AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Robbery: ಬ್ಯಾಂಕ್​​​ಗೆ ಹೆಲ್ಮೆಟ್ ಧರಿಸಿ ಬಂದು 8.53 ಲಕ್ಷ ರೂ. ದೋಚಿ ಪರಾರಿಯಾದ ವ್ಯಕ್ತಿ

ಹೆಲ್ಮೆಟ್ ಧರಿಸಿ ಬ್ಯಾಂಕ್‌ನಿಂದ 8.53 ಲಕ್ಷ ರೂ ನಗದು ದೋಚಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ. ಕೌಂಟರ್ ಒಳಗೆ ನುಗ್ಗಿ ಬ್ಯಾಂಕ್​​ ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಚೂರಿಯನ್ನು ಹಿಡಿದು ಹೆದರಿಸಿ ಹಣ ದೋಚಿ ಪರಾರಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bank Robbery: ಬ್ಯಾಂಕ್​​​ಗೆ ಹೆಲ್ಮೆಟ್ ಧರಿಸಿ ಬಂದು 8.53 ಲಕ್ಷ ರೂ. ದೋಚಿ ಪರಾರಿಯಾದ ವ್ಯಕ್ತಿ
Bank RobberyImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 02, 2024 | 7:04 PM

Share

ಉತ್ತರ ಪ್ರದೇಶದ ಗೋಂಡಾದಲ್ಲಿ ವ್ಯಕ್ತಿಯೊಬ್ಬ ಪ್ರಥಮ ಯುಪಿ ಗ್ರಾಮೀಣ ಬ್ಯಾಂಕ್‌ನಿಂದ 8.53 ಲಕ್ಷ ರೂ ನಗದು ದೋಚಿ ಪರಾರಿಯಾಗಿದ್ದಾನೆ. ಕ್ಯಾಷಿಯರ್ ಕೌಂಟರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳನ ಕೈಚಳಕದ ದೃಶ್ಯಾವಳಿಗಳು ಸೆರೆಯಾಗಿದೆ. ದೃಶ್ಯಗಳಲ್ಲಿ, ಆರೋಪಿಯು ಹೆಲ್ಮೆಟ್ ಧರಿಸಿ ನೇರವಾಗಿ ಬ್ಯಾಂಕ್​​ ಒಳಗೆ ಹೋಗುವ ಮೊದಲು ಕ್ಯಾಷಿಯರ್ ಕೌಂಟರ್ ಹೊರಗೆ ನಿಂತಿರುವುದು ಕಂಡುಬರುತ್ತದೆ.  ಜನಸಾಮಾನ್ಯರಂತೆ ಇದ್ದು ಜನಸಂದಣಿ ಕಡಿಮೆಯಾಗುತ್ತಿದ್ದಂತೆ ನೇರವಾಗಿ ಕ್ಯಾಷಿಯರ್ ಕೌಂಟರ್ ಒಳಗೆ ನುಗ್ಗಿ ಬ್ಯಾಂಕ್​​ ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಚೂರಿಯನ್ನು ಹಿಡಿದು ಹೆದರಿಸಿ ಹಣ ದೋಚಿ ಪರಾರಿಯಾಗಿದ್ದಾನೆ. ಸದ್ಯ ಈ ಎಲ್ಲಾ ಸನ್ನಿವೇಶಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯ ಕುರಿತು ಬ್ಯಾಂಕ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳಾದ ಅಮರೇಂದ್ರ ಪ್ರಸಾದ್ ಸಿಂಗ್ ಮತ್ತು ವಿನೀತ್ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಬ್ಯಾಂಕ್ ನೌಕರರ ವಿಚಾರಣೆ ನಡೆಸಲಾಗುತ್ತಿದೆ. ಜೊತೆಗೆ ದರೋಡೆಕೋರನ ಪತ್ತೆಗೆ ಪೊಲೀಸರು ಐದು ತಂಡಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಡೆಂಟಲ್‌ ಕ್ಲಿನಿಕ್‌ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲು; 2 ಲಕ್ಷ ರೂ. ಪರಿಹಾರ ಧನ

ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು, “ನಮಗೆ ಮಧ್ಯಾಹ್ನ 12:15 ರ ಸುಮಾರಿಗೆ ದರೋಡೆಯ ಬಗ್ಗೆ ಮಾಹಿತಿ ಬಂದಿದೆ. ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿ ಸುಮಾರು 20 ನಿಮಿಷಗಳ ಕಾಲ ಬ್ಯಾಂಕ್‌ನೊಳಗೆ ಇದ್ದನು. ಅವನು ಹೆಚ್ಚಿನ ಜನರು ಹೊರಡುವವರೆಗೆ ಕಾದು ನಂತರ ಲೂಟಿ ಮಾಡಿದ್ದಾನೆ.ತನಿಖೆ ಆರಂಭವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!