AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮನೆಯ ಬಾಲ್ಕನಿಯನ್ನು ಬಾಡಿಗೆಗೆ ನೀಡಿದ ವ್ಯಕ್ತಿ, ಬಾಡಿಗೆ ಕೇಳಿದರೆ ಶಾಕ್​​ ಆಗುವುದಂತೂ ಖಂಡಿತಾ!

ಬಾಲ್ಕನಿಯಲ್ಲಿ ಒಂದೇ ಒಂದು ಹಾಸಿಗೆಯನ್ನು ಹಾಕಿದ್ದು, ಬಾಲ್ಕನಿಯಲ್ಲಿ ವಾಸ ಮಾಡುವವರ ಸಂಚಾರಕ್ಕೆ ಸ್ಲೈಡಿಂಗ್ ಗ್ಲಾಸ್ ಡೋರ್ ಅಳವಡಿಸಲಾಗಿದ್ದು, ಮಳೆ ಬಂದರೂ ನೀರು ಒಳಗೆ ಬರದಂತೆ ವ್ಯವಸ್ಥೆ ಮಾಡಲಾಗಿದೆ. ಆದರೆ ಇದರ ಬಾಡಿಗೆ ಕೇಳಿ ನೆಟ್ಟಿಗರು ಶಾಕ್​​ ಆಗಿದ್ದಾರೆ.

ತನ್ನ ಮನೆಯ ಬಾಲ್ಕನಿಯನ್ನು ಬಾಡಿಗೆಗೆ ನೀಡಿದ ವ್ಯಕ್ತಿ, ಬಾಡಿಗೆ ಕೇಳಿದರೆ ಶಾಕ್​​ ಆಗುವುದಂತೂ ಖಂಡಿತಾ!
ಅಕ್ಷತಾ ವರ್ಕಾಡಿ
|

Updated on: Jul 07, 2024 | 3:11 PM

Share

ಬಾಡಿಗೆ ಕೊಡಲು ಕಷ್ಟವಾಗುವುದಕ್ಕೆ ವ್ಯಕ್ತಿಯೊಬ್ಬ ತನ್ನ ಮನೆಯ ಬಾಲ್ಕನಿಯನ್ನೇ ಬಾಡಿಗೆಗೆ ನೀಡಿರುವ ಘಟನೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದೆ. ತನ್ನ 2BHK ಮನೆಯ ಬಾಲ್ಕನಿಯಲ್ಲಿ ಹಾಸಿಗೆಯನ್ನು ಇರಿಸಿ ಬಾಡಿಗೆಗೆ ನೀಡುವುದಾಗಿ ಜಾಹೀರಾತು ನೀಡಿದ್ದಾನೆ. ಸದ್ಯ ಈ ಜಾಹೀರಾತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ. ಇದಲ್ಲದೇ ಇದರ ಬಾಡಿಗೆ ಕೇಳಿ ನೆಟ್ಟಿಗರು ಶಾಕ್​​ ಆಗಿದ್ದಾರೆ.

ನ್ಯೂಯಾರ್ಕ್ ಪೋಸ್ಟ್ ವರದಿಯ ಪ್ರಕಾರ, ಈ ಬಾಲ್ಕನಿಯನ್ನು ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್ ಪಟ್ಟಿಯಲ್ಲಿ ಬಾಡಿಗೆಗೆ ನೀಡುವುದಾಗಿ ಬರೆಯಲಾಗಿದೆ. ಕುತೂಹಲಕಾರಿ ವಿಷಯವೆಂದರೆ, ಈ ಬಾಲ್ಕನಿಯನ್ನು ಸೂರ್ಯನ ಬೆಳಕಿನ ಕೋಣೆ ಎಂದು ವಿವರಿಸಲಾಗಿದೆ. ವಾಸ್ತವವಾಗಿ, ಬಾಲ್ಕನಿಯಲ್ಲಿ ಒಂದೇ ಒಂದು ಹಾಸಿಗೆಯನ್ನು ಹಾಕಿದ್ದು, ಇದರ ಬೆಲೆಯನ್ನು ಹಾಕಲಾಗಿದೆ. ಈ ಪುಟ್ಟ ಬಾಲ್ಕನಿಯ ತಿಂಗಳ ಬಾಡಿಗೆ ಬರೋಬ್ಬರಿ 969 ಡಾಲರ್​ ಅಂದರೆ ತಿಂಗಳಿಗೆ ಸುಮಾರು 80,889 ರೂ. ಈ ಕೊಠಡಿಯು ಒಬ್ಬ ವ್ಯಕ್ತಿ ವಾಸಿಸುವಷ್ಟು ದೊಡ್ಡದಾಗಿದೆ ಎಂದು ಜಾಹೀರಾತಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಹಾಡು ಹಗಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾದ ಖದೀಮರು

ವರದಿಗಳ ಪ್ರಕಾರ, ಬಾಲ್ಕನಿಯನ್ನು ಮುಚ್ಚಿದ ಕೋಣೆಯಂತೆ ಕಾಣುವಂತೆ, ಅದರಲ್ಲಿ ಕನ್ನಡಿ ಮತ್ತು ಪರದೆಯನ್ನು ಸಹ ಅಳವಡಿಸಿದ್ದಾರೆ. ಅಷ್ಟೇ ಅಲ್ಲ ಬಾಲ್ಕನಿಯಲ್ಲಿ ವಾಸ ಮಾಡುವವರ ಸಂಚಾರಕ್ಕೆ ಸ್ಲೈಡಿಂಗ್ ಗ್ಲಾಸ್ ಡೋರ್ ಅಳವಡಿಸಲಾಗಿದ್ದು, ಮಳೆ ಬಂದರೂ ನೀರು ಒಳಗೆ ಬರದಂತೆ ಬಾಲ್ಕನಿ ಸುತ್ತಲೂ ಗಾಜಿನ ಗೋಡೆ ಹಾಕಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ