AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕ ಮರೆತುಹೋದ ಹಣದ ಬ್ಯಾಗ್​​​ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬೆಂಗಳೂರಿನ ಆಟೋ ಚಾಲಕ

ಬೆಂಗಳೂರಿನ ಆಟೋ ಚಾಲಕರೊಬ್ಬರು ಪ್ರಯಾಣಿಕರ ಕಳೆದುಹೋದ ಹಣದ ಚೀಲವನ್ನು ಪ್ರಾಮಾಣಿಕವಾಗಿ ಹಿಂದಿರುಗಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಗಳಿಸಿದ್ದಾರೆ. ಈ ಘಟನೆ ವೈರಲ್ ಆಗಿದ್ದು, ಚಾಲಕನ ಪ್ರಾಮಾಣಿಕತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ. 'ಎಲ್ಲಾ ಆಟೋ ಚಾಲಕರು ಕೆಟ್ಟವರು ಅಲ್ಲ' ಎಂದು ಚಾಲಕ ಹೇಳಿದ್ದು, ಈ ಸಕಾರಾತ್ಮಕ ಘಟನೆ ಇಡೀ ಆಟೋ ಚಾಲಕ ವರ್ಗಕ್ಕೆ ಮಾದರಿಯಾಗಿದೆ.

ಪ್ರಯಾಣಿಕ ಮರೆತುಹೋದ ಹಣದ ಬ್ಯಾಗ್​​​ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬೆಂಗಳೂರಿನ ಆಟೋ ಚಾಲಕ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 17, 2025 | 11:58 AM

Share

ಬೆಂಗಳೂರಿನ ಆಟೋ ಚಾಲಕರೊಬ್ಬರು (Bangalore Auto Driver) ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಮನಸ್ಸು ಗೆದ್ದಿದ್ದಾರೆ. ಇದೀಗ ಈ ಬಗ್ಗೆ ಪೋಸ್ಟ್​ವೊಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದ್ದು, ಈ ಚಾಲಕ ಪ್ರಮಾಣಿಕತೆಗೆ ಮಾದರಿ ಎಂದು ನೆಟ್ಟಿಗರು ಹೇಳಿದ್ದಾರೆ. ಇನ್‌ಸ್ಟಾಗ್ರಾಮ್​​​ನಲ್ಲಿ ವೈರಲ್​ ಆಗಿರುವ ಪೋಸ್ಟ್​​​ನಲ್ಲಿ, ಪ್ರಯಾಣಿಕರೊಬ್ಬರು ಆಟೋದಲ್ಲಿ ಹಣ ತುಂಬಿದ್ದ ಬ್ಯಾಗ್​​ನ್ನು ಮರೆತು ಬಿಟ್ಟು ಹೋಗಿದ್ದಾರೆ. ಆ ಬ್ಯಾಗ್​​ನ್ನು ಪ್ರಾಮಾಣಿಕವಾಗಿ ಆಟೋ ಚಾಲಕ ಪ್ರಯಾಣಿಕರಿಗೆ ಹಿಂತಿರುಗಿಸಿದ್ದಾರೆ. ಆಟೋ ಚಾಲಕನ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಈ ವಿಡಿಯೋದಲ್ಲಿ ಆಟೋ ಚಾಲಕರೊಬ್ಬರು ಪ್ರಯಾಣಿಕರಿಗೆ ಹಣ ಬ್ಯಾಗ್​​ನ್ನು ಹಿಂತಿರುಗಿಸುವುದನ್ನು ನೋಡಬಹುದು. ಜತೆಗೆ ಚಾಲಕನ ಪ್ರಾಮಾಣಿಕತೆಗೆ ಪ್ರಯಾಣಿಕರು ಅವರನ್ನು ಕೊಂಡಾಡಿದ್ದಾರೆ. ಚಾಲಕ ಈ ಬಗ್ಗೆ ಮಾತನಾಡಿದ್ದು, “ಅವರ ಹಣವನ್ನು ಪ್ರಾಮಾಣಿಕವಾಗಿ ವಾಪಸ್ ನೀಡಿದ್ದಾನೆ. ಎಲ್ಲ ಆಟೋ ಚಾಲಕರು ಕೆಟ್ಟವರಾಗಿರುವುದಿಲ್ಲ” ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ನಮ್ಮ ಬೆಂಗಳೂರು ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಹಿಂದೆ ಬೆಂಗಳೂರಿನ ಮಹಿಳೆಯೊಬ್ಬರು ಇಯರ್‌ಫೋನ್‌ ಆಟೋದಲ್ಲಿ ಬಿಟ್ಟು ಹೋದಾಗ, ಅದನ್ನು ಪ್ರಾಮಾಣಿಕವಾಗಿ ವಾಪಸ್​​​ ನೀಡಿದ್ರು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆಗೆ ಕಾರಣವಾಗಿತ್ತು.

ಇದನ್ನೂ ಓದಿ: ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟು ಹೋದ ಇಯರ್‌ಫೋನ್​​​ನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬೆಂಗಳೂರಿನ ಆಟೋ ಚಾಲಕ!

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಹೇಳಿದ್ದೇನು?

ಬೆಂಗಳೂರಿನಲ್ಲಿ ಒಳ್ಳೆಯ ಮನಸ್ಸಿನ ಆಟೋ ಚಾಲಕರು ಕೂಡ ಇದ್ದಾರೆ. ಇದೊಂದು ಪ್ರಮಾಣಿಕತೆಗೆ ಮಾದರಿ ಎಂದು ಹೇಳಿದ್ದಾರೆ. ಹಣ ಶಾಶ್ವತ ಅಲ್ಲ, ಪ್ರಮಾಣಿಕತೆ ಶಾಶ್ವತ ಎಂಬುದು ಆ ಆಟೋ ಚಾಲಕನಿಗೆ ಅರ್ಥವಾಗಿರಬೇಕು ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ಇಂತಹ ಜನರು ಇನ್ನೂ ಇರುವುದನ್ನು ನೋಡಲು ಸಂತೋಷವಾಗಿದೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು