AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ರವಾಹ ಟೀಕೆಗಳ ನಂತರ ಟ್ರೋಲ್​ಗೆ ಗುರಿಯಾದ ‘ಬೆಂಗಳೂರು ನಗರದ ಸ್ಥಿತಿ’

ಬೆಂಗಳೂರು ನಗರ ಪ್ರವಾಹವನ್ನು ಎದುರಿಸಿದ ನಂತರ ಅರಂಭವಾದ ಟೀಕೆಗಳ ಬೆನ್ನಲ್ಲೆ ಮೀಮ್​ಗಳು ಆರಂಭಗೊಂಡಿವೆ. ಮೀಮ್​ ವಿಡಿಯೋ ಇಲ್ಲಿದೆ ನೋಡಿ..

Viral: ಪ್ರವಾಹ ಟೀಕೆಗಳ ನಂತರ ಟ್ರೋಲ್​ಗೆ ಗುರಿಯಾದ 'ಬೆಂಗಳೂರು ನಗರದ ಸ್ಥಿತಿ'
ಬೆಂಗಳೂರು ಸ್ಥಿತಿಗತಿ ಬಗ್ಗೆ ಮೀಮ್​
TV9 Web
| Edited By: Rakesh Nayak Manchi|

Updated on:Sep 14, 2022 | 7:59 PM

Share

ಬೆಂಗಳೂರು: ಸುರಿದ ಅಬ್ಬದ ಮಳೆಗೆ ಇಡೀ ನಗರದ ಜನರು ತತ್ತರಿಸಿದ್ದು, ಒಂದಷ್ಟು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿತ್ತು. ಈ ಘಟನೆಗೆ ರಾಜಕಾಲವೆ, ಕೆರೆಗೆಳ ಒತ್ತುವರಿಯೇ ಕಾರಣ ಎಂಬ ಟೀಕೆಗಳ ನಡುವೆ ನಗರದ ಸದ್ಯದ ಪರಿಸ್ಥಿತಿ ಬಗ್ಗೆ ಟ್ರೋಲ್​ಗಳು ಆಗಲು ಪ್ರಾರಂಭವಾಗಿವೆ. ‘ಬೆಂಗಳೂರಿನಲ್ಲಿ ಒಂದು ದಿನ’ ಎಂದು ಬರೆದು ಎಡಿಟ್ ಮಾಡಲಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ನಿಮಗೆ ಸಾಕಷ್ಟು ನಗು ತರಲಿದ್ದು, ಒಂದಷ್ಟು ಮಂದಿ ಕಾಮೆಂಟ್​ಗಳನ್ನು ಕೂಡ ಮಾಡಿದ್ದಾರೆ.

firki07 ಎಂಬ ಟ್ವಿಟರ್ ಖಾತೆಯಲ್ಲಿ ಈ ಉಲ್ಲಾಸದ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಬೆಂಗಳೂರಿನ ಜನರಿಗಾಗಿ ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ಮೊದಲನೆಯ ವಿಡಿಯೋದಲ್ಲಿ ಚಿಂಪಾಂಜಿಯು ಕಾರನ್ನು ಚಲಾಯಿಸುತ್ತಿರುವುದನ್ನು ತೋರಿಸುತ್ತದೆ, ಅದರಲ್ಲಿ “ಕೇವಲ ನಾಲ್ಕು ಕಿಲೋಮೀಟರ್‌ಗಳನ್ನು ತಲುಪಲು ಮೂರು ಗಂಟೆ ಮುಂಚಿತವಾಗಿ ಮನೆಯಿಂದ ಹೊರಟೆ” ಎಂದು ಶೀರ್ಷಿಕೆ ಬರೆಯಲಾಗಿದೆ.

ಎರಡನೆಯದು ಒರಾಂಗುಟಾನ್ ತನ್ನ ತಲೆಯನ್ನು ಅಲ್ಲಾಡಿಸುವುದನ್ನು ತೋರಿಸಲಾಗಿದೆ, ಅದರಲ್ಲಿ “ಇನ್ನೊಬ್ಬ ಬೆಂಗಳೂರಿನ ವ್ಯಕ್ತಿ ತನ್ನ ಸ್ಟಾರ್ಟ್-ಅಪ್ ಯೋಜನೆಯನ್ನು ವಿವರಿಸುತ್ತಾನೆ” ಎಂದು ಶೀರ್ಷಿಕೆ ಬರೆಯಲಾಗಿದೆ, ಮೂರನೆಯ ವಿಡಿಯೋದಲ್ಲಿ ಕೋತಿಯೊಂದು ಲ್ಯಾಪ್​ಟಾಪ್​ ಒತ್ತುವುದನ್ನು ಕಾಣಬಹುದು. ಇದರಲ್ಲಿ “ಕಚೇರಿ ಫೈಲ್‌ನಲ್ಲಿ ಕನ್ನಡದ ಬದಲಾಗಿ Kannad ಎಂದು ಟೈಪ್ ಮಾಡಿದ ಬೆಂಗಳೂರಲ್ಲದ ವ್ಯಕ್ತಿ” ಎಂದು ಶೀರ್ಷಿಕೆ ನೀಡಲಾಗಿದೆ.

ವಿಡಿಯೋಗೆ ಪ್ರತಿಕ್ರಿಯೆ ನೀಡಿದ ನೆಟ್ಟಿಗರೊಬ್ಬರು, “ಈ ದಿನಗಳಲ್ಲಿ ಮೀಮ್‌ಗಳು ಏಕೆ ತುಂಬಾ ಸಂಬಂಧಿತವಾಗಿವೆ?” ಎಂದಿದ್ದಾರೆ. ಮತ್ತೊಬ್ಬರು ಕಾಮೆಂಟ್ ಮಾಡಿ, “ಬೆಂಗಳೂರು ಜನರು ತಮ್ಮ ಮಕ್ಕಳಿಗೆ ಪ್ರತಿದಿನ ಕಚೇರಿಗೆ ಹೋಗಲು ನದಿಯನ್ನು ಹೇಗೆ ದಾಟುತ್ತಿದ್ದರು ಎಂದು ಹೇಳಲಿದ್ದಾರೆ” ಎಂದಿದ್ದಾರೆ. ಮಗದೊಬ್ಬರು, “ಬೆಂಗಳೂರಿನಲ್ಲಿ ಕೆಲಸ ಪಡೆಯಲು ಕೋಡಿಂಗ್ ಸಾಕಾಗುವುದಿಲ್ಲ. ಈಜು ಗೊತ್ತಿರಬೇಕು” ಎಂದರೆ ಚೇಂಜ್‌ಮೇಕರ್ಸ್ ಆಫ್ ಕನಕಪುರ ರೋಡ್ ಎಂಬ ಟ್ವಿಟರ್ ಪುಟದಿಂದ ಟೈಟಾನಿಕ್ ಸಿನಿಮಾದ ತುಣಕನ್ನು ಎಡಿಟ್ ಮಾಡಿ ಹಂಚಕೊಳ್ಳಲಾಗಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 pm, Wed, 14 September 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ