AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿದೇಶಿ ಆವಕಾಡೊ ಹಣ್ಣನ್ನು ದೇವರಿಗೆ ಅರ್ಪಿಸಿದ ಬೆಂಗಳೂರಿನ ವ್ಯಕ್ತಿ, ನೆಟ್ಟಿಗರು ಶಾಕ್

ದೇವರ ಪೂಜೆಗೆ ಬಾಳೆಹಣ್ಣು, ಸೇಬು ಹಾಗೂ ದಾಳಿಂಬೆ ಸೇರಿದಂತೆ ಇನ್ನಿತ್ತರ ಹಣ್ಣುಗಳನ್ನು ಇಡುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿಯೂ ದುಬಾರಿಯಾಗಿರುವ ಆವಕಾಡೊ ಹಣ್ಣನ್ನು ದೇವರಿಗೆ ಅರ್ಪಿಸಿರುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆದಿದೆ.

Viral: ವಿದೇಶಿ ಆವಕಾಡೊ ಹಣ್ಣನ್ನು ದೇವರಿಗೆ ಅರ್ಪಿಸಿದ ಬೆಂಗಳೂರಿನ ವ್ಯಕ್ತಿ, ನೆಟ್ಟಿಗರು ಶಾಕ್
ವೈರಲ್​​ ಫೋಟೋ
ಸಾಯಿನಂದಾ
| Edited By: |

Updated on: Aug 03, 2024 | 2:28 PM

Share

ಹಿಂದೂ ಧರ್ಮವೆಂದರೆ ಅದು ಶಾಶ್ವತವಾದ ಸನಾತನ ಧರ್ಮವಾಗಿದೆ. ಈ ಹಿಂದೂಗಳ ಹಬ್ಬ, ಹರಿದಿನಗಳು, ಆಚರಣೆ, ವಿಚಾರಗಳಲ್ಲಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಗಳಿಗೆ ಹೋಲಿಸಿದರೆ ವ್ಯತ್ಯಾಸವನ್ನು ಕಾಣಬಹುದು. ಸಾಮಾನ್ಯವಾಗಿ ಈ ಹಿಂದೂ ಧರ್ಮದಲ್ಲಿ ಪೂಜೆಯ ವೇಳೆಯಲ್ಲಿ ದೇವರಿಗೆ ಅಕ್ಕಿ, ತೆಂಗಿನಕಾಯಿ, ಹಣ್ಣುಗಳು, ಹೂವುಗಳು ಹಾಗೂ ಸಿಹಿತಿಂಡಿಗಳನ್ನು ಅರ್ಪಿಸಲಾಗುತ್ತದೆ. ಆದರೆ ಇಲ್ಲೊಬ್ಬರು ತಮ್ಮ ಮನೆಯಲ್ಲಿ ದೇವರ ಪೂಜೆಗೆ ಆವಕಾಡೊ ಹಣ್ಣನ್ನು ಅರ್ಪಿಸಿರುವ ಫೋಟೋವೊಂದು ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ.

ಹೌದು, ಬೆಂಗಳೂರು ಮೂಲದ ವ್ಯಕ್ತಿಯಾಗಿರುವ ಧರ್ಮೇಶ್​ ಬಾ ಅವರು, ತಮ್ಮ ಈ ಹೆಸರಿನ ಎಕ್ಸ್​ ಖಾತೆಯಲ್ಲಿ ಈ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ದಲ್ಲಿ ಮನೆಯ ದೇವರ ಫೋಟೋದ ಮುಂದೆ ಅವರ ಕುಟುಂಬವು ದೇವರಿಗೆ ಅರ್ಪಿಸಿದ ಎರಡು ಆವಕಾಡೊಗಳ ಚಿತ್ರವನ್ನು ಕಾಣಬಹುದು.

ಈ ಫೋಟೋದೊಂದಿಗೆ ‘ನಮ್ಮ ಪಾಲಕರು ಊರಿನಲ್ಲಿದ್ದಾರೆ ಮತ್ತು ಅವರು ದೇವರಿಗೆ ಅರ್ಪಿಸುವುದನ್ನು ಬಾಳೆಹಣ್ಣಿನಿಂದ ಆವಕಾಡೊಗೆ ಅಪ್​ಗ್ರೇಡ್​ ಮಾಡಲಾಗಿದೆ’ ಎಂದು ಬರೆದುಕೊಂಡಿದ್ದಾರೆ. ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಪೋಸ್ಟ್ ಗೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಜತೆಗೆ UPSC ಪರೀಕ್ಷೆ ಬರೆದು ಐಎಎಸ್-ಐಪಿಎಸ್‌ ಅಧಿಕಾರಿಗಳಾದ ಮೂವರು ಪ್ರಾಣ ಸ್ನೇಹಿತರು

ಈ ಫೋಟೋವೊಂದು ಐದು ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿದ್ದು, ನೆಟ್ಟಿಗರೊಬ್ಬರು, ‘ಅನವಶ್ಯಕ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಹಳೆಯ ಆಚರಣೆಗೆ ನಿರುಪಯುಕ್ತ ಮತ್ತು ಇದೊಂದು ಮನರಂಜನಾ ‘ಅಪ್​ಗ್ರೇಡ್​’ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬರು, ‘ಆವಕಾಡೊ ಅರ್ಪಿಸುವ ಮೂಲಕ ಭಕ್ತಿಯ ಮಟ್ಟ ಮೇಲಕ್ಕೆ ಹೋಗಿದೆ’ ಎಂದು ವ್ಯಂಗ್ಯವಾಗಿ ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!