್ದರು. ಅಷ್ಟೇ ಅಲ್ಲದೆ ಅವರ ಬಚ್​ ಪನ್​ ಕಾ ಪ್ಯಾರ್​ ಹಾಡಿಗೆ ರಾಪ್​ ಸಂಗೀತವನ್ನು ಮಿಕ್ಸ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿತ್ತು.

ಸಹದೇವ್​ ಅವರಿಗೆ ಅಪಘಾತವಾದ ಸಂದರ್ಭದಲ್ಲಿ ಬಾದ್​ ಷಾ ಅವರು ಕೂಡ ಬೇಗ ಗುಣಮುಖವಾಗುವಂತೆ ಕೋರಿ ಹಾರೈಸಿದ್ದರು. ಇದೀಗ ಸಹದೇವ್​ ಚೇತರಿಕೆಯ ಬಳಿಕ ಹಂಚಿಕೊಂಡ ವಿಡಿಯೋಗೂ ಪ್ರತಿಕ್ರಿಯಿಸಿದ್ದಾರೆ. ಸಹದೇವ್​ ಅವರ ವಿಡಿಯೋ ವೈರಲ್​​ ಅಗಿದ್ದು, 89 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು 60 ಸಾವಿರ ಲೈಕ್ಸ್​ ಪಡೆದಿದೆ.

ಇದನ್ನೂ ಓದಿ:

ಬೀದಿ ಬದಿ ವ್ಯಾಪಾರಿಯ ಚಾಟ್ಸ್​ ತಯಾರಿಕೆ ನೋಡಿ ಮೂಗುಮುರಿದ ನೆಟ್ಟಿಗರು: ಸ್ಟ್ರೀಟ್​ ಫುಡ್​ ತಯಾರಿಕೆಯ ವಿಡಿಯೋ ವೈರಲ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್