AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಬಿಡುಗಡೆಯಾದ ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​: ವಿಡಿಯೋ ನೋಡಿ ಪ್ರತಿಕ್ರಿಯಿಸಿದ ರಾಪರ್​ ಬಾದ್​​ ಷಾ

ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಮಾಡಿ ಹಂಚಿಕೊಂಡ ದಿರ್ಡೋ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​: ವಿಡಿಯೋ ನೋಡಿ ಪ್ರತಿಕ್ರಿಯಿಸಿದ ರಾಪರ್​ ಬಾದ್​​ ಷಾ
ಸಹದೇವ್​ ದಿರ್ಡೋ ಮತ್ತು ಬಾದ್​ ಷಾ
TV9 Web
| Edited By: |

Updated on: Jan 14, 2022 | 6:02 PM

Share

ಬಚ್​ ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಮಾಡಿ ಹಂಚಿಕೊಂಡ ದಿರ್ಡೋ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಸಹದೇವ್​ ಡಿಸೆಂಬರ್​ 28ರಂದು ಸಂಭವಿಸಿದ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಹದೇವ್​ ಅವರ ವಿಡಿಯೋಗೆ ಬಾಲಿವುಡ್​ ರಾಪರ್​ ಬಾದ್​ ಶಾ ಪ್ರತಿಕ್ರಿಯಿಸಿದ್ದಾರೆ.

ಸಹದೇವ್​ ದಿರ್ಡೋ ತಮ್ಮ ಬಚ್ ಪನ್​ ಕಾ ಪ್ಯಾರ್​ ಹಾಡಿನ ಮೂಲಕ 2021ರ ಜುಲೈನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಸಂಚಲನ ಮೂಡಿಸಿದ್ದರು. ರಾತ್ರಿ ಬೆಳಗಾಗುವುದರೊಳಗೆ ದೇಶಾದ್ಯಂತ ಹೊಸ ಟ್ರೆಂಡ್​ ಕ್ರಿಯೇಟ್​ ಮಾಡಿದ್ದರು. ದಿರ್ಡೋ ಹಾಡು ಕೇಳಿ ಬಾಲಿವುಡ್​ ರಾಪ್​ ಸಿಂಗರ್​ ಬಾದ್​ ಷಾ ಕೂಡ ಮನಸೋತು ಅವರನ್ನು ಭೇಟಿ ಮಾಡಿದ್ದರು. ಅಷ್ಟೇ ಅಲ್ಲದೆ ಅವರ ಬಚ್​ ಪನ್​ ಕಾ ಪ್ಯಾರ್​ ಹಾಡಿಗೆ ರಾಪ್​ ಸಂಗೀತವನ್ನು ಮಿಕ್ಸ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿತ್ತು.

ಸಹದೇವ್​ ಅವರಿಗೆ ಅಪಘಾತವಾದ ಸಂದರ್ಭದಲ್ಲಿ ಬಾದ್​ ಷಾ ಅವರು ಕೂಡ ಬೇಗ ಗುಣಮುಖವಾಗುವಂತೆ ಕೋರಿ ಹಾರೈಸಿದ್ದರು. ಇದೀಗ ಸಹದೇವ್​ ಚೇತರಿಕೆಯ ಬಳಿಕ ಹಂಚಿಕೊಂಡ ವಿಡಿಯೋಗೂ ಪ್ರತಿಕ್ರಿಯಿಸಿದ್ದಾರೆ. ಸಹದೇವ್​ ಅವರ ವಿಡಿಯೋ ವೈರಲ್​​ ಅಗಿದ್ದು, 89 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು 60 ಸಾವಿರ ಲೈಕ್ಸ್​ ಪಡೆದಿದೆ.

ಇದನ್ನೂ ಓದಿ:

ಬೀದಿ ಬದಿ ವ್ಯಾಪಾರಿಯ ಚಾಟ್ಸ್​ ತಯಾರಿಕೆ ನೋಡಿ ಮೂಗುಮುರಿದ ನೆಟ್ಟಿಗರು: ಸ್ಟ್ರೀಟ್​ ಫುಡ್​ ತಯಾರಿಕೆಯ ವಿಡಿಯೋ ವೈರಲ್​

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ