AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Robbery: ಬ್ಯಾಂಕ್​​​ಗೆ ಹೆಲ್ಮೆಟ್ ಧರಿಸಿ ಬಂದು 8.53 ಲಕ್ಷ ರೂ. ದೋಚಿ ಪರಾರಿಯಾದ ವ್ಯಕ್ತಿ

ಹೆಲ್ಮೆಟ್ ಧರಿಸಿ ಬ್ಯಾಂಕ್‌ನಿಂದ 8.53 ಲಕ್ಷ ರೂ ನಗದು ದೋಚಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ. ಕೌಂಟರ್ ಒಳಗೆ ನುಗ್ಗಿ ಬ್ಯಾಂಕ್​​ ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಚೂರಿಯನ್ನು ಹಿಡಿದು ಹೆದರಿಸಿ ಹಣ ದೋಚಿ ಪರಾರಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bank Robbery: ಬ್ಯಾಂಕ್​​​ಗೆ ಹೆಲ್ಮೆಟ್ ಧರಿಸಿ ಬಂದು 8.53 ಲಕ್ಷ ರೂ. ದೋಚಿ ಪರಾರಿಯಾದ ವ್ಯಕ್ತಿ
Bank RobberyImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 02, 2024 | 7:04 PM

Share

ಉತ್ತರ ಪ್ರದೇಶದ ಗೋಂಡಾದಲ್ಲಿ ವ್ಯಕ್ತಿಯೊಬ್ಬ ಪ್ರಥಮ ಯುಪಿ ಗ್ರಾಮೀಣ ಬ್ಯಾಂಕ್‌ನಿಂದ 8.53 ಲಕ್ಷ ರೂ ನಗದು ದೋಚಿ ಪರಾರಿಯಾಗಿದ್ದಾನೆ. ಕ್ಯಾಷಿಯರ್ ಕೌಂಟರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳನ ಕೈಚಳಕದ ದೃಶ್ಯಾವಳಿಗಳು ಸೆರೆಯಾಗಿದೆ. ದೃಶ್ಯಗಳಲ್ಲಿ, ಆರೋಪಿಯು ಹೆಲ್ಮೆಟ್ ಧರಿಸಿ ನೇರವಾಗಿ ಬ್ಯಾಂಕ್​​ ಒಳಗೆ ಹೋಗುವ ಮೊದಲು ಕ್ಯಾಷಿಯರ್ ಕೌಂಟರ್ ಹೊರಗೆ ನಿಂತಿರುವುದು ಕಂಡುಬರುತ್ತದೆ.  ಜನಸಾಮಾನ್ಯರಂತೆ ಇದ್ದು ಜನಸಂದಣಿ ಕಡಿಮೆಯಾಗುತ್ತಿದ್ದಂತೆ ನೇರವಾಗಿ ಕ್ಯಾಷಿಯರ್ ಕೌಂಟರ್ ಒಳಗೆ ನುಗ್ಗಿ ಬ್ಯಾಂಕ್​​ ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಚೂರಿಯನ್ನು ಹಿಡಿದು ಹೆದರಿಸಿ ಹಣ ದೋಚಿ ಪರಾರಿಯಾಗಿದ್ದಾನೆ. ಸದ್ಯ ಈ ಎಲ್ಲಾ ಸನ್ನಿವೇಶಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯ ಕುರಿತು ಬ್ಯಾಂಕ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳಾದ ಅಮರೇಂದ್ರ ಪ್ರಸಾದ್ ಸಿಂಗ್ ಮತ್ತು ವಿನೀತ್ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಬ್ಯಾಂಕ್ ನೌಕರರ ವಿಚಾರಣೆ ನಡೆಸಲಾಗುತ್ತಿದೆ. ಜೊತೆಗೆ ದರೋಡೆಕೋರನ ಪತ್ತೆಗೆ ಪೊಲೀಸರು ಐದು ತಂಡಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಡೆಂಟಲ್‌ ಕ್ಲಿನಿಕ್‌ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲು; 2 ಲಕ್ಷ ರೂ. ಪರಿಹಾರ ಧನ

ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು, “ನಮಗೆ ಮಧ್ಯಾಹ್ನ 12:15 ರ ಸುಮಾರಿಗೆ ದರೋಡೆಯ ಬಗ್ಗೆ ಮಾಹಿತಿ ಬಂದಿದೆ. ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿ ಸುಮಾರು 20 ನಿಮಿಷಗಳ ಕಾಲ ಬ್ಯಾಂಕ್‌ನೊಳಗೆ ಇದ್ದನು. ಅವನು ಹೆಚ್ಚಿನ ಜನರು ಹೊರಡುವವರೆಗೆ ಕಾದು ನಂತರ ಲೂಟಿ ಮಾಡಿದ್ದಾನೆ.ತನಿಖೆ ಆರಂಭವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ