AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಲೈಕ್​​ ಮಸುಕಾಗುತ್ತದೆ, ಡಿಜಿಟಲ್​ ಗುರುತು ಉಳಿಯುತ್ತದೆ; ಅಸ್ಸಾಂ ಪೊಲೀಸರ ಟ್ವೀಟ್​

Digital Footprint : 'ಸಾಮಾಜಿಕ ಜಾಲತಾಣಗಲ್ಲಿ ಗಮನ ಸೆಳೆಯಲು ನಿಮ್ಮ ಮಕ್ಕಳ ಫೋಟೋ, ವೈಯಕ್ತಿಕವನ್ನು ಸರಕಾಗಿಸಿಕೊಂಡರೆ ಅಪಾಯ ತಪ್ಪಿದ್ದಲ್ಲ' ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ ಪೊಲೀಸರ ಈ ವಿನೂತನ ಪರಿಕಲ್ಪನೆ.

Viral: ಲೈಕ್​​ ಮಸುಕಾಗುತ್ತದೆ, ಡಿಜಿಟಲ್​ ಗುರುತು ಉಳಿಯುತ್ತದೆ; ಅಸ್ಸಾಂ ಪೊಲೀಸರ ಟ್ವೀಟ್​
ಅಸ್ಸಾಂ ಪೊಲೀಸರ ಪರಿಕಲ್ಪನೆಯಂತೆ ಎಐ ಕಲಾವಿದರ ಸೃಷ್ಟಿಯಲ್ಲಿ ಮೂಡಿದ ಮಕ್ಕಳು
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 18, 2023 | 5:20 PM

Share

Children : ಮಗುವೊಂದು ಮಡಿಲಿಗೆ ಬರುತ್ತಿದ್ದಂತೆ ಅನೇಕ ಪೋಷಕರು ಮಗುವಿನ ಫೋಟೋಗಳೊಂದಿಗೆ  ಸಂಬಂಧಿಸಿದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ((Social Media) ಕ್ಷಣಕ್ಷಣಕ್ಕೂ ಅಪ್​ಡೇಟ್ ಮಾಡುವ ಪ್ರವೃತ್ತಿಗೆ ಬಿದ್ದುಬಿಡುತ್ತಾರೆ. ಬಂದು ಬೀಳುವ ಲೈಕ್, ಕಮೆಂಟ್​ಗಳಿಂದ ವಾಸ್ತವನ್ನೇ ಮರೆತುಬಿಡುತ್ತಾರೆ. ಆದರೆ ಡಿಜಿಟಲ್​ ದಾಖಲೆಗಳಿಂದಾಗಿ ಮಕ್ಕಳ ಭವಿಷ್ಯದ ಮೇಲೆ ಯಾವ ರೀತಿಯ ಪರಿಣಾಮ ಉಂಟಾಗಬಹುದು ಎಂಬ ಅರಿವು ಅನೇಕರಿಗೆ ಇದ್ದಂತಿಲ್ಲ. ಈ ಹಿನ್ನೆಲೆಯಲ್ಲಿ ಅಸ್ಸಾಂನ ಪೊಲೀಸ್​ ಇಲಾಖೆಯು ಸಾರ್ವಜನಿಕರಲ್ಲಿ ಈ ಕುರಿತು ಅರಿವು ಮೂಡಿಸುವುದಕ್ಕೋಸ್ಕರ ಮಾಡಿದ ಟ್ವೀಟ್ ಇದೀಗ ಜಾಲತಾಣಿಗರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಎಐ (Artificial Intelligence) ಮೂಲಕ ಸೃಷ್ಟಿಸಿದ ನಾಲ್ಕು ಮಕ್ಕಳ ಚಿತ್ರಗಳನ್ನು ಟ್ವೀಟ್ ಮಾಡಿದ ಅಸ್ಸಾಂ ಪೊಲೀಸರು, ‘ನಿಮ್ಮ ಮಕ್ಕಳ ಫೋಟೋಗಳಿಗೆ ಮಾಡಿದ ಲೈಕ್ಸ್​ ಮಸುಕಾಗುತ್ತವೆ. ಆದರೆ ಡಿಜಿಟಲ್​ನ ಗುರುತುಗಳು ಹಾಗೇ ಉಳಿಯುತ್ತವೆ. ಶೇರ್​ಗಳಿಂದಾಗಿ ಅಪಾಯಕ್ಕೆ ಒಳಗಾಗುವ ನಿಮ್ಮ ಮಗುವನ್ನು ರಕ್ಷಿಸಿ. ಸಾಮಾಜಿಕ ಮಾಧ್ಯಮದಲ್ಲಿ ನೀವು ಏನನ್ನು ಹಂಚಿಕೊಳ್ಳುತ್ತೀರಿ ಎನ್ನುವುದರ ಬಗ್ಗೆ ಗಮನವಿರಲಿ’ ಎಂಬ ಒಕ್ಕಣೆ ಬರೆದು #DontBeASharent ಹ್ಯಾಷ್​ಟ್ಯಾಗ್​ ಸೃಷ್ಟಿಸಿದ್ದಾರೆ.

ಇದನ್ನೂ ಓದಿ : Viral: ಐಕಿಯಾ; ಪರಭಾಷೆಗಳ ಹೇರಿಕೆ ನಿಲ್ಲಲಿ, ಕರ್ನಾಟಕದಲ್ಲಿ ಕನ್ನಡವೇ ಇರಲಿ

ಒಂದೊಂದು ಮಗುವಿನ ಚಿತ್ರಕ್ಕೂ ಮನಮುಟ್ಟುವಂತೆ ಸಾಲುಗಳನ್ನು ರಚಿಸಿದ್ದಾರೆ; ಮಕ್ಕಳು ಸಾಮಾಜಿಕ ಮಾಧ್ಯಮದ ಟ್ರೋಫಿಗಳಲ್ಲ. ಮುಗ್ಧತೆಯ ಕ್ಷಣಗಳನ್ನು ಅಂತರ್ಜಾಲವು ಕದ್ದಿದೆ. ಸಾಮಾಜಿಕ ಜಾಲತಾಣಗಲ್ಲಿ ಗಮನ ಸೆಳೆಯಲು ಅವರ ವೈಯಕ್ತಿಕವನ್ನು ಸರಕಾಗಿಸಿಕೊಳ್ಳದಿರಿ. ನಿಮ್ಮ ಮಕ್ಕಳ ಕಥೆ, ಹೇಳುವುದು ಅವರದೇ ಆಯ್ಕೆ.

ಇದನ್ನೂ ಓದಿ : Viral: ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ಪಾಲ್ಗೊಳ್ಳಿ ರೂ.10000 ಬಹುಮಾನ ಗೆಲ್ಲಿ

ಜು. 15ರಂದು ಇದನ್ನು ಟ್ವೀಟ್ ಮಾಡಲಾಗಿದೆ. ಈತನಕ 23,000 ಕ್ಕೂ ಹೆಚ್ಚು ಜನ ನೋಡಿದ್ದಾರೆ. ಸುಮಾರು 200 ಜನರು ರೀಟ್ವೀಟ್ ಮಾಡಿದ್ದಾರೆ. ಅತ್ಯಂತ ಸೂಕ್ಷ್ಮವಾಗಿ, ಮಾರ್ಮಿಕವಾಗಿ ಮತ್ತು ಉಪಯುಕ್ತವಾಗಿ ಈ ಸಂದೇಶವನ್ನು ನೀಡಲಾಗಿದೆ ಎಂದು ಅನೇಕರು ಪೊಲೀಸರ ಈ ಪರಿಕಲ್ಪನೆ ಮತ್ತು ನಡೆಯನ್ನು ಶ್ಲಾಘಿಸಿದ್ದಾರೆ. ಇದೇ ರೀತಿ ಎಲ್ಲ ಪೊಲೀಸ್ ಇಲಾಖೆಗಳು, ಸಾಮಾಜಿಕ ಜಾಲತಾಣಗಳಲ್ಲಿನ ಇನ್ನಿತರೇ ವಿಷಯಗಳಿಗೆ ಸಂಬಂಧಿಸಿದ ನಡೆನುಡಿಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಸಾಕಷ್ಟು ಜನರು ವಿನಂತಿಸಿಕೊಂಡಿದ್ದಾರೆ.

ಈ ಕುರಿತು ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:16 pm, Tue, 18 July 23

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!