ಹಳೆಯ ಬಜಾಜ್ ಸ್ಕೂಟರ್​ನಿಂದ ಎಲೆಕ್ಟ್ರಿಕ್​ ರಾಟೆ; ವಿಡಿಯೋ ವೈರಲ್

Bajaj : ಆಂಧ್ರಪ್ರದೇಶದಲ್ಲಿ ಕಟ್ಟಡ ಕಾರ್ಮಿಕರು ಹಳೆಯ ಬಜಾಜ್​ ಸ್ಕೂಟರ್​ ಅನ್ನು ಕಟ್ಟಡ ಸಾಮಗ್ರಿಗಳನ್ನು ಸಾಗಿಸಲು ಎಲೆಕ್ಟ್ರಿಕ್ ರಾಟೆಯಂತೆ ಬಳಸುತ್ತಿದ್ದಾರೆ. ನೆಟ್ಟಿಗರು ಈ ಆವಿಷ್ಕಾರಕ್ಕೆ ಭಲೆ ಎನ್ನುತ್ತಿದ್ದಾರೆ.

ಹಳೆಯ ಬಜಾಜ್ ಸ್ಕೂಟರ್​ನಿಂದ ಎಲೆಕ್ಟ್ರಿಕ್​ ರಾಟೆ; ವಿಡಿಯೋ ವೈರಲ್
ಬಜಾಜ್​ ಸ್ಕೂಟರ್​ನಿಂದ ಎಲೆಕ್ಟ್ರಿಕ್​ ರಾಟೆ
Follow us
| Updated By: ಶ್ರೀದೇವಿ ಕಳಸದ

Updated on: Dec 06, 2022 | 10:46 AM

Viral Video : ಉತ್ತರ ಭಾರತದ ಲಲ್ಲೂರಾಮ್​ ಸೋಲಾರ್ ಫ್ಯಾನ್​ ಕಂಡುಹಿಡಿದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಹಳ್ಳಿಯುವಕನೊಬ್ಬ ರೂ. 10,000 ಖರ್ಚಿನಲ್ಲಿ 6 ಜನರು ಪ್ರಯಾಣಿಸುವ ಎಲೆಕ್ಟ್ರಿಕ್​ ರೈಡರ್ (Electric Pulley) ತಯಾರಿಸಿದ್ದನ್ನು ನೋಡಿದ್ದೀರಿ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಕಟ್ಟಡ ಕಾರ್ಮಿಕರು ಹಳೆಯ ಬಜಾಜ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್​ ರಾಟೆಯಂತೆ ಬಳಸಿ ಈ ಮೂಲಕ ಕಟ್ಟಡ ಸಾಮಗ್ರಿಗಳನ್ನು ಮೇಲ್​ಮಹಡಿಗೆ ಸಾಗಿಸುತ್ತಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಅನ್ನು ಡಿ. 3ರಂದು ಅಪ್​ಲೋಡ್ ಮಾಡಲಾಗಿದೆ. ಅವಶ್ಯಕತೆಗೆ ತಕ್ಕಂತೆ ಆವಿಷ್ಕಾರಗಳು ದಿನೇದಿನೇ ಆಗುತ್ತಲೇ ಇರುತ್ತವೆ. ಆದರೆ ನಮ್ಮ ಗಮನಕ್ಕೆ ಬಂದಿರುವುದಿಲ್ಲವಷ್ಟೇ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್​ಲೋಡ್ ಆದಾಗಲೇ ನಮಗೆ ಅತ್ತ ಗಮನ ಹೋಗುತ್ತದೆ.

ಅನೇಕರು ಪ್ರತಿಕ್ರಿಯಿಸಿ ಈ ಸ್ಥಳವನ್ನು ಊಹಿಸಿದ್ದಾರೆ. ಆಂಧ್ರಪ್ರದೇಶದ ಶ್ರೀಶೈಲಂನಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ ಎಂದಿದ್ದಾರೆ. ಕ್ರೇನ್​ ಸ್ಕೂಟರ್​, ಇದನ್ನು ಕಂಡುಹಿಡಿದವರಿಗೆ ಅಭಿನಂದನೆ ಎಂದಿದ್ದಾರೆ ಮತ್ತೊಬ್ಬರು. ಭಾರತೀಯರ ಬುದ್ಧಿಶಕ್ತಿ ಎಂದರೆ ಇದು! ಶಭಾಷ್​ ಎಂದಿದ್ದಾರೆ ಮಗದೊಬ್ಬರು. ಭಾರತೀಯರು ಹುಟ್ಟಿನಿಂದಲೇ ಇಂಥ ಮೆಕ್ಯಾನಿಕಲ್​ ಕೌಶಲವನ್ನು ಹೊಂದಿದ್ದಾರೆ ಎಂದಿದ್ದಾರೆ ಇನ್ನೂ ಒಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ