Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಜೋರಾಂನಲ್ಲಿ ಭೋರ್ಗರೆಯುತ್ತಿರುವ ಜಲಧಾರೆ! ಮೋಡಿ ಮಾಡುವ ರಮಣೀಯ ದೃಶ್ಯದ ವಿಡಿಯೋ ನೋಡಿ

ಪ್ರಕೃತಿಯ ಐಸಿರಿಗೆ ಮನಸೋಲದೇ ಇರಲು ಸಾಧ್ಯವೇ? ಕಾಡಿನ ಮಧ್ಯೆ ಧುಮ್ಮಿಕ್ಕುವ ಜಲಪಾತ, ಧೋ.. ಎಂದು ಭೋರ್ಗರೆಯುವ ಜಲಧಾರೆಯ ವೈಯಾರದ ದೃಶ್ಯಗಳ ನೋಟ ಕಣ್ಣಿಗೆ ಮುದ ನೀಡುತ್ತದೆ.

ಮಿಜೋರಾಂನಲ್ಲಿ ಭೋರ್ಗರೆಯುತ್ತಿರುವ ಜಲಧಾರೆ! ಮೋಡಿ ಮಾಡುವ ರಮಣೀಯ ದೃಶ್ಯದ ವಿಡಿಯೋ ನೋಡಿ
ಮಿಜೋರಾಂನಲ್ಲಿ ಭೋರ್ಗರೆಯುತ್ತಿರುವ ಜಲಧಾರೆ!
Follow us
TV9 Web
| Updated By: shruti hegde

Updated on: Jul 05, 2021 | 1:03 PM

ಪ್ರಕೃತಿಯ ಸೊಬಗೇ ಹಾಗೆ! ಹಚ್ಚ-ಹಸಿರ ಮರಗಿಡಗಳು, ತುಂಬು ಹರಿಯುವ ನದಿಗಳು.. ಪ್ರಾಣಿ-ಪಕ್ಷಿಗಳ ಚಿಲಿಪಿಲಿ ಕಲರವ, ಮೋಡ-ಮಳೆ-ಬಿಸಿಲು-ಚಳಿ ಹೀಗೆ ನಾನಾ ರೀತಿಯ ವೈಭವಪೂರ್ಣ ಸೊಬಗು. ಭೋರ್ಗರೆಯುತ್ತಿರುವ ಜಲಪಾತಗಳ ರಮಣೀಯ ದೃಶ್ಯವನ್ನು ನೋಡುವುದೇ ಒಂದು ಖುಷಿ.  ಸುಂದರ ತಾಣಗಳ ನೋಟ ಮನಸ್ಸಿಗೆ ಇಷ್ಟವಾಗುತ್ತವೆ.  ಈಗಷ್ಟೇ ಮಳೆಗೆ ನೆಂದ ಹಚ್ಚಹಸಿರಿನ ಕಾನನದ ಮಧ್ಯೆ ಹರಿಯುವ ಜಲಪಾತ ಕಣ್ಣಿಗೆ ಸೊಬಗು. ಮಿಜೋರಾಂನಲ್ಲಿ ಭೋರ್ಗರೆಯುತ್ತಿರುವ ಜಲಪಾತದ ದೃಶ್ಯವನ್ನು ಕೈಗಾರಿಕಾ ಉದ್ಯಮಿ ಹರ್ಷ ಗೋಯಂಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪ್ರಕೃತಿಯ ಐಸಿರಿಗೆ ಮನಸೋಲದೇ ಇರಲು ಸಾಧ್ಯವೇ? ಕಾಡಿನ ಮಧ್ಯೆ ಧುಮ್ಮಿಕ್ಕುವ ಜಲಪಾತ, ಧೋ.. ಎಂದು ಭೋರ್ಗರೆಯುವ ಜಲಧಾರೆಯ ವೈಯಾರದ ದೃಶ್ಯಗಳ ನೋಟ ಕಣ್ಣಿಗೆ ಮುದ ನೀಡುತ್ತದೆ. ಕಾನನದ ನಟ್ಟ ನಡುವೆ ಹರಿಯುವ ಜಲಧಾರೆ ನೋಡುವುದೇ ಮನಸ್ಸಿಗೆ ಖುಷಿ. ಅದರಲ್ಲಿಯೂ ಮಳೆಗಾಲದ ಸಮಯದಲ್ಲಿ ಸುಂದರ ಪ್ರಕೃತಿಯ ಸೊಬಗು ಎಲ್ಲರ ಕಣ್ಮನ ಸೆಳೆಯುತ್ತದೆ.

ವಿಡಿಯೋ ಕ್ಲಿಪ್​ 30 ಸೆಕೆಂಡ್​ಗಳಲ್ಲಿದೆ. ಹಾಲಿನ ಬಣ್ಣದಲ್ಲಿ ನೀರು ಭೋಗರೆಯುತ್ತಿರುವ ದೃಶ್ಯ ರಮಣೀಯವಾಗಿದೆ. ಅದ್ಭುತ ಪ್ರಕೃತಿಗೆ ನೆಟ್ಟಿಗರು ಸೋತಿದ್ದಾರೆ. ಅದ್ಭುತ ದೃಶ್ಯದ ಸೆರೆ ಎಂದು ಓರ್ವರು ಪ್ರತಿಕ್ರಿಯೆ ನೀಡಿದ್ದಾರೆ. ಮೋಡಿ ಮಾಡುವ ಮೋಡದ ಜಲಪಾತದಂತೆ ಭಾಸವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳಲಾಗುತ್ತಿದ್ದಂತೆಯೇ 19,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಪ್ರಕೃತಿಯ ಸುಂದರ ನೋಟಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ:

ಮುಗಿಲೆತ್ತರದಿಂದ ಧುಮ್ಮಿಕ್ಕುವ ಜಲಧಾರೆಯ ಸೌಂದರ್ಯವನ್ನು ನೋಡಲು ಗೋಕಾಕ್ ಜಲಪಾತಕ್ಕೆ ಭೇಟಿ ನೀಡಿ

ಜೋಗ ಜಲಪಾತದ ಗುಂಡಿಯಲ್ಲಿ ಕೋತಿರಾಜ್​ ಸಾಕ್ಷ್ಯಚಿತ್ರ ಶೂಟಿಂಗ್

4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ