AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿದೇಶಿ ಆವಕಾಡೊ ಹಣ್ಣನ್ನು ದೇವರಿಗೆ ಅರ್ಪಿಸಿದ ಬೆಂಗಳೂರಿನ ವ್ಯಕ್ತಿ, ನೆಟ್ಟಿಗರು ಶಾಕ್

ದೇವರ ಪೂಜೆಗೆ ಬಾಳೆಹಣ್ಣು, ಸೇಬು ಹಾಗೂ ದಾಳಿಂಬೆ ಸೇರಿದಂತೆ ಇನ್ನಿತ್ತರ ಹಣ್ಣುಗಳನ್ನು ಇಡುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿಯೂ ದುಬಾರಿಯಾಗಿರುವ ಆವಕಾಡೊ ಹಣ್ಣನ್ನು ದೇವರಿಗೆ ಅರ್ಪಿಸಿರುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆದಿದೆ.

Viral: ವಿದೇಶಿ ಆವಕಾಡೊ ಹಣ್ಣನ್ನು ದೇವರಿಗೆ ಅರ್ಪಿಸಿದ ಬೆಂಗಳೂರಿನ ವ್ಯಕ್ತಿ, ನೆಟ್ಟಿಗರು ಶಾಕ್
ವೈರಲ್​​ ಫೋಟೋ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 03, 2024 | 2:28 PM

Share

ಹಿಂದೂ ಧರ್ಮವೆಂದರೆ ಅದು ಶಾಶ್ವತವಾದ ಸನಾತನ ಧರ್ಮವಾಗಿದೆ. ಈ ಹಿಂದೂಗಳ ಹಬ್ಬ, ಹರಿದಿನಗಳು, ಆಚರಣೆ, ವಿಚಾರಗಳಲ್ಲಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಗಳಿಗೆ ಹೋಲಿಸಿದರೆ ವ್ಯತ್ಯಾಸವನ್ನು ಕಾಣಬಹುದು. ಸಾಮಾನ್ಯವಾಗಿ ಈ ಹಿಂದೂ ಧರ್ಮದಲ್ಲಿ ಪೂಜೆಯ ವೇಳೆಯಲ್ಲಿ ದೇವರಿಗೆ ಅಕ್ಕಿ, ತೆಂಗಿನಕಾಯಿ, ಹಣ್ಣುಗಳು, ಹೂವುಗಳು ಹಾಗೂ ಸಿಹಿತಿಂಡಿಗಳನ್ನು ಅರ್ಪಿಸಲಾಗುತ್ತದೆ. ಆದರೆ ಇಲ್ಲೊಬ್ಬರು ತಮ್ಮ ಮನೆಯಲ್ಲಿ ದೇವರ ಪೂಜೆಗೆ ಆವಕಾಡೊ ಹಣ್ಣನ್ನು ಅರ್ಪಿಸಿರುವ ಫೋಟೋವೊಂದು ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ.

ಹೌದು, ಬೆಂಗಳೂರು ಮೂಲದ ವ್ಯಕ್ತಿಯಾಗಿರುವ ಧರ್ಮೇಶ್​ ಬಾ ಅವರು, ತಮ್ಮ ಈ ಹೆಸರಿನ ಎಕ್ಸ್​ ಖಾತೆಯಲ್ಲಿ ಈ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ದಲ್ಲಿ ಮನೆಯ ದೇವರ ಫೋಟೋದ ಮುಂದೆ ಅವರ ಕುಟುಂಬವು ದೇವರಿಗೆ ಅರ್ಪಿಸಿದ ಎರಡು ಆವಕಾಡೊಗಳ ಚಿತ್ರವನ್ನು ಕಾಣಬಹುದು.

ಈ ಫೋಟೋದೊಂದಿಗೆ ‘ನಮ್ಮ ಪಾಲಕರು ಊರಿನಲ್ಲಿದ್ದಾರೆ ಮತ್ತು ಅವರು ದೇವರಿಗೆ ಅರ್ಪಿಸುವುದನ್ನು ಬಾಳೆಹಣ್ಣಿನಿಂದ ಆವಕಾಡೊಗೆ ಅಪ್​ಗ್ರೇಡ್​ ಮಾಡಲಾಗಿದೆ’ ಎಂದು ಬರೆದುಕೊಂಡಿದ್ದಾರೆ. ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಪೋಸ್ಟ್ ಗೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಜತೆಗೆ UPSC ಪರೀಕ್ಷೆ ಬರೆದು ಐಎಎಸ್-ಐಪಿಎಸ್‌ ಅಧಿಕಾರಿಗಳಾದ ಮೂವರು ಪ್ರಾಣ ಸ್ನೇಹಿತರು

ಈ ಫೋಟೋವೊಂದು ಐದು ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿದ್ದು, ನೆಟ್ಟಿಗರೊಬ್ಬರು, ‘ಅನವಶ್ಯಕ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಹಳೆಯ ಆಚರಣೆಗೆ ನಿರುಪಯುಕ್ತ ಮತ್ತು ಇದೊಂದು ಮನರಂಜನಾ ‘ಅಪ್​ಗ್ರೇಡ್​’ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬರು, ‘ಆವಕಾಡೊ ಅರ್ಪಿಸುವ ಮೂಲಕ ಭಕ್ತಿಯ ಮಟ್ಟ ಮೇಲಕ್ಕೆ ಹೋಗಿದೆ’ ಎಂದು ವ್ಯಂಗ್ಯವಾಗಿ ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ