Bank Robbery: ಬ್ಯಾಂಕ್​​​ಗೆ ಹೆಲ್ಮೆಟ್ ಧರಿಸಿ ಬಂದು 8.53 ಲಕ್ಷ ರೂ. ದೋಚಿ ಪರಾರಿಯಾದ ವ್ಯಕ್ತಿ

ಹೆಲ್ಮೆಟ್ ಧರಿಸಿ ಬ್ಯಾಂಕ್‌ನಿಂದ 8.53 ಲಕ್ಷ ರೂ ನಗದು ದೋಚಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ. ಕೌಂಟರ್ ಒಳಗೆ ನುಗ್ಗಿ ಬ್ಯಾಂಕ್​​ ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಚೂರಿಯನ್ನು ಹಿಡಿದು ಹೆದರಿಸಿ ಹಣ ದೋಚಿ ಪರಾರಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bank Robbery: ಬ್ಯಾಂಕ್​​​ಗೆ ಹೆಲ್ಮೆಟ್ ಧರಿಸಿ ಬಂದು 8.53 ಲಕ್ಷ ರೂ. ದೋಚಿ ಪರಾರಿಯಾದ ವ್ಯಕ್ತಿ
Bank RobberyImage Credit source: Pinterest
Follow us
|

Updated on: Feb 02, 2024 | 7:04 PM

ಉತ್ತರ ಪ್ರದೇಶದ ಗೋಂಡಾದಲ್ಲಿ ವ್ಯಕ್ತಿಯೊಬ್ಬ ಪ್ರಥಮ ಯುಪಿ ಗ್ರಾಮೀಣ ಬ್ಯಾಂಕ್‌ನಿಂದ 8.53 ಲಕ್ಷ ರೂ ನಗದು ದೋಚಿ ಪರಾರಿಯಾಗಿದ್ದಾನೆ. ಕ್ಯಾಷಿಯರ್ ಕೌಂಟರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳನ ಕೈಚಳಕದ ದೃಶ್ಯಾವಳಿಗಳು ಸೆರೆಯಾಗಿದೆ. ದೃಶ್ಯಗಳಲ್ಲಿ, ಆರೋಪಿಯು ಹೆಲ್ಮೆಟ್ ಧರಿಸಿ ನೇರವಾಗಿ ಬ್ಯಾಂಕ್​​ ಒಳಗೆ ಹೋಗುವ ಮೊದಲು ಕ್ಯಾಷಿಯರ್ ಕೌಂಟರ್ ಹೊರಗೆ ನಿಂತಿರುವುದು ಕಂಡುಬರುತ್ತದೆ.  ಜನಸಾಮಾನ್ಯರಂತೆ ಇದ್ದು ಜನಸಂದಣಿ ಕಡಿಮೆಯಾಗುತ್ತಿದ್ದಂತೆ ನೇರವಾಗಿ ಕ್ಯಾಷಿಯರ್ ಕೌಂಟರ್ ಒಳಗೆ ನುಗ್ಗಿ ಬ್ಯಾಂಕ್​​ ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಚೂರಿಯನ್ನು ಹಿಡಿದು ಹೆದರಿಸಿ ಹಣ ದೋಚಿ ಪರಾರಿಯಾಗಿದ್ದಾನೆ. ಸದ್ಯ ಈ ಎಲ್ಲಾ ಸನ್ನಿವೇಶಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯ ಕುರಿತು ಬ್ಯಾಂಕ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳಾದ ಅಮರೇಂದ್ರ ಪ್ರಸಾದ್ ಸಿಂಗ್ ಮತ್ತು ವಿನೀತ್ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಬ್ಯಾಂಕ್ ನೌಕರರ ವಿಚಾರಣೆ ನಡೆಸಲಾಗುತ್ತಿದೆ. ಜೊತೆಗೆ ದರೋಡೆಕೋರನ ಪತ್ತೆಗೆ ಪೊಲೀಸರು ಐದು ತಂಡಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಡೆಂಟಲ್‌ ಕ್ಲಿನಿಕ್‌ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲು; 2 ಲಕ್ಷ ರೂ. ಪರಿಹಾರ ಧನ

ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು, “ನಮಗೆ ಮಧ್ಯಾಹ್ನ 12:15 ರ ಸುಮಾರಿಗೆ ದರೋಡೆಯ ಬಗ್ಗೆ ಮಾಹಿತಿ ಬಂದಿದೆ. ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿ ಸುಮಾರು 20 ನಿಮಿಷಗಳ ಕಾಲ ಬ್ಯಾಂಕ್‌ನೊಳಗೆ ಇದ್ದನು. ಅವನು ಹೆಚ್ಚಿನ ಜನರು ಹೊರಡುವವರೆಗೆ ಕಾದು ನಂತರ ಲೂಟಿ ಮಾಡಿದ್ದಾನೆ.ತನಿಖೆ ಆರಂಭವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ