AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೆಂಗಳೂರಿನ ಇಸ್ತ್ರಿ ದರ ಕೇಳಿ ಬೆಚ್ಚಿಬಿದ್ದ ನೋಯ್ಡಾ ನಿವಾಸಿ; ವೈರಲ್ ಆಯ್ತು ಪೋಸ್ಟ್

ನೋಯ್ಡಾದಿಂದ ಇತ್ತೀಚೆಗಷ್ಟೇ ಬೆಂಗಳೂರಿಗೆ ಶಿಫ್ಟ್ ಆದ ವ್ಯಕ್ತಿಗೆ ಇಸ್ತ್ರಿ ದರ ಅಚ್ಚರಿ ಮೂಡಿಸಿದೆ. ನೋಯ್ಡಾದಲ್ಲಿ 5 ರೂ. ಇದ್ದ ಇಸ್ತ್ರಿ ಇಲ್ಲಿ 20 ರೂ.. ಈ ಬಗ್ಗೆ ಸಜಿತ್ ಪೈ ತಮ್ಮ ಅನುಭವವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ಕಲ್ಲಿದ್ದಲಿನಿಂದ LPG ಆಧಾರಿತ ಇಸ್ತ್ರಿಗೆ ಬದಲಾವಣೆ, ಗ್ಯಾಸ್ ಬೆಲೆ ಏರಿಕೆ, ಕಾರ್ಮಿಕ ವೆಚ್ಚ ಮತ್ತು ನಗರದ ಜೀವನ ವೆಚ್ಚ ಹೆಚ್ಚಳವೇ ಇದಕ್ಕೆ ಮುಖ್ಯ ಕಾರಣ ಎಂದು ಅವರು ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

Viral Post: ಬೆಂಗಳೂರಿನ ಇಸ್ತ್ರಿ ದರ ಕೇಳಿ ಬೆಚ್ಚಿಬಿದ್ದ ನೋಯ್ಡಾ ನಿವಾಸಿ; ವೈರಲ್ ಆಯ್ತು ಪೋಸ್ಟ್
ಬೆಂಗಳೂರಿನ ಇಸ್ತ್ರಿ ದರ ಕೇಳಿ ಬೆಚ್ಚಿಬಿದ್ದ ನೋಯ್ಡಾ ನಿವಾಸಿImage Credit source: Twitter/@sajithpai
ಅಕ್ಷತಾ ವರ್ಕಾಡಿ
|

Updated on: May 28, 2026 | 1:28 PM

Share

ಬೆಂಗಳೂರು: ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಜೀವನ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮನೆ ಬಾಡಿಗೆ, ದಿನಸಿ, ಪ್ರಯಾಣ ಮಾತ್ರವಲ್ಲದೆ ಸಾಮಾನ್ಯ ಸೇವೆಗಳ ದರವೂ ಜನರನ್ನು ಅಚ್ಚರಿಗೊಳಿಸುತ್ತಿದೆ. ಇದೀಗ ಬೆಂಗಳೂರಿನ ಇಸ್ತ್ರಿ ದರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಡೆದ ಚರ್ಚೆ ಭಾರೀ ವೈರಲ್ ಆಗಿದೆ. ನೋಯ್ಡಾದಿಂದ ಇತ್ತೀಚೆಗಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಶಿಫ್ಟ್ ಆದ ‘ಸಜಿತ್ ಪೈ’ (Sajith Pai) ಎಂಬ ಸಾಹಸೋದ್ಯಮ ಬಂಡವಾಳಶಾಹಿ (Venture Capitalist), ಇಲ್ಲಿನ ಬಟ್ಟೆ ಇಸ್ತ್ರಿ ದರವನ್ನು ನೋಡಿ ದಂಗಾಗಿದ್ದಾರೆ. ಈ ಅನುಭವವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 ರಿಂದ ನೇರ 20ರೂ:

ತಮ್ಮ ಪೋಸ್ಟ್‌ನಲ್ಲಿ ಸಜಿತ್ ಪೈ, “ನಾನು ಇದೇ ತಿಂಗಳ ಆರಂಭದಲ್ಲಿ ಬೆಂಗಳೂರಿಗೆ ಬಂದೆ. ಇಲ್ಲಿ ನನಗೆ ಅತಿ ಹೆಚ್ಚು ಶಾಕ್ ನೀಡಿದ ಸಂಗತಿ ಎಂದರೆ ಬಟ್ಟೆ ಇಸ್ತ್ರಿಗೆ ತೆಗೆದುಕೊಳ್ಳುವ ಹಣ” ಎಂದು ಬರೆದಿದ್ದಾರೆ. ಅವರ ಪ್ರಕಾರ, ನೋಯ್ಡಾದಲ್ಲಿ ಪ್ರತಿ ಬಟ್ಟೆಗೆ ಕೇವಲ 5ರೂ. ಕೊಟ್ಟರೆ ಸಾಕಾಗುತ್ತಿತ್ತು. ಆದರೆ ಬೆಂಗಳೂರಿನ ಇಂದಿರಾನಗರ ಪ್ರದೇಶದಲ್ಲಿ ಪ್ರತಿ ಬಟ್ಟೆಗೆ 12 ರಿಂದ 20ರೂ. ವರೆಗೆ ಕೇಳುತ್ತಿರುವುದು ಅವರಿಗೆ ಅಚ್ಚರಿಯಾಗಿದೆ. ಮುಂಬೈನಿಂದ ಬೆಂಗಳೂರಿಗೆ ಬಂದಿರುವ ತಮ್ಮ ಸ್ನೇಹಿತರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಸ್ತ್ರಿ ದರ ಏಕೆ ದುಬಾರಿ?

ಈ ಬೆಲೆ ವ್ಯತ್ಯಾಸಕ್ಕೆ ಕಾರಣವನ್ನೂ ಸಜಿತ್ ಪೈ ವಿವರಿಸಿದ್ದಾರೆ. ಉತ್ತರ ಭಾರತದ ಹಲವೆಡೆ ಇನ್ನೂ ಕಲ್ಲಿದ್ದಲು ಆಧಾರಿತ ಇಸ್ತ್ರಿ ಪೆಟ್ಟಿಗೆಗಳನ್ನು ಬಳಸಲಾಗುತ್ತದೆ. ಆದರೆ ಬೆಂಗಳೂರಿನಲ್ಲಿ ಬಹುತೇಕ ಇಸ್ತ್ರಿ ಅಂಗಡಿಗಳು ಎಲ್‌ಪಿಜಿ (ಗ್ಯಾಸ್) ಚಾಲಿತ ಇಸ್ತ್ರಿಗಳನ್ನು ಬಳಸುತ್ತಿವೆ.

ಉತ್ತರ ಭಾರತದಲ್ಲಿ ಕಲ್ಲಿದ್ದಲು ಸುಲಭವಾಗಿ ಮತ್ತು ಕಡಿಮೆ ದರದಲ್ಲಿ ಲಭ್ಯವಾಗಬಹುದು. ಆದರೆ ಬೆಂಗಳೂರಿನಲ್ಲಿ ಗ್ಯಾಸ್ ಬೆಲೆ ಏರಿಕೆ, ಕಾರ್ಮಿಕ ವೆಚ್ಚ ಮತ್ತು ನಗರ ಜೀವನದ ಹೆಚ್ಚಿದ ಖರ್ಚು ಇಸ್ತ್ರಿ ದರ ಹೆಚ್ಚಲು ಪ್ರಮುಖ ಕಾರಣಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮನೆ ಬಾಗಿಲಿಗೆ ಬರುವ ಪೌರ ಕಾರ್ಮಿಕರಿಗೆ ಚಹಾ ಬಿಸ್ಕೆಟ್ ಕೊಟ್ಟು ಉಪಚರಿಸುವ ಮಹಿಳೆ

ನೆಟ್ಟಿಗರ ಪ್ರತಿಕ್ರಿಯೆ:

ಸಜಿತ್ ಪೈ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ವಿವಿಧ ನಗರಗಳ ಜನರು ತಮ್ಮ ಊರಿನ ಇಸ್ತ್ರಿ ದರಗಳನ್ನು ಹಂಚಿಕೊಂಡಿದ್ದಾರೆ. ಮುಂಬೈ ಮೂಲದ ಬಳಕೆದಾರರೊಬ್ಬರು, “ಠಾಣೆಯಲ್ಲಿ ಸಾಮಾನ್ಯ ಇಸ್ತ್ರಿಗೆ 7 ಮತ್ತು ಸ್ಟೀಮ್ ಇಸ್ತ್ರಿಗೆ 20ರೂ..ಬೆಂಗಳೂರಿನ ದರ ಕೇಳಿ ನಮಗೂ ಶಾಕ್ ಆಯಿತು” ಎಂದು ಕಾಮೆಂಟ್ ಮಾಡಿದ್ದಾರೆ. ಬೆಂಗಳೂರಿನ ನಿವಾಸಿಯೊಬ್ಬರು, “ಮೊದಲು 10ರೂ. ಇದ್ದ ಇಸ್ತ್ರಿ ದರ, ಗ್ಯಾಸ್ ಸಿಲಿಂಡರ್ ಬೆಲೆ ಏರಿದ ಬಳಿಕ 15 ರಿಂದ 20ರೂ. ಆಯಿತು. ಸಣ್ಣ ಇಂಡೇನ್ ಸಿಲಿಂಡರ್ ಬೆಲೆ ಭಾರೀ ಏರಿಕೆಯಾಗಿದೆ” ಎಂದು ಹೇಳಿದ್ದಾರೆ.

ಮೆಟ್ರೋ ನಗರಗಳ ದುಬಾರಿ ಜೀವನಕ್ಕೆ ಮತ್ತೊಂದು ಉದಾಹರಣೆ:

ಒಟ್ಟಿನಲ್ಲಿ, ಬೆಂಗಳೂರಿನ ಇಸ್ತ್ರಿ ದರದ ಕುರಿತ ಈ ಚರ್ಚೆ ಮೆಟ್ರೋ ನಗರಗಳಲ್ಲಿ ಸಾಮಾನ್ಯ ಸೇವೆಗಳ ವೆಚ್ಚವೂ ಎಷ್ಟು ವೇಗವಾಗಿ ಏರುತ್ತಿದೆ ಎಂಬುದನ್ನು ತೋರಿಸಿದೆ. ಮನೆ ಬಾಡಿಗೆ ಮತ್ತು ಟ್ರಾಫಿಕ್ ಸಮಸ್ಯೆಗಳ ಜೊತೆಗೆ, ಈಗ ದಿನನಿತ್ಯದ ಸಣ್ಣ ಸೇವೆಗಳೂ ಜನರ ಖರ್ಚಿನ ಪಟ್ಟಿಯಲ್ಲಿ ದೊಡ್ಡ ಪಾತ್ರವಹಿಸುತ್ತಿವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ