AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕ ಮರೆತುಹೋದ ಹಣದ ಬ್ಯಾಗ್​​​ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬೆಂಗಳೂರಿನ ಆಟೋ ಚಾಲಕ

ಬೆಂಗಳೂರಿನ ಆಟೋ ಚಾಲಕರೊಬ್ಬರು ಪ್ರಯಾಣಿಕರ ಕಳೆದುಹೋದ ಹಣದ ಚೀಲವನ್ನು ಪ್ರಾಮಾಣಿಕವಾಗಿ ಹಿಂದಿರುಗಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಗಳಿಸಿದ್ದಾರೆ. ಈ ಘಟನೆ ವೈರಲ್ ಆಗಿದ್ದು, ಚಾಲಕನ ಪ್ರಾಮಾಣಿಕತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. 'ಎಲ್ಲಾ ಆಟೋ ಚಾಲಕರು ಕೆಟ್ಟವರು ಅಲ್ಲ' ಎಂದು ಚಾಲಕ ಹೇಳಿದ್ದು, ಈ ಸಕಾರಾತ್ಮಕ ಘಟನೆ ಇಡೀ ಆಟೋ ಚಾಲಕ ವರ್ಗಕ್ಕೆ ಮಾದರಿಯಾಗಿದೆ.

ಪ್ರಯಾಣಿಕ ಮರೆತುಹೋದ ಹಣದ ಬ್ಯಾಗ್​​​ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬೆಂಗಳೂರಿನ ಆಟೋ ಚಾಲಕ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 17, 2025 | 11:58 AM

Share

ಬೆಂಗಳೂರಿನ ಆಟೋ ಚಾಲಕರೊಬ್ಬರು (Bangalore Auto Driver) ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಮನಸ್ಸು ಗೆದ್ದಿದ್ದಾರೆ. ಇದೀಗ ಈ ಬಗ್ಗೆ ಪೋಸ್ಟ್​ವೊಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದ್ದು, ಈ ಚಾಲಕ ಪ್ರಮಾಣಿಕತೆಗೆ ಮಾದರಿ ಎಂದು ನೆಟ್ಟಿಗರು ಹೇಳಿದ್ದಾರೆ. ಇನ್‌ಸ್ಟಾಗ್ರಾಮ್​​​ನಲ್ಲಿ ವೈರಲ್​ ಆಗಿರುವ ಪೋಸ್ಟ್​​​ನಲ್ಲಿ, ಪ್ರಯಾಣಿಕರೊಬ್ಬರು ಆಟೋದಲ್ಲಿ ಹಣ ತುಂಬಿದ್ದ ಬ್ಯಾಗ್​​ನ್ನು ಮರೆತು ಬಿಟ್ಟು ಹೋಗಿದ್ದಾರೆ. ಆ ಬ್ಯಾಗ್​​ನ್ನು ಪ್ರಾಮಾಣಿಕವಾಗಿ ಆಟೋ ಚಾಲಕ ಪ್ರಯಾಣಿಕರಿಗೆ ಹಿಂತಿರುಗಿಸಿದ್ದಾರೆ. ಆಟೋ ಚಾಲಕನ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಈ ವಿಡಿಯೋದಲ್ಲಿ ಆಟೋ ಚಾಲಕರೊಬ್ಬರು ಪ್ರಯಾಣಿಕರಿಗೆ ಹಣ ಬ್ಯಾಗ್​​ನ್ನು ಹಿಂತಿರುಗಿಸುವುದನ್ನು ನೋಡಬಹುದು. ಜತೆಗೆ ಚಾಲಕನ ಪ್ರಾಮಾಣಿಕತೆಗೆ ಪ್ರಯಾಣಿಕರು ಅವರನ್ನು ಕೊಂಡಾಡಿದ್ದಾರೆ. ಚಾಲಕ ಈ ಬಗ್ಗೆ ಮಾತನಾಡಿದ್ದು, “ಅವರ ಹಣವನ್ನು ಪ್ರಾಮಾಣಿಕವಾಗಿ ವಾಪಸ್ ನೀಡಿದ್ದಾನೆ. ಎಲ್ಲ ಆಟೋ ಚಾಲಕರು ಕೆಟ್ಟವರಾಗಿರುವುದಿಲ್ಲ” ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ನಮ್ಮ ಬೆಂಗಳೂರು ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಹಿಂದೆ ಬೆಂಗಳೂರಿನ ಮಹಿಳೆಯೊಬ್ಬರು ಇಯರ್‌ಫೋನ್‌ ಆಟೋದಲ್ಲಿ ಬಿಟ್ಟು ಹೋದಾಗ, ಅದನ್ನು ಪ್ರಾಮಾಣಿಕವಾಗಿ ವಾಪಸ್​​​ ನೀಡಿದ್ರು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆಗೆ ಕಾರಣವಾಗಿತ್ತು.

ಇದನ್ನೂ ಓದಿ: ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟು ಹೋದ ಇಯರ್‌ಫೋನ್​​​ನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬೆಂಗಳೂರಿನ ಆಟೋ ಚಾಲಕ!

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಹೇಳಿದ್ದೇನು?

ಬೆಂಗಳೂರಿನಲ್ಲಿ ಒಳ್ಳೆಯ ಮನಸ್ಸಿನ ಆಟೋ ಚಾಲಕರು ಕೂಡ ಇದ್ದಾರೆ. ಇದೊಂದು ಪ್ರಮಾಣಿಕತೆಗೆ ಮಾದರಿ ಎಂದು ಹೇಳಿದ್ದಾರೆ. ಹಣ ಶಾಶ್ವತ ಅಲ್ಲ, ಪ್ರಮಾಣಿಕತೆ ಶಾಶ್ವತ ಎಂಬುದು ಆ ಆಟೋ ಚಾಲಕನಿಗೆ ಅರ್ಥವಾಗಿರಬೇಕು ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ಇಂತಹ ಜನರು ಇನ್ನೂ ಇರುವುದನ್ನು ನೋಡಲು ಸಂತೋಷವಾಗಿದೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ