AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Robbery: ಬ್ಯಾಂಕ್​​​ಗೆ ಹೆಲ್ಮೆಟ್ ಧರಿಸಿ ಬಂದು 8.53 ಲಕ್ಷ ರೂ. ದೋಚಿ ಪರಾರಿಯಾದ ವ್ಯಕ್ತಿ

ಹೆಲ್ಮೆಟ್ ಧರಿಸಿ ಬ್ಯಾಂಕ್‌ನಿಂದ 8.53 ಲಕ್ಷ ರೂ ನಗದು ದೋಚಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ. ಕೌಂಟರ್ ಒಳಗೆ ನುಗ್ಗಿ ಬ್ಯಾಂಕ್​​ ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಚೂರಿಯನ್ನು ಹಿಡಿದು ಹೆದರಿಸಿ ಹಣ ದೋಚಿ ಪರಾರಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bank Robbery: ಬ್ಯಾಂಕ್​​​ಗೆ ಹೆಲ್ಮೆಟ್ ಧರಿಸಿ ಬಂದು 8.53 ಲಕ್ಷ ರೂ. ದೋಚಿ ಪರಾರಿಯಾದ ವ್ಯಕ್ತಿ
Bank RobberyImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 02, 2024 | 7:04 PM

Share

ಉತ್ತರ ಪ್ರದೇಶದ ಗೋಂಡಾದಲ್ಲಿ ವ್ಯಕ್ತಿಯೊಬ್ಬ ಪ್ರಥಮ ಯುಪಿ ಗ್ರಾಮೀಣ ಬ್ಯಾಂಕ್‌ನಿಂದ 8.53 ಲಕ್ಷ ರೂ ನಗದು ದೋಚಿ ಪರಾರಿಯಾಗಿದ್ದಾನೆ. ಕ್ಯಾಷಿಯರ್ ಕೌಂಟರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳನ ಕೈಚಳಕದ ದೃಶ್ಯಾವಳಿಗಳು ಸೆರೆಯಾಗಿದೆ. ದೃಶ್ಯಗಳಲ್ಲಿ, ಆರೋಪಿಯು ಹೆಲ್ಮೆಟ್ ಧರಿಸಿ ನೇರವಾಗಿ ಬ್ಯಾಂಕ್​​ ಒಳಗೆ ಹೋಗುವ ಮೊದಲು ಕ್ಯಾಷಿಯರ್ ಕೌಂಟರ್ ಹೊರಗೆ ನಿಂತಿರುವುದು ಕಂಡುಬರುತ್ತದೆ.  ಜನಸಾಮಾನ್ಯರಂತೆ ಇದ್ದು ಜನಸಂದಣಿ ಕಡಿಮೆಯಾಗುತ್ತಿದ್ದಂತೆ ನೇರವಾಗಿ ಕ್ಯಾಷಿಯರ್ ಕೌಂಟರ್ ಒಳಗೆ ನುಗ್ಗಿ ಬ್ಯಾಂಕ್​​ ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಚೂರಿಯನ್ನು ಹಿಡಿದು ಹೆದರಿಸಿ ಹಣ ದೋಚಿ ಪರಾರಿಯಾಗಿದ್ದಾನೆ. ಸದ್ಯ ಈ ಎಲ್ಲಾ ಸನ್ನಿವೇಶಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯ ಕುರಿತು ಬ್ಯಾಂಕ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳಾದ ಅಮರೇಂದ್ರ ಪ್ರಸಾದ್ ಸಿಂಗ್ ಮತ್ತು ವಿನೀತ್ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಬ್ಯಾಂಕ್ ನೌಕರರ ವಿಚಾರಣೆ ನಡೆಸಲಾಗುತ್ತಿದೆ. ಜೊತೆಗೆ ದರೋಡೆಕೋರನ ಪತ್ತೆಗೆ ಪೊಲೀಸರು ಐದು ತಂಡಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಡೆಂಟಲ್‌ ಕ್ಲಿನಿಕ್‌ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲು; 2 ಲಕ್ಷ ರೂ. ಪರಿಹಾರ ಧನ

ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು, “ನಮಗೆ ಮಧ್ಯಾಹ್ನ 12:15 ರ ಸುಮಾರಿಗೆ ದರೋಡೆಯ ಬಗ್ಗೆ ಮಾಹಿತಿ ಬಂದಿದೆ. ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿ ಸುಮಾರು 20 ನಿಮಿಷಗಳ ಕಾಲ ಬ್ಯಾಂಕ್‌ನೊಳಗೆ ಇದ್ದನು. ಅವನು ಹೆಚ್ಚಿನ ಜನರು ಹೊರಡುವವರೆಗೆ ಕಾದು ನಂತರ ಲೂಟಿ ಮಾಡಿದ್ದಾನೆ.ತನಿಖೆ ಆರಂಭವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!