AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕ ಮರೆತುಹೋದ ಹಣದ ಬ್ಯಾಗ್​​​ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬೆಂಗಳೂರಿನ ಆಟೋ ಚಾಲಕ

ಬೆಂಗಳೂರಿನ ಆಟೋ ಚಾಲಕರೊಬ್ಬರು ಪ್ರಯಾಣಿಕರ ಕಳೆದುಹೋದ ಹಣದ ಚೀಲವನ್ನು ಪ್ರಾಮಾಣಿಕವಾಗಿ ಹಿಂದಿರುಗಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಗಳಿಸಿದ್ದಾರೆ. ಈ ಘಟನೆ ವೈರಲ್ ಆಗಿದ್ದು, ಚಾಲಕನ ಪ್ರಾಮಾಣಿಕತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. 'ಎಲ್ಲಾ ಆಟೋ ಚಾಲಕರು ಕೆಟ್ಟವರು ಅಲ್ಲ' ಎಂದು ಚಾಲಕ ಹೇಳಿದ್ದು, ಈ ಸಕಾರಾತ್ಮಕ ಘಟನೆ ಇಡೀ ಆಟೋ ಚಾಲಕ ವರ್ಗಕ್ಕೆ ಮಾದರಿಯಾಗಿದೆ.

ಪ್ರಯಾಣಿಕ ಮರೆತುಹೋದ ಹಣದ ಬ್ಯಾಗ್​​​ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬೆಂಗಳೂರಿನ ಆಟೋ ಚಾಲಕ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 17, 2025 | 11:58 AM

Share

ಬೆಂಗಳೂರಿನ ಆಟೋ ಚಾಲಕರೊಬ್ಬರು (Bangalore Auto Driver) ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಮನಸ್ಸು ಗೆದ್ದಿದ್ದಾರೆ. ಇದೀಗ ಈ ಬಗ್ಗೆ ಪೋಸ್ಟ್​ವೊಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದ್ದು, ಈ ಚಾಲಕ ಪ್ರಮಾಣಿಕತೆಗೆ ಮಾದರಿ ಎಂದು ನೆಟ್ಟಿಗರು ಹೇಳಿದ್ದಾರೆ. ಇನ್‌ಸ್ಟಾಗ್ರಾಮ್​​​ನಲ್ಲಿ ವೈರಲ್​ ಆಗಿರುವ ಪೋಸ್ಟ್​​​ನಲ್ಲಿ, ಪ್ರಯಾಣಿಕರೊಬ್ಬರು ಆಟೋದಲ್ಲಿ ಹಣ ತುಂಬಿದ್ದ ಬ್ಯಾಗ್​​ನ್ನು ಮರೆತು ಬಿಟ್ಟು ಹೋಗಿದ್ದಾರೆ. ಆ ಬ್ಯಾಗ್​​ನ್ನು ಪ್ರಾಮಾಣಿಕವಾಗಿ ಆಟೋ ಚಾಲಕ ಪ್ರಯಾಣಿಕರಿಗೆ ಹಿಂತಿರುಗಿಸಿದ್ದಾರೆ. ಆಟೋ ಚಾಲಕನ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಈ ವಿಡಿಯೋದಲ್ಲಿ ಆಟೋ ಚಾಲಕರೊಬ್ಬರು ಪ್ರಯಾಣಿಕರಿಗೆ ಹಣ ಬ್ಯಾಗ್​​ನ್ನು ಹಿಂತಿರುಗಿಸುವುದನ್ನು ನೋಡಬಹುದು. ಜತೆಗೆ ಚಾಲಕನ ಪ್ರಾಮಾಣಿಕತೆಗೆ ಪ್ರಯಾಣಿಕರು ಅವರನ್ನು ಕೊಂಡಾಡಿದ್ದಾರೆ. ಚಾಲಕ ಈ ಬಗ್ಗೆ ಮಾತನಾಡಿದ್ದು, “ಅವರ ಹಣವನ್ನು ಪ್ರಾಮಾಣಿಕವಾಗಿ ವಾಪಸ್ ನೀಡಿದ್ದಾನೆ. ಎಲ್ಲ ಆಟೋ ಚಾಲಕರು ಕೆಟ್ಟವರಾಗಿರುವುದಿಲ್ಲ” ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ನಮ್ಮ ಬೆಂಗಳೂರು ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಹಿಂದೆ ಬೆಂಗಳೂರಿನ ಮಹಿಳೆಯೊಬ್ಬರು ಇಯರ್‌ಫೋನ್‌ ಆಟೋದಲ್ಲಿ ಬಿಟ್ಟು ಹೋದಾಗ, ಅದನ್ನು ಪ್ರಾಮಾಣಿಕವಾಗಿ ವಾಪಸ್​​​ ನೀಡಿದ್ರು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆಗೆ ಕಾರಣವಾಗಿತ್ತು.

ಇದನ್ನೂ ಓದಿ: ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟು ಹೋದ ಇಯರ್‌ಫೋನ್​​​ನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬೆಂಗಳೂರಿನ ಆಟೋ ಚಾಲಕ!

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಹೇಳಿದ್ದೇನು?

ಬೆಂಗಳೂರಿನಲ್ಲಿ ಒಳ್ಳೆಯ ಮನಸ್ಸಿನ ಆಟೋ ಚಾಲಕರು ಕೂಡ ಇದ್ದಾರೆ. ಇದೊಂದು ಪ್ರಮಾಣಿಕತೆಗೆ ಮಾದರಿ ಎಂದು ಹೇಳಿದ್ದಾರೆ. ಹಣ ಶಾಶ್ವತ ಅಲ್ಲ, ಪ್ರಮಾಣಿಕತೆ ಶಾಶ್ವತ ಎಂಬುದು ಆ ಆಟೋ ಚಾಲಕನಿಗೆ ಅರ್ಥವಾಗಿರಬೇಕು ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ಇಂತಹ ಜನರು ಇನ್ನೂ ಇರುವುದನ್ನು ನೋಡಲು ಸಂತೋಷವಾಗಿದೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ