AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನನಗೆ ಕನ್ನಡ ಕಲಿಯುವ ಅವಶ್ಯಕತೆಯಿಲ್ಲ; 12 ವರ್ಷ ಬೆಂಗಳೂರಿನಲ್ಲಿದ್ದುಕೊಂಡೆ ದುರಹಂಕಾರದ ಮಾತುಗಳನ್ನಾಡಿದ ಪರಭಾಷಿಕ

ಉದ್ಯೋಗವನ್ನರಸುತ್ತಾ ಬಂದು ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡ ಅದೆಷ್ಟೋ ಪರಭಾಷಿಕರಿದ್ದಾರೆ. ಕನ್ನಡ ನಾಡಿನಲ್ಲಿ ಇದ್ದರೂ ಹೆಚ್ಚಿನ ಪರಭಾಷಿಕರು ಕನ್ನಡ ಕಲಿಯುವ ಪ್ರಯತ್ನವನ್ನೂ ಮಾಡಿಲ್ಲ, ಕನ್ನಡಕ್ಕೆ ಗೌರವವನ್ನೂ ನೀಡುತ್ತಿಲ್ಲ. ಇಂತಹ ಸಾಕಷ್ಟು ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಘಟನೆಯ ವಿಡಿಯೋವೊಂದು ವೈರಲ್‌ ಆಗಿದ್ದು, ಪರಭಾಷಿಕನೊಬ್ಬ 12 ವರ್ಷ ಬೆಂಗಳೂರಿನಲ್ಲಿದ್ದರೂ ನಾನ್ಯಾಕೆ ಕನ್ನಡ ಕಲಿಬೇಕು, ನನಗೆ ಕನ್ನಡ ಕಲಿಯುವ ಅವಶ್ಯಕತೆಯಿಲ್ಲ ಎಂದು ಸೊಕ್ಕಿನ ಮಾತುಗಳನ್ನಾಡಿದ್ದಾರೆ. ಈತನ ಈ ಮಾತಿಗೆ ಕನ್ನಡಿಗರು ಫುಲ್‌ ಗರಂ ಆಗಿದ್ದಾರೆ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 31, 2024 | 3:41 PM

Share

ಕನ್ನಡ ನಾಡಿನಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ತೀರಾ ಕಡಿಮೆಯಾಗುತ್ತಿದೆ. ಪರಭಾಷಿಕರು ಬಿಡಿ ನಮ್ಮವರೇ ಕನ್ನಡ ಮಾತನಾಡೋಕೆ ಹಿಂದೆ ಮುಂದೆ ನೋಡ್ತಾರೆ. ಹೌದು ಕೆಲವರು ಕನ್ನಡ ಚೆನ್ನಾಗಿ ಗೊತ್ತಿದ್ರೂ ಕೂಡಾ ಶೋಕಿಗಾಗಿ ಇಂಗ್ಲೀಷ್‌ ಭಾಷೆಯನ್ನೇ ಮಾತನಾಡುತ್ತಾರೆ. ಇನ್ನೂ ಉದ್ಯೋಗವನ್ನರಸುತ್ತಾ ಕರ್ನಾಟಕಕ್ಕೆ ಬಂದು ಬದುಕು ಕಟ್ಟಿಕೊಂಡ ಅದೆಷ್ಟೋ ಪರಭಾಷಿಕರು ಕನ್ನಡ ಕಲಿಯುವ ಪ್ರಯತ್ನವನ್ನು ಕೂಡಾ ಮಾಡುತ್ತಿಲ್ಲ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಪರಭಾಷಿಕನೊಬ್ಬ 12 ವರ್ಷ ಬೆಂಗಳೂರಿನಲ್ಲಿದ್ದರೂ ನಾನ್ಯಾಕೆ ಕನ್ನಡ ಕಲಿಬೇಕು, ನನಗೆ ಕನ್ನಡ ಕಲಿಯುವ ಅವಶ್ಯಕತೆಯಿಲ್ಲ ಎಂದು ಸೊಕ್ಕಿನ ಮಾತುಗಳನ್ನಾಡಿದ್ದಾರೆ. ಈತನ ಈ ಮಾತಿಗೆ ಕನ್ನಡಿಗರು ಫುಲ್‌ ಗರಂ ಆಗಿದ್ದಾರೆ.

ಕನ್ನಡಿಗ ದೇವರಾಜ್‌ (sgowda79) ಎಂಬವರು ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ವ್ಯಕ್ತಿ ಹನ್ನೆರಡು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದಾನೆ. ಕನ್ನಡ ಕಲಿತಿಲ್ಲ, ಇವನಿಗೆ ಕನ್ನಡದ ಅವಶ್ಯಕತೆ ಇಲ್ಲವಂತೆ, ಕನ್ನಡಿಗರು ಮಾತ್ರ ಹಿಂದಿ ಕಲಿಯಬೇಕಂತೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಪರಭಾಷಿಕನೊಬ್ಬ ಕನ್ನಡ ನಾಡಿನಲ್ಲಿ ಇದ್ದುಕೊಂಡೇ ನನಗೆ ಕನ್ನಡ ಕಲಿಯುವ ಅವಶ್ಯಕತೆ ಇಲ್ಲ ಎಂದು ಹೇಳುತ್ತಿರುವ ದೃಶ್ಯವನ್ನು ಕಾಣಬಹುದು.

ಕನ್ನಡಿಗ ದೇವರಾಜ್‌ ಅವರು ಬೆಂಗಳೂರಿನಲ್ಲಿ ಸುಮಾರು 12 ವರ್ಷಗಳಿಂದ ವಾಸವಿರುವ ಪರಬಾಷಿಕನೊಬ್ಬನನ್ನು ಮಾತನಾಡಿಸಿದ್ದು, ಆ ಸಂದರ್ಭದಲ್ಲಿ ನಿಮಗೆ ಕನ್ನಡ ಬರಲ್ವಾ, ನೀವು ಕನ್ನಡ ಕಲಿಬೇಕು ಅಲ್ವಾ, ಎಲ್ಲಾ ಭಾಷೆ, ಸಂಸ್ಕೃತಿಗೆ ಗೌರವ ಕೊಡ್ಬೇಕಲ್ವಾ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಆ ವ್ಯಕ್ತಿ ನನಗೆ ಕೂಡಾ ಎಲ್ಲಾ ಭಾಷೆಗಳ ಮೇಲೆ ಗೌರವವಿದೆ, ಆದ್ರೆ ನನಗೆ ಕನ್ನಡ ಕಲಿಯುವ ಅವಶ್ಯಕತೆ ಇಲ್ಲ, ಕನ್ನಡ ಕಲಿಯಿರಿ ಎಂದು ನೀವು ಹೇಳಬೇಕಾಗಿಲ್ಲ, ಕನ್ನಡ ಕಲಿಯುವುದು ಬಿಡುವುದು ನನ್ನ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾನೆ.

ಇದನ್ನೂ ಓದಿ: ಹೋರಿ ದಾಳಿಯಿಂದ ತನ್ನ ಅಜ್ಜಿಯನ್ನು ಕಾಪಾಡಿದ ಧೈರ್ಯವಂತ ಬಾಲಕ

ಅಕ್ಟೋಬರ್‌ 29 ರಂದು ಹಂಚಿಕೊಳ್ಳಲಾದ ಈ ವಿಡಿಯೋ 46 ಸಾವಿರ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಪರಭಾಷಿಕರಿಗೆ ಕನ್ನಡ ಕಲಿಸುವ ಮುಂಚೆ ನಮ್ಮವರು ಕನ್ನಡ ಮಾತನಾಡ್ತಿದ್ದಾರಾ ನೋಡಿʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼತಪ್ಪು ನಮ್ಮದೆ ಪರಭಾಷಿಕರು ಬಂದಾಗ ಕನ್ನಡ ಮಾತನಾಡದೇ ಅವರ ಭಾಷೆಯಲ್ಲೇ ಮಾತನಾಡ್ತೀವಿ ಅಲ್ವಾʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅವನು ಕರ್ನಾಟಕದಲ್ಲಿ ಇರಲು ಯೋಗ್ಯನಲ್ಲ, ಅವನನ್ನು ಒದ್ದು ಹೊರಗಾಕಿʼ ಎಂದು ಕಿಡಿ ಕಾರಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:18 pm, Wed, 30 October 24

ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ