AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸರಳತೆಯ ಸಾಹುಕಾರ, ವಿದ್ಯಾರ್ಥಿನಿಗೆ ತನ್ನ ಆಸನ ಬಿಟ್ಟುಕೊಟ್ಟ ಬಾಗಲಕೋಟೆ ಜಿ.ಪಂ ಸಿಇಒ

ಅಧಿಕಾರದ ಮದದಲ್ಲಿ ದರ್ಪ ತೋರುವ ಅಧಿಕಾರಿಗಳ ನಡುವೆ ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಿಇಒ ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದಂತಹ ವಿದ್ಯಾರ್ಥಿಯನ್ನು ತಮಗೆ ಮೀಸಲಿರಿಸಿದ್ದ ಆಸನದಲ್ಲಿ ಕೂರಿಸಿ, ಆಕೆಗೆ ಸನ್ಮಾನ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಅಧಿಕಾರಿಯ ಸರಳತೆಗೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

Viral Video: ಸರಳತೆಯ ಸಾಹುಕಾರ, ವಿದ್ಯಾರ್ಥಿನಿಗೆ ತನ್ನ ಆಸನ ಬಿಟ್ಟುಕೊಟ್ಟ ಬಾಗಲಕೋಟೆ ಜಿ.ಪಂ ಸಿಇಒ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 02, 2024 | 12:15 PM

ಸರ್ಕಾರಿ ಅಧಿಕಾರಿಗಳು ಎಂದರೆ ಸಾಕು, ಹೆಚ್ಚಿನವರು ತಮ್ಮದೇ ಆದ ಹಮ್ಮುಬಿಮ್ಮು ರೂಢಿಸಿಕೊಂಡಿರುತ್ತಾರೆ. ಇನ್ನೂ ಕೆಲವರಂತೂ ಜನಸಾಮಾನ್ಯರ ಮೇಲೆ ತಮ್ಮ ಅಧಿಕಾರದ ದರ್ಪವನ್ನು ತೋರಿಸುತ್ತಿರುತ್ತಾರೆ. ಇಂತಹವರ ನಡುವೆ ಇಲ್ಲೊಬ್ಬರು ಅಧಿಕಾರಿ ಯಾವುದೇ ಹಮ್ಮಬಿಮ್ಮು ಇಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದಂತ ವಿದ್ಯಾರ್ಥಿಯನ್ನು ತಮ್ಮ ಕಛೇರಿಗೆ ಬರ ಹೇಳಿ, ಆಕೆಯನ್ನು ತಮಗೆ ಮೀಸಲಿರಿಸಿದ್ದ  ಆಸನದಲ್ಲಿ ಕೂರಿಸಿ ಸನ್ಮಾನ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು  ವೈರಲ್ ಆಗಿದ್ದು,  ಇವರ ಈ ಸರಳತೆ ಎಲ್ಲರ ಗಮನ ಸೆಳೆಯುತ್ತಿದೆ.

ಬಾಗಲಕೋಟೆ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಶಿಧರ ಕುರೇರ ಅವರು ದ್ವಿತೀಯ ಪಿಯುಸಿ   ಪರೀಕ್ಷೆಯಲ್ಲಿ 600 ಕ್ಕೆ 590  (ಶೇ98.33) ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುವ ವಿದ್ಯಾರ್ಥಿನಿಯನ್ನು ತಮ್ಮ ಕಛೇರಿಗೆ ಕರೆಸಿ, ಆಕೆಯನ್ನು ತಮ್ಮ ಆಸನದಲ್ಲಿಯೇ ಕೂರಿಸಿ ಸನ್ಮಾನ ಮಾಡಿದ್ದಾರೆ. ಇವರ ಈ ಸರಳ ನಡೆಗೆ ಸಂಬಂಧಿಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

@royalbagalkot ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಬಾಗಲಕೋಟೆ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಶಿಧರ ಕುರೇರ ಅವರು ದ್ವಿತೀಯ ಪಿಯುಸಿ  ಕಲಾ ವಿಭಾಗದ ಪರೀಕ್ಷೆಯಲ್ಲಿ 600 ಕ್ಕೆ 590  ಅಂಕಗಳನ್ನು (ಶೇ98.33) ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ  ಕುಮಾರಿ ಐಶ್ವರ್ಯ ಕೌಜಲಗಿಗೆ ಸನ್ಮಾನಿಸಿದರು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಶಶಿಧರ ಕುರೇರ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವ ವಿದ್ಯಾರ್ಥಿನಿಯನ್ನು ತಮ್ಮ ಆಸನದಲ್ಲಿ ಕೂರಿಸಿ ಆಕೆಗೆ ಶಾಲು ಹೊದಿಸಿ ಸನ್ಮಾನ ಮಾಡಿದಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ; ಹವಾಮಾನ ಇಲಾಖೆ ಎಚ್ಚರಿಕೆ

ಐದು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು,  ಕಾಮೆಂಟ್ಸ್ ಮಾಡುವ ಮೂಲಕ ಅಧಿಕಾರಿಯ ಸರಳತೆಗೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ