AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

Viral Video: ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ? ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು; ವಿಡಿಯೋ ವೈರಲ್
ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ?
shruti hegde
| Edited By: |

Updated on:May 31, 2021 | 12:09 PM

Share

ಗಿಳಿಗಳು ಮಾತನಾಡುವುದನ್ನು ಕೇಳಿಯೇ ಇರುತ್ತೀರಿ. ಆದರೆ ಸುಂದರವಾಗಿ ಹಾಡು ಹೇಳುವುದನ್ನು ಎಲ್ಲಿಯಾದರೂ ಕೇಳಿದ್ದೀರಾ? ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಸುಮಧುರವಾಗಿ ಹಾಡಲು ಪ್ರಾರಂಭಿಸುತ್ತದೆ. ಗಿಳಿಯ ಹಾಡು ಕೇಳಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನೆಯ ಮಾಲೀಕ ಗಿಟಾರ್​ ನುಡಿಸುತ್ತಿದ್ದಂತೆಯೇ ಗಿಳಿ ಕತ್ತನ್ನು ತಿರುಗಿಸುತ್ತದೆ. ಗಂಟಲು ಸರಿಮಾಡಿಕೊಳ್ಳುತ್ತಾ ಹಾಡಲು ಪ್ರಾರಂಭಿಸುತ್ತದೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

‘ಫ್ಲಾಪ್​ ಇರಾ ಆರೆಂಜ್​ ಕೋಟ್​ ಗಾಯ್​’ ಎಂಬ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಾಲೀಕ ಗಿಟಾರು ನುಡಿಸುತ್ತಿದ್ದಂತೆಯೇ ಗಿಳಿಯು ಹಾಡಲು ಶುರುಮಾಡುತ್ತದೆ. ಮಾಲೀಕ ಹೇಳಿದ ಕೆಲಸವನ್ನು ಗಿಳಿ ಮಾಡುವುದನ್ನು ಹಿಂದೆ ಕೇಳಿರಬಹುದು. ಆದರೆ ಗಿಟಾರ್​ ಬಾರಿಸಿದಂತೆಯೇ ಗಿಳಿ ಹಾಡು ಹೇಳುತ್ತಿರುವುದನ್ನು ಎಂದಾದರೂ ಕೇಳಿದ್ದೀರಾ?

ವಿಡಿಯೋ ಸುಮಾರು 3.5 ಲಕ್ಷ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 70 ಸಾವಿರ ರೀಟ್ವೀಟ್​ಗಳು, 262 ಸಾವಿರ ಲೈಕ್ಸ್​ಗಳ ಲಭಿಸಿವೆ. ವಾವ್..​ ಇದು ಎಷ್ಟು ಅದ್ಭುತವಾಗಿದೆ ಎಂದು ನೆಟ್ಟಿಗರೋರ್ವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಗಿಳಿಯ ಹಾಡಿಗೆ ಸೋಲದವರಿದ್ದಾರೆಯೇ ಎಂಬ ಮಾತುಗಳು ವಿಡಿಯೋ ನೋಡಿದ ನೆಟ್ಟಿಗರಿಂದ ಕೇಳಿ ಬಂದಿವೆ.

ಇದನ್ನೂ ಓದಿ: 

ಗಿಳಿರಾಮನ ಜೊತೆ ಡಿಬಾಸ್ ಆಟ :ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗಿಳಿಗಳನ್ನ ಆರೈಕೆ‌ ಮಾಡಿದ Challenging Star Darshan

ಜೀಪಿನತ್ತ ಪೊಲೀಸರು ಎಳೆದೊಯ್ತಾ ಇದ್ರೂ.. ಚಹಾದ ಕಪ್​ ಬಿಡಲಿಲ್ವಲ್ಲಾ ಈ ಯುವಕರು! ವಿಡಿಯೋ ವೈರಲ್​

Published On - 11:48 am, Mon, 31 May 21

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​