AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಒಬ್ಬ ಶಿಕ್ಷಕನನ್ನು ವಿದ್ಯಾರ್ಥಿಗಳು ಈ ಸ್ಥಿತಿಯಲ್ಲಿ ನಿಲ್ಲಿಸಬಾರದು, ಏನಾಗಿದೆ ಈ ಯುವಕರಿಗೆ?

ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯ ನಿಲ್ಲುವಂತೆ ಕಾಣುತ್ತಿಲ್ಲ. ಇದೀಗ ಇದಕ್ಕೆ ಸಂಬಂಧಪಟ್ಟ ವಿಡಿಯೋವನ್ನು ಕೋಲ್ಕತ್ತಾದ ಇಸ್ಕಾನ್ ವಕ್ತಾರರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ದೃಶ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗುಂಪೊಂದು ವಿದ್ಯೆ ಕಲಿಸಿದ ಗುರುಗಳಿಗೆ ಅವಮಾನಿಸಿ ರಾಜೀನಾಮೆ ಕೊಡುವಂತೆ ಒತ್ತಾಯಿಸುತ್ತಿರುವ ದೃಶ್ಯವನ್ನು ಕಾಣಬಹುದು.

Video: ಒಬ್ಬ ಶಿಕ್ಷಕನನ್ನು ವಿದ್ಯಾರ್ಥಿಗಳು ಈ ಸ್ಥಿತಿಯಲ್ಲಿ ನಿಲ್ಲಿಸಬಾರದು, ಏನಾಗಿದೆ ಈ ಯುವಕರಿಗೆ?
ವೈರಲ್​​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 22, 2024 | 4:47 PM

Share

ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿನ ಹಿಂಸಾಚಾರಕ್ಕೆ ಸಂಪೂರ್ಣ ದೇಶವೇ ಧಗಧಗಿಸುತ್ತಿದೆ. ಬಾಂಗ್ಲಾದ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದ್ದು, ಹಿಂದೂಗಳ ಮನೆ, ದೇವಸ್ಥಾನಗಳನ್ನು ಧ್ವಂಸಗೊಳಿಸಲಾಗಿದೆ. ಈ ದಾಳಿ, ದೌರ್ಜನ್ಯ ಖಂಡಿಸಿ ಪ್ರತಿಭಟನೆಗಳು ನಡೆದಿವೆ. ಹೀಗಿದ್ದರೂ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲುವಂತೆ ಕಾಣುತ್ತಿಲ್ಲ. ಇದೀಗ ಅಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯಕ್ಕೆ ಸಂಬಂಧಪಟ್ಟ ವಿಡಿಯೋವನ್ನು ಕೋಲ್ಕತ್ತಾದ ಇಸ್ಕಾನ್ ವಕ್ತಾರರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ದೃಶ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗುಂಪೊಂದು ಹಿಂದೂ ಎಂಬ ಕಾರಣಕ್ಕೆ ವಿದ್ಯೆ ಕಲಿಸಿದ ಗುರುಗಳಿಗೆಯೇ ಅವಮಾನಿಸಿ ರಾಜೀನಾಮೆ ಕೊಡುವಂತೆ ಒತ್ತಾಯಿಸುತ್ತಿರುವ ದೃಶ್ಯವನ್ನು ಕಾಣಬಹುದು.

ಕೋಲ್ಕತ್ತಾದ ಇಸ್ಕಾನ್ ವಕ್ತಾರ ರಾಧಾರಾಮನ್ ದಾಸ್ (RadharamnDas) ಈ ಕುರಿತ ಪೋಸ್ಟ್ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದು, “ಬಾಂಗ್ಲಾದೇಶದಲ್ಲಿ ವಿದ್ಯೆ ಕಲಿಸಿದ ಮತ್ತೊಬ್ಬ ಹಿಂದೂ ಶಿಕ್ಷಕನನ್ನು ಮುಸ್ಲಿಂ ವಿದ್ಯಾರ್ಥಿಗಳು ಅವಮಾನಿಸಿದ್ದಾರೆ ಮತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಪ್ರತಿದಿನ ಬಾಂಗ್ಲಾದೇಶದಲ್ಲಿ ಸಾವಿರಾರು ಹಿಂದೂ ಕೆಲಸಗಾರರ ಮೇಲೆ ರಾಜೀನಾಮೆ ಪತ್ರಗಳಿಗೆ ಸಹಿ ಹಾಕುವಂತೆ ಒತ್ತಡ ಹೇರಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ 2.5 ಮಿಲಿಯನ್ ಹಿಂದೂಗಳನ್ನು ಕೆಲಸದಿಂದ ತೆಗೆದುಹಾಕುವುದು ಅವರ ಗುರಿಯಾಗಿದೆ” ಎಂಬ ಸುದೀರ್ಘ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್ ವಿಡಿಯೋದಲ್ಲಿ ವಿದ್ಯೆ ಕಲಿಸಿದ ಗುರುವಿನ ಶರ್ಟ್ ಗೆ ಸಿಗರೇಟ್ ಪ್ಯಾಕೆಟ್ ಪಿನ್ ಮಾಡಿ, ಮಾನವೀಯತೆಯನ್ನೂ ಮರೆತು ಆ ಶಿಕ್ಷಕನಿಗೆ ಅವಮಾನ ರಾಜೀನಾಮೆ ನೀಡಲು ಒತ್ತಾಯಿಸುತ್ತಿರುವ ದೃಶ್ಯವನ್ನು ಕಾಣಬಹುದು. ಏನೂ ಮಾಡಲಾದಗೆ ಅಸಹಾಯಕ ಪರಿಸ್ಥಿತಿಯಲ್ಲಿ ಕುಳಿತಿದ್ದ ಆ ಶಿಕ್ಷಕನ ಸ್ಥಿತಿ ಕಣ್ಣಂಚಲಿ ನೀರು ತರಿಸುವಂತಿದೆ.

ಇದನ್ನೂ ಓದಿ: ಹೊಲದಲ್ಲಿ ಕೆಲ್ಸ ಮಾಡಿ ದಣಿದು ಬಂದ್ರೂ ಕ್ರಿಕೆಟ್ ಆಡೋಕೆ ಅನ್ನದಾತನಿಗೆ ಏನ್ ಖುಷಿ ನೋಡಿ

ಆಗಸ್ಟ್ 21 ರಂದು ಹಂಚಿಕೊಳ್ಳಲಾದ ಈ ವಿಡಿಯೋ 7 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಗುರುವನ್ನು ಅವಮಾನಿಸಿದವನಿಗೆ ಕರ್ಮದ ಫಲ ಸಿಕ್ಕೇಸಿಗುತ್ತದೆ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ನಿಜಕ್ಕೂ ಬಾಂಗ್ಲಾದೇಶ ಹಿಂದುಗಳಿಗೆ ನರಕವಾಗಿದೆ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು