AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೂಚಿಸ್ತಾನದ ಸಹಾಯಕ ಆಯುಕ್ತರಾಗಿ ಹಿಂದೂ ಮಹಿಳೆ ನೇಮಕ, ಯಾರು ಈ ಕಾಶಿಶ್ ಚೌಧರಿ? ಇಲ್ಲಿದೆ ಮಾಹಿತಿ

25 ವರ್ಷದ ಹಿಂದೂ ಮಹಿಳೆ ಕಾಶಿಶ್ ಚೌಧರಿ, ಬಲೂಚಿಸ್ತಾನದ ಪ್ರಾಂತ್ಯದ ಸಹಾಯಕ ಆಯುಕ್ತರಾಗಿ ನೇಮಕಗೊಳ್ಳುವ ಮೂಲಕ ಎಲ್ಲರನ್ನು ಕೂಡ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಭಿವೃದ್ಧಿ ಹೊಂದದ ಪ್ರದೇಶದಿಂದ ಬಂದ ಕಾಶಿಶ್ ಚೌಧರಿ ಅವರ ಸಾಧನೆಯ ಹಾದಿ ಹೇಗಿತ್ತು? ಈ ಬಗ್ಗೆ ಅವರು ಹೇಳೋದೇನು? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಲೂಚಿಸ್ತಾನದ ಸಹಾಯಕ ಆಯುಕ್ತರಾಗಿ ಹಿಂದೂ ಮಹಿಳೆ ನೇಮಕ, ಯಾರು ಈ ಕಾಶಿಶ್ ಚೌಧರಿ? ಇಲ್ಲಿದೆ ಮಾಹಿತಿ
ಬಲೂಚಿಸ್ತಾನದ ಸಹಾಯಕ ಆಯುಕ್ತರಾಗಿ ಕಾಶಿಶ್ ಚೌಧರಿ ಆಯ್ಕೆ
ಸಾಯಿನಂದಾ
| Edited By: |

Updated on:May 15, 2025 | 10:26 AM

Share

ಬಲೂಚಿಸ್ತಾನ, ಮೇ 15 : ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೆ ನಮ್ಮ ಸುತ್ತಮುತ್ತಲಿನ ಅನೇಕರು ಉದಾಹರಣೆಯಾಗಿ ನಿಲ್ಲುತ್ತಾರೆ. ಅಂತಹವರ ಸಾಲಿಗೆ ಕಾಶಿಶ್ ಚೌಧರಿ (kashish chaudhary) ಕೂಡ ಸೇರಿಕೊಳ್ಳುತ್ತಾರೆ. ಇವರು, ಬಲೂಚಿಸ್ತಾನ (balochistan) ದ ಮೊದಲ ಹಿಂದೂ ಮಹಿಳಾ ಸಹಾಯಕ ಆಯುಕ್ತ (assistant commissioner) ರಾಗಿ ನೇಮಕಗೊಂಡಿದ್ದಾರೆ. ಇನ್ನು, ತನ್ನ ಸಾಧನೆಯ ಗುಟ್ಟಿನ ಬಗ್ಗೆ ಹಾಗೂ ತನ್ನ ಮುಂದಿನ ಗುರಿಯೇನು ಎನ್ನುವ ಬಗ್ಗೆ ಸಮಾ ಸುದ್ದಿ ವಾಹಿನಿ (Samaa News) ಜೊತೆಗೆ ಮಾತನಾಡಿ ಈ ಬಗ್ಗೆ ಬಹಿರಂಗ ಪಡಿಸಿದ್ದಾರೆ.

ಕಾಶಿಶ್ ಚೌಧರಿ ಚಾಗೈ ಜಿಲ್ಲೆಯ ನೊಶ್ಕಿಯವಾರಾಗಿದ್ದು, ಅಷ್ಟೇನು ಅಭಿವೃದ್ಧಿ ಕಾಣದ ಊರು ಇವರದ್ದು. ಸೀಮಿತ ಸಂಪನ್ಮೂಲ, ಎಲ್ಲಾ ಸವಾಲುಗಳ ಹೊರತಾಗಿಯೂ ಬಲೂಚಿಸ್ತಾನ್ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಹಾಯಕ ಆಯುಕ್ತ ಹುದ್ದೆಯನ್ನು ತನ್ನದಾಗಿಸಿಕೊಂಡಿದ್ದು, ಮೊದಲ ಹಿಂದೂ ಮಹಿಳಾ ಸಹಾಯಕ ಆಯುಕ್ತರು ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಕ್ವೆಟ್ಟಾದಲ್ಲಿ ಬಲೂಚಿಸ್ತಾನ್ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿಯವರನ್ನು ಭೇಟಿಯಾಗಿದ್ದು, ಈ ವೇಳೆಯಲ್ಲಿ ತಾವು ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಸಬಲೀಕರಣಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಕಠಿಣ ಪರಿಶ್ರಮ ಹಾಗೂ ಶಿಸ್ತು : ಯಶಸ್ಸಿನ ಗುಟ್ಟು

ಸಮಾ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಕಾಶಿಶ್, ಮೂರು ವರ್ಷಗಳ ನಿರಂತರ ಅಧ್ಯಯನದೊಂದಿಗೆ ಶುರುವಾದ ಈ ಪ್ರಯಾಣವು ಇಂದು ಈ ಹಂತಕ್ಕೆ ಬಂದು ತಲುಪಿದ್ದೇನೆ. ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ಪ್ರತಿನಿತ್ಯ ಸರಿಸುಮಾರು ಎಂಟು ಗಂಟೆಗಳ ಕಾಲ ತಯಾರಿ ನಡೆಸಿದ್ದೇನೆ. ಶಿಸ್ತು,ಕಠಿಣ ಪರಿಶ್ರಮವೇ ನನ್ನ ಸಾಧನೆಯ ಗುಟ್ಟು. ಸಮಾಜಕ್ಕೆ ಏನನ್ನಾದರೂ ನನ್ನಿಂದ ಸಾಧ್ಯವಾದಷ್ಟು ಕೊಡುಗೆ ನೀಡಬೇಕೆನ್ನುವುದೇ ನನ್ನನ್ನು ಈ ಹಂತಕ್ಕೆ ಬಂದು ತಲುಪುವಂತೆ ಮಾಡಿದೆ ಎಂದಿದ್ದಾರೆ.

ಇದನ್ನೂ ಓದಿ
Image
ಸ್ನೇಹಿತನಿಗಾಗಿ ಚಿರತೆ ಜತೆ ಯುದ್ಧಕ್ಕೆ ನಿಂತ ಶ್ವಾನಗಳು
Image
ಫ್ಯಾಮಿಲಿ ರೆಸ್ಟೋರೆಂಟ್​​​ನಲ್ಲಿ ಬಿಗ್ ಫೈಟ್, ಕಾರಣ ಏನು ಗೊತ್ತಾ?
Image
ಸಂಗೀತ ಕಾರ್ಯಕ್ರಮದಲ್ಲಿ ಅವಾಂತರ ಸೃಷ್ಟಿಸಿದ ಗೂಳಿ
Image
ಕಾರಿನ ಮೇಲೆ ನವಜೋಡಿಗಳ ಅಪಾಯಕಾರಿ ಸ್ಟಂಟ್, ವಿಡಿಯೋ ವೈರಲ್

ಇದನ್ನೂ ಓದಿ : ಸ್ನೇಹಿತನಿಗಾಗಿ ಚಿರತೆ ಜತೆ ಯುದ್ಧಕ್ಕೆ ನಿಂತ ಶ್ವಾನಗಳು

ಮಗಳ ಸಾಧನೆಗೆ ಕಂಡು ಸಂತಸ ವ್ಯಕ್ತಪಡಿಸಿದ ತಂದೆ

ಬಲೂಚಿಸ್ತಾನದ ಮೊದಲ ಹಿಂದೂ ಮಹಿಳಾ ಸಹಾಯಕ ಆಯುಕ್ತರಾಗಿ ಕಾಶಿಶ್ ಚೌಧರಿ ನೇಮಕಗೊಂಡಿದ್ದು, ಈ ಬಗ್ಗೆ ಅವರ ತಂದೆ ಗಿರ್ಧಾರಿ ಲಾಲ್ ಖುಷಿ ವ್ಯಕ್ತಪಡಿಸಿದ್ದಾರೆ. ನನ್ನ ಮಗಳ ನಿಜಕ್ಕೂ ಖುಷಿ ತಂದು ಕೊಟ್ಟಿದೆ. ಮಗಳು ಈ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. ಈ ಹಂತಕ್ಕೆ ಬೆಳೆಯಲು ಆಕೆಯ ನಿರಂತರ ಶ್ರಮವೇ ಕಾರಣ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Thu, 15 May 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ