Viral: ಬಾರ್ಬಿ: ಗುಲಾಬಿ ಜ್ವರ ಮೋದಿ, ಸೋನಿಯಾ, ರಾಹುಲ್, ಲಾಲೂ ಇನ್ನ್ಯಾರಿಗೆಲ್ಲ?

Artificial Intelligence : ರಾಗಾ, ದೀದಿ, ಮೋದಿ, ಲಾಲೂ ಎಂದು ತಮ್ಮ ನೆಚ್ಚಿನ ರಾಜಕಾರಣಿಗಳಿಗೆಲ್ಲ ಹೃದಯವನ್ನೇ ಧಾರೆ ಎರೆಯುತ್ತಿದೆ ಕೆಲಮಂದಿ. ಬಾರ್ಬಿ ಫಿವರ್ ಎಲ್ಲಿಗೆ ಹೋಗಿ ತಲುಪುತ್ತದೆಯೋ ಎಂದು ಚಿಂತೆಗಿಳಿದಿದೆ ಇನ್ನೂ ಕೆಲಮಂದಿ. ನೀವು?

Viral: ಬಾರ್ಬಿ: ಗುಲಾಬಿ ಜ್ವರ ಮೋದಿ, ಸೋನಿಯಾ, ರಾಹುಲ್, ಲಾಲೂ ಇನ್ನ್ಯಾರಿಗೆಲ್ಲ?
ಮೋದಿ ಮತ್ತು ಸೋನಿಯಾ ಗಾಂಧಿ
Follow us
|

Updated on: Jul 29, 2023 | 5:01 PM

Barbie : ನಿನ್ನೆಯಷ್ಟೇ ಬರಾಕ್ ಒಬಾಮಾ, ಜೋ ಬೈಡನ್​ ಈ ಗುಲಾಬಿ ಜ್ವರಕ್ಕೆ ತುತ್ತಾಗಿದ್ದರು. ಇದೀಗ ಮೋದಿ (Modi), ಸೋನಿಯಾ, ರಾಹುಲ್​, ಲಾಲೂ, ಗಡ್ಕರಿ, ಅಮಿತ್​ ಷಾ, ಕೇಜ್ರೀವಾಲ್​ಗೂ ಕೂಡ ಇದು ಸೋಂಕಿದೆ. ಎಐ ಕಲಾವಿದರು ಹಗಲಿರುಳು ಶ್ರಮಿಸುತ್ತ ಈ ಬಾರ್ಬಿ ಫಿವರ್ ಅಥವಾ ಗುಲಾಬಿ ಜ್ವರ ಹರಡುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ವಿಶ್ವದಾದ್ಯಂತ ಬಾರ್ಬಿ ಚಲನಚಿತ್ರ ಯಶಸ್ವಿಯಾಗಿ ಓಡುತ್ತಿರುವ ಹಿನ್ನೆಲೆಯಲ್ಲಿ  ಅನೇಕ ಬ್ರ್ಯಾಂಡ್​ಗಳು ತಮ್ಮ ಉತ್ಪನ್ನಗಳನ್ನು ಈ ಜ್ವರದಲ್ಲಿ ಅದ್ದಿ ತೆಗೆಯುತ್ತಿವೆ. ಜಾಲತಾಣಗಳಲ್ಲಿ ಇದರ ಬಗ್ಗೆ ಮಾತೇ ಬೇಡ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Who Wore What (@whoworewhat.club)

ಅವರವರ ಅಭಿಮಾನಿಗಳು ಅವರವರನ್ನು ಹೊಗಳುತ್ತಿದ್ದಾರೆ. ಮಮತಾ ಮತ್ತು ಸೋನಿಯಾ ಬಹಳ ಚೆನ್ನಾಗಿ ಕಾಣುತ್ತಿದ್ದಾರೆ ಎಂದು ಕೆಲವರು. ಮೋದಿ ಎಲ್ಲಿ ಹೋದರೂ ರಂಗೇ ಎಂದು ಕೆಲವರು. ಲಾಲೂ ಕೂಡ ಬಹಳ ಮುದ್ದಾಗಿದ್ದಾರೆ ಎಂದು ಕೆಲವರು. ರಾಹುಲ್ ಅಂತೂ ಬಹಳ ಮುದ್ದು ಎಂದು ಹಲವರು. ಒಟ್ಟಾಗಿ ನೋಡಿದರೆ ಎಲ್ಲರೂ ಭಾರತ್ ರಾಷ್ಟ್ರ ಸಮಿತಿಯನ್ನು ಸೇರಿದಂತೆ ಭಾಸವಾಗುತ್ತಿದೆ ಎಂದಿದ್ದಾರೆ ಒಬ್ಬರು.

ಇದನ್ನೂ ಓದಿ : Viral: ಚಪಾತಿಯಲ್ಲಿ ಜಿರಳೆಮರಿ; ವಂದೇ ಭಾರತ್​​​ನಿಂದ ಪ್ರಯಾಣಿಕರೊಬ್ಬರಿಗೆ ಉಚಿತ ಕೊಡುಗೆ

ರಾಹುಲ್ ಗಾಂಧಿಯನ್ನು ರಾಗಾ ಎಂದು, ಮಮತಾ ಅನ್ನು ದೀದೀ ಎಂದೂ ಕರೆದು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಿದೆ ನೆಟ್​ಜನತೆ. ಆದರೆ ಇದರಿಂದ ಏನು ಪ್ರಯೋಜನ? ತಿಂಗಳ ಮೇಲಾಯ್ತು ಎಐ ಕಲಾವಿದರು ಪ್ರಸಿದ್ಧ ವ್ಯಕ್ತಿಗಳನ್ನೆಲ್ಲ ಗುಲಾಬಿಯಲ್ಲಿ ಮುಳುಗೇಳಿಸುತ್ತ ಎಂದು ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ : Viral Video: ಡಿಜಿಟಲ್ ಭಿಕ್ಷೆ; ಸ್ಲೀಪರ್ ಕೋಚ್​ನಲ್ಲಿಯೂ ರೀಲಿಗರ ಹಾವಳಿ; ಕಿಡಿಕಾರಿದ ನೆಟ್ಟಿಗರು 

ಎಐ ಕಲಾವಿದರಿಗೆ ಇದರಿಂದ ಏನು ಲಾಭ ಇದೆ ಎಂದ ಪ್ರಶ್ನಿಸಿದ್ದಾರೆ ಕೆಲವರು. ಇದರ ಬದಲಾಗಿ ದೇಶಕ್ಕೆ ತುರ್ತಾಗಿ ಬೇಕಿರುವ ಸಂಗತಿಗಳ ಕಡೆ ಗಮನ ಹರಿಸುವುದು ಒಳ್ಳೆಯದು ಎಂದು ಮತ್ತೊಂದಿಷ್ಟು ಜನ ಹೇಳಿದ್ದಾರೆ. ಕಲೆಯನ್ನು ಕಲೆಯಂತೆ ನೋಡಿ ಆಸ್ವಾದಿಸಬೇಕು ಎಂದು ಒಬ್ಬರು ಹೇಳಿದ್ದಾರೆ. ಎಲ್ಲದರ ಹಿಂದೆಯೂ ವ್ಯಾಪಾರೋದ್ದೇಶಗಳು ಇರುತ್ತವೆ, ಜನಸಾಮಾನ್ಯರಿಗೆ ಅರ್ಥವಾಗುವುದಿಲ್ಲ ಸುಮ್ಮನಿರಿ ಎಂದಿದ್ದಾರೆ ಇನ್ನೊಬ್ಬರು.

ಈ ವಿಷಯವಾಗಿ ನೀವೇನು ಹೇಳುತ್ತೀರಿ?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ