Viral: ವಿದೇಶಿ ಆವಕಾಡೊ ಹಣ್ಣನ್ನು ದೇವರಿಗೆ ಅರ್ಪಿಸಿದ ಬೆಂಗಳೂರಿನ ವ್ಯಕ್ತಿ, ನೆಟ್ಟಿಗರು ಶಾಕ್

ದೇವರ ಪೂಜೆಗೆ ಬಾಳೆಹಣ್ಣು, ಸೇಬು ಹಾಗೂ ದಾಳಿಂಬೆ ಸೇರಿದಂತೆ ಇನ್ನಿತ್ತರ ಹಣ್ಣುಗಳನ್ನು ಇಡುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿಯೂ ದುಬಾರಿಯಾಗಿರುವ ಆವಕಾಡೊ ಹಣ್ಣನ್ನು ದೇವರಿಗೆ ಅರ್ಪಿಸಿರುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆದಿದೆ.

Viral: ವಿದೇಶಿ ಆವಕಾಡೊ ಹಣ್ಣನ್ನು ದೇವರಿಗೆ ಅರ್ಪಿಸಿದ ಬೆಂಗಳೂರಿನ ವ್ಯಕ್ತಿ, ನೆಟ್ಟಿಗರು ಶಾಕ್
ವೈರಲ್​​ ಫೋಟೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 03, 2024 | 2:28 PM

ಹಿಂದೂ ಧರ್ಮವೆಂದರೆ ಅದು ಶಾಶ್ವತವಾದ ಸನಾತನ ಧರ್ಮವಾಗಿದೆ. ಈ ಹಿಂದೂಗಳ ಹಬ್ಬ, ಹರಿದಿನಗಳು, ಆಚರಣೆ, ವಿಚಾರಗಳಲ್ಲಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಗಳಿಗೆ ಹೋಲಿಸಿದರೆ ವ್ಯತ್ಯಾಸವನ್ನು ಕಾಣಬಹುದು. ಸಾಮಾನ್ಯವಾಗಿ ಈ ಹಿಂದೂ ಧರ್ಮದಲ್ಲಿ ಪೂಜೆಯ ವೇಳೆಯಲ್ಲಿ ದೇವರಿಗೆ ಅಕ್ಕಿ, ತೆಂಗಿನಕಾಯಿ, ಹಣ್ಣುಗಳು, ಹೂವುಗಳು ಹಾಗೂ ಸಿಹಿತಿಂಡಿಗಳನ್ನು ಅರ್ಪಿಸಲಾಗುತ್ತದೆ. ಆದರೆ ಇಲ್ಲೊಬ್ಬರು ತಮ್ಮ ಮನೆಯಲ್ಲಿ ದೇವರ ಪೂಜೆಗೆ ಆವಕಾಡೊ ಹಣ್ಣನ್ನು ಅರ್ಪಿಸಿರುವ ಫೋಟೋವೊಂದು ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ.

ಹೌದು, ಬೆಂಗಳೂರು ಮೂಲದ ವ್ಯಕ್ತಿಯಾಗಿರುವ ಧರ್ಮೇಶ್​ ಬಾ ಅವರು, ತಮ್ಮ ಈ ಹೆಸರಿನ ಎಕ್ಸ್​ ಖಾತೆಯಲ್ಲಿ ಈ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ದಲ್ಲಿ ಮನೆಯ ದೇವರ ಫೋಟೋದ ಮುಂದೆ ಅವರ ಕುಟುಂಬವು ದೇವರಿಗೆ ಅರ್ಪಿಸಿದ ಎರಡು ಆವಕಾಡೊಗಳ ಚಿತ್ರವನ್ನು ಕಾಣಬಹುದು.

ಈ ಫೋಟೋದೊಂದಿಗೆ ‘ನಮ್ಮ ಪಾಲಕರು ಊರಿನಲ್ಲಿದ್ದಾರೆ ಮತ್ತು ಅವರು ದೇವರಿಗೆ ಅರ್ಪಿಸುವುದನ್ನು ಬಾಳೆಹಣ್ಣಿನಿಂದ ಆವಕಾಡೊಗೆ ಅಪ್​ಗ್ರೇಡ್​ ಮಾಡಲಾಗಿದೆ’ ಎಂದು ಬರೆದುಕೊಂಡಿದ್ದಾರೆ. ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಪೋಸ್ಟ್ ಗೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಜತೆಗೆ UPSC ಪರೀಕ್ಷೆ ಬರೆದು ಐಎಎಸ್-ಐಪಿಎಸ್‌ ಅಧಿಕಾರಿಗಳಾದ ಮೂವರು ಪ್ರಾಣ ಸ್ನೇಹಿತರು

ಈ ಫೋಟೋವೊಂದು ಐದು ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿದ್ದು, ನೆಟ್ಟಿಗರೊಬ್ಬರು, ‘ಅನವಶ್ಯಕ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಹಳೆಯ ಆಚರಣೆಗೆ ನಿರುಪಯುಕ್ತ ಮತ್ತು ಇದೊಂದು ಮನರಂಜನಾ ‘ಅಪ್​ಗ್ರೇಡ್​’ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬರು, ‘ಆವಕಾಡೊ ಅರ್ಪಿಸುವ ಮೂಲಕ ಭಕ್ತಿಯ ಮಟ್ಟ ಮೇಲಕ್ಕೆ ಹೋಗಿದೆ’ ಎಂದು ವ್ಯಂಗ್ಯವಾಗಿ ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?